ಹೊಸಕೋಟೆ: ಡೀಸೆಲ್‌ ಕಳವಿಗೆ ಬಂದವನ ಬಡಿದು ಕೊಂದ ಲಾರಿ ಚಾಲಕರು..!

Published : Jul 27, 2023, 12:46 PM IST
ಹೊಸಕೋಟೆ: ಡೀಸೆಲ್‌ ಕಳವಿಗೆ ಬಂದವನ ಬಡಿದು ಕೊಂದ ಲಾರಿ ಚಾಲಕರು..!

ಸಾರಾಂಶ

ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು 10 ಲಾರಿ ಚಾಲಕರನ್ನು ವಶಕ್ಕೆ ಪಡೆದಿದ್ದಾರೆ. ಮೃತ ವ್ಯಕ್ತಿಯ ಗುರುತು ಪತ್ತೆಯಾಗಿಲ್ಲ.

ಹೊಸಕೋಟೆ(ಜು.27):  ನಿಂತಿದ್ದ ಲಾರಿಗಳಲ್ಲಿ ಡೀಸೆಲ್‌ ಕದಿಯಲು ಹೋದ ವ್ಯಕ್ತಿಯೊಬ್ಬ ಚಾಲಕರ ಥಳಿತಕ್ಕೊಳಗಾಗಿ ಮೃತಪಟ್ಟ ಘಟನೆ ಬುಧವಾರ ನಡೆದಿದೆ. 

ಟ್ರಕ್‌ ಟರ್ಮಿನಲ್‌ ಬಳಿ ನಿಲ್ಲಿಸಿದ್ದ 15ಕ್ಕೂ ಹೆಚ್ಚಿನ ಲಾರಿಗಳಲ್ಲಿ ಮಂಗಳವಾರ ತಡರಾತ್ರಿ ಡೀಸೆಲ್‌ ಕಳವಿಗೆ ಮೂವರು ಬಂದಿದ್ದರು. ಈ ವೇಳೆ ಒಬ್ಬ ಚಾಲಕನಿಗೆ ಎಚ್ಚರವಾಗಿ ಹಾರ್ನ್‌ ಮಾಡುವ ಮೂಲಕ ಇತರೆ ಲಾರಿ ಚಾಲಕರನ್ನು ಎಚ್ಚರಿಸಿ, ಕಳ್ಳರನ್ನು ಹಿಡಿಯಲೆತ್ನಿಸಿದ್ದಾನೆ. ಆಗ ಕಳ್ಳರಲ್ಲಿ ಇಬ್ಬರು ತಪ್ಪಿಸಿಕೊಂಡು ಓಡಿದರೆ, ಒಬ್ಬ ಸಿಕ್ಕಿಹಾಕಿಕೊಂಡಿದ್ದಾನೆ. ಕೈಗೆ ಸಿಕ್ಕವನ ಮೇಲೆ 10ಕ್ಕೂ ಹೆಚ್ಚು ಚಾಲಕರು ಮನಸೋ ಇಚ್ಛೆ ಥಳಿಸಿದ್ದರಿಂದ ಆತ ಪ್ರಜ್ಞೆ ತಪ್ಪಿದ್ದಾನೆ. 

Bengaluru: ಹಳ್ಳಿ ಹುಡುಗಿ ಬೇಕು ಅಂತ ಮದ್ವೆಯಾಗಿ, ಆರೇ ತಿಂಗಳಿಗೆ ಕೊಲೆ ಮಾಡಿದ ಕಿತಾ'ಪತಿ'

ಬೆಳಗ್ಗೆ ಆಟೋದಲ್ಲಿ ಚಾಲಕರು ಆತನನ್ನು ಪೊಲೀಸ್‌ ಠಾಣೆ ಬಳಿ ಕರೆದೊಯ್ದಿದ್ದು, ಆತ ಪ್ರಜ್ಞೆ ತಪ್ಪಿ ನಿತ್ರಾಣಗೊಂಡಿದ್ದನ್ನು ಗಮನಿಸಿ ಆಸ್ಪತ್ರೆಗೆ ಸಾಗಿಸಿ ಚಿಕಿತ್ಸೆ ಕೊಡಲು ಯತ್ನಿಸಿದ್ದಾರೆ. ಅದಾಗಲೇ ಆ ವ್ಯಕ್ತಿ ಮೃತಪಟ್ಟಿದ್ದನೆನ್ನಲಾಗಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು 10 ಲಾರಿ ಚಾಲಕರನ್ನು ವಶಕ್ಕೆ ಪಡೆದಿದ್ದಾರೆ. ಮೃತ ವ್ಯಕ್ತಿಯ ಗುರುತು ಪತ್ತೆಯಾಗಿಲ್ಲ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಡ್ರಗ್ಸ್‌ ಸಪ್ಲೈಗೆ ಸ್ತ್ರೀಯರ ಬಳಕೆ ಅಧಿಕ! ಆಫ್ರಿಕಾ ಖಂಡದ ಸ್ತ್ರೀಯರೇ ಅಧಿಕ
ಗುಜರಾತ್‌ನಲ್ಲೊಂದು ನಿರ್ಭಯಾ ಪ್ರಕರಣ