ಉತ್ತರ ಕನ್ನಡ: ದೇವರ ಕೋಣೆಯಲ್ಲಿ ಹಚ್ಚಿದ ದೀಪದಿಂದ ಮನೆಗೆ ಬೆಂಕಿ, ಹೊತ್ತಿ ಉರಿದ ಮನೆ!

Published : Aug 03, 2025, 08:48 AM ISTUpdated : Aug 03, 2025, 08:51 AM IST
Uttara kannada fire accident

ಸಾರಾಂಶ

ಉತ್ತರ ಕನ್ನಡ ಜಿಲ್ಲೆಯ ಕಾರವಾರದಲ್ಲಿ ದೇವರ ದೀಪದಿಂದ ಆಕಸ್ಮಿಕವಾಗಿ ಮನೆಗೆ ಬೆಂಕಿ ಹೊತ್ತಿಕೊಂಡು ಲಕ್ಷಾಂತರ ರೂಪಾಯಿ ಮೌಲ್ಯದ ಸೊತ್ತುಗಳು ಭಸ್ಮವಾಗಿವೆ. ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಉತ್ತರಕನ್ನಡ (ಆ.3): ದೇವರ ಮನೆಯಲ್ಲಿ ಹಚ್ಚಿದ ದೀಪದಿಂದ ಸಂಪೂರ್ಣ ಮನೆಯೇ ಸುಟ್ಟು ಭಸ್ಮವಾದ ದುರ್ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ನಂದನಗದ್ದಾದಲ್ಲಿ ಶನಿವಾರ ರಾತ್ರಿ ನಡೆದಿದೆ. ಶಾಂತರಾಮ ದತ್ತ ದೇಸಾಯಿ ಎಂಬವರಿಗೆ ಸೇರಿದ ಮನೆಯಲ್ಲಿ ನಡೆದಿರುವ ಅಗ್ನಿ ಅವಘಡ. ಬೆಂಕಿಯ ತೀವ್ರತೆಗೆ ಸಂಪೂರ್ಣ ಮನೆ ಧಗಧಗಿಸಿ ಹೊತ್ತಿ ಉರಿದು ಲಕ್ಷಾಂತರ ರೂಪಾಯಿ ಮೌಲ್ಯದ ಸೊತ್ತುಗಳು ಕರಗಿ ಭಸ್ಮವಾಗಿವೆ.

ಮೂಲಗಳ ಪ್ರಕಾರ, ಶಾಂತರಾಮ ದೇಸಾಯಿ ಅವರು ಶನಿವಾರ ಸಂಜೆ ದೇವರ ಪೂಜೆಗಾಗಿ ದೀಪ ಹಚ್ಚಿ ಮನೆಯಿಂದ ಹೊರಗೆ ತೆರಳಿದ್ದರು. ಈ ವೇಳೆ ದೀಪದಿಂದ ಉಂಟಾದ ಬೆಂಕಿಯ ಕಿಡಿ ಹತ್ತಿಕೊಂಡು ಕೆಲವೇ ಕ್ಷಣಗಳಲ್ಲಿ ಇಡೀ ಮನೆಗೆ ವ್ಯಾಪಿಸಿದೆ. ಮನೆಯಲ್ಲಿದ್ದ ಪೀಠೋಪಕರಣಗಳು, ದುಬಾರಿ ವಸ್ತುಗಳು, ದಾಖಲೆಗಳು ಸೇರಿದಂತೆ ಎಲ್ಲವೂ ಬೆಂಕಿಯ ಜ್ವಾಲೆಗೆ ಆಹುತಿಯಾಗಿವೆ. ನೆರೆಹೊರೆಯವರು ಬೆಂಕಿಯನ್ನು ಗಮನಿಸಿ ತಕ್ಷಣ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದಾರೆ.

ಕಾರವಾರ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ತಕ್ಷಣ ಧಾವಿಸಿ ಬೆಂಕಿಯನ್ನು ನಂದಿಸುವ ಪ್ರಯತ್ನ ನಡೆಸಿದರು. ಆದರೆ, ಅಷ್ಟರಲ್ಲಾಗಲೇ ಬೆಂಕಿಯ ತೀವ್ರತೆಯಿಂದಾಗಿ ಮನೆಯ ಒಳಗಿನ ಬಹುತೇಕ ವಸ್ತುಗಳು ಸುಟ್ಟುಹೋಗಿದ್ದವು. ಘಟನೆಯಿಂದ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲವಾದರೂ, ದೇಸಾಯಿ ಕುಟುಂಬಕ್ಕೆ ಭಾರೀ ಆರ್ಥಿಕ ನಷ್ಟವಾಗಿದೆ.

ಕಾರವಾರ ನಗರ ಠಾಣೆಯ ಪೊಲೀಸರು ಘಟನೆಯ ಕುರಿತು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಪ್ರಾಥಮಿಕ ತನಿಖೆಯಲ್ಲಿ ಬೆಂಕಿಗೆ ದೇವರ ದೀಪವೇ ಕಾರಣ ಎಂದು ತಿಳಿದುಬಂದಿದೆ.

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಬೆಂಗಳೂರಿನ ಬಾಡಿಗೆ ಮನೆಯಲ್ಲಿ ಕೊಳೆತ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆ
ಬೆಂಗಳೂರು ಅಪಾರ್ಟ್‌ಮೆಂಟ್‌ನ 16 ಕುಟುಂಬಗಳಿಗೆ ರೌಡಿಸಂ ದರ್ಶನ; ಮಾಟ-ಮಂತ್ರ ಮಾಡಿಸಿ ಕಿರುಕುಳ!