ತಾಯಿಯೊಂದಿಗೆ ಕುರಿ ಮೇಯಿಸಲು ಹೋಗಿದ್ದ ಬಾಲಕಿ; ಬಾವಿಗೆ ಬಿದ್ದು ದುರಂತ ಸಾವು!

Published : Aug 12, 2025, 12:00 PM ISTUpdated : Aug 12, 2025, 12:01 PM IST
Vijayapur news

ಸಾರಾಂಶ

ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನಲ್ಲಿ ಆಟವಾಡುತ್ತಿದ್ದ ಬಾಲಕಿ ಆಕಸ್ಮಿಕವಾಗಿ ಬಾವಿಗೆ ಬಿದ್ದು ಮೃತಪಟ್ಟಿದ್ದಾಳೆ. ತಡರಾತ್ರಿಯವರೆಗೆ ಕಾರ್ಯಾಚರಣೆ ನಡೆಸಿ ಅಗ್ನಿಶಾಮಕ ದಳದ ಸಿಬ್ಬಂದಿ ಶವವನ್ನು ಹೊರತೆಗೆದಿದ್ದಾರೆ. ಬಾವಿಯ ಸುತ್ತಲೂ ಸುರಕ್ಷತಾ ಕ್ರಮಗಳ ಕೊರತೆಯೇ ಘಟನೆಗೆ ಕಾರಣ ಎನ್ನಲಾಗಿದೆ.

ವಿಜಯಪುರ (ಆ.12): ಆಟವಾಡು ಹೋದ ಬಾಲಕಿ ಆಳವಾದ ಬಾವಿಯಲ್ಲಿ ಬಿದ್ದು ದಾರುಣವಾಗಿ ಮೃತಪಟ್ಟ ಘಟನೆ ವಿಜಯಪುರ ಜಿಲ್ಲೆಯ ಇಂಡಿ ಪಟ್ಟಣದ ಬಳಿಯ ಧನಸಿಂಗ್ (ಮೋನಪ್ಪ ನಗರ) ತಾಂಡಾದಲ್ಲಿ ಸೋಮವಾರ ಸಂಜೆ ಸಂಭವಿಸಿದೆ ನಡೆದಿದೆ.

8 ವರ್ಷದ ಬಾಲಕಿ ಅರ್ಚನಾ ರಾಠೋಡ ಮೃತ ಬಾಲಕಿ. ತಾಯಿಯೊಂದಿಗೆ ಕುರಿ ಮೇಯಿಸಲು ಹೋಗಿದ್ದ ಅರ್ಚನಾ, ಆಟವಾಡುವ ಉತ್ಸಾಹದಲ್ಲಿ ಸಮೀಪದ ಬಾವಿಯ ಬಳಿ ಹೋಗಿದ್ದಾಳೆ. ಆದರೆ ಆಕಸ್ಮಿಕವಾಗಿ ಕಾಲು ಜಾರಿ ಆಳವಾದ ಬಾವಿಯೊಳಗೆ ಬಿದ್ದಿದ್ದಾಳೆ. ಘಟನೆಯನ್ನು ಗಮನಿಸಿದ ತಾಯಿ ಗಾಬರಿ ಆತಂಕದಿಂದ ಮನೆಯವರಿಗೆ ತಿಳಿಸಿದ್ದಾಳೆ. ತಕ್ಷಣ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದಾರೆ. ಆದರೆ ಬಾಲಕಿ ಬಾವಿಗೆ ಬಿದ್ದು ತಕ್ಷಣಕ್ಕೆ ಸಹಾಯಕ್ಕೆ ದಾವಿಸಿಲ್ಲ. ಅಗ್ನಿಶಾಮಕ ಬರುವ ಹೊತ್ತಿಗೆ ರಾತ್ರಿಯಾಗಿದ್ದರಿಂದ ಕಾರ್ಯಾಚರಣೆ ಅಡಚಣೆಯಾಯಿತು. ಅಗ್ನಿಶಾಮಕ ದಳದ ಸಿಬ್ಬಂದಿ ತಡರಾತ್ರಿಯವರೆಗೆ ಕಾರ್ಯಾಚರಣೆ ನಡೆಸಿ, ಬಾಲಕಿಯ ಶವವನ್ನು ಬಾವಿಯಿಂದ ಕೊನೆಗೂ ಹೊರತೆಗೆದಿದ್ದಾರೆ.

ಈ ದುರಂತ ಘಟನೆಯಿಂದ ಮಗುವನ್ನು ಕಳೆದುಕೊಂಡ ಕುಟುಂಬಸ್ಥರ ಅಕ್ರಂದನ ಮುಗಿಲು ಮುಟ್ಟಿತು. ಘಟನೆ ಸಂಬಂಧ ಇಂಡಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬಾವಿಯ ಸುತ್ತಲು ಬೇಲಿ, ತಡೆಗೋಡೆ ಹಾಕದಿರುವುದು, ಸುರಕ್ಷತಾ ಕ್ರಮಗಳ ಕೊರತೆಯೇ ಈ ದುರ್ಘಟನೆಗೆ ಕಾರಣವಾಗಿರಬಹುದೆಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಈ ಘಟನೆಯಿಂದ ಗ್ರಾಮೀಣ ಭಾಗದಲ್ಲಿ ಮಕ್ಕಳ ಸುರಕ್ಷತೆಯ ಬಗ್ಗೆಆತಂಕ ಪಡುವಂತಾಗಿದೆ

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಬೆಂಗಳೂರು ಅಪಾರ್ಟ್‌ಮೆಂಟ್‌ನ 16 ಕುಟುಂಬಗಳಿಗೆ ರೌಡಿಸಂ ದರ್ಶನ; ಮಾಟ-ಮಂತ್ರ ಮಾಡಿಸಿ ಕಿರುಕುಳ!
ಕೆಲಸ ಇಲ್ಲದ ಗಂಡನಿಗೆ ಪತ್ನಿ ಶೀಲದ ಮೇಲೆ ಶಂಕೆ: ನಿದ್ರೆಯಲ್ಲಿದ್ದ ಮಗಳ ಕತ್ತು ಸೀಳಿದ ಪತಿ