ಭೀಕರ ರಸ್ತೆ ಅಪಘಾತದಲ್ಲಿ ಮಹಿಳೆ ಸಾವು; ಕುಟುಂಬಸ್ಥರ ಆಕ್ರಂದನ ಕಂಡು ಕಾರು ನಿಲ್ಲಿಸಿ ಸಾಂತ್ವನ ಹೇಳಿದ ಗೃಹ ಸಚಿವ

Published : Mar 23, 2024, 07:29 PM IST
ಭೀಕರ ರಸ್ತೆ ಅಪಘಾತದಲ್ಲಿ ಮಹಿಳೆ ಸಾವು; ಕುಟುಂಬಸ್ಥರ ಆಕ್ರಂದನ ಕಂಡು ಕಾರು ನಿಲ್ಲಿಸಿ ಸಾಂತ್ವನ ಹೇಳಿದ ಗೃಹ ಸಚಿವ

ಸಾರಾಂಶ

ತುಮಕೂರು: ಭೀಕರ ರಸ್ತೆ ಅಪಘಾತದಲ್ಲಿ ಮಹಿಳೆ ಸಾವು. ಜನಸಂದಣಿ ಕಂಡು ರಸ್ತೆ ಮಧ್ಯೆ ಕಾರು ನಿಲ್ಲಿಸಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಗೃಹ ಸಚಿವ ಪರಮೇಶ್ವರ. ಸ್ಥಳದಲ್ಲೇ ಇದ್ದು ಪೊಲಿಸರಿಗೆ ಕರೆ ಮಾಡಿ ಕರೆಸಿಕೊಂಡು ಸೂಕ್ತ ತನಿಖೆ ನಡೆಸುವಂತೆ ಸೂಚಿಸಿದ ಬಳಿಕವೇ ತೆರಳಿದರು.

ತುಮಕೂರು (ಮಾ.23): ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಲೋಕಮ್ಮನಹಳ್ಳಿ ಗೇಟ್ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿ ಮಹಿಳೆಯೋರ್ವಳು ಸ್ಥಳದಲ್ಲೇ ದುರ್ಮರಣಕ್ಕೀಡಾದ ಘಟನೆ ನಡೆದಿದೆ ಇದೇ ವೇಳೆ ತುರುವೇಕೆರೆಯಲ್ಲಿ ಚುನಾವಣಾ ಪ್ರಚಾರ ಸಭೆ ಮುಗಿಸಿ ತುಮಕೂರಿಗೆ ವಾಪಸ್ ಆಗುತ್ತಿದ್ದ ಗೃಹ ಸಚಿವ ಪರಮೇಶ್ವರ್, ರಸ್ತೆಯಲ್ಲಿ ಜನಸಂದಣಿ ನೋಡಿ, ತಕ್ಷಣ ಕಾರು ನಿಲ್ಲಿಸಿ ಮೃತ ಮಹಿಳೆ ಕುಟುಂಬಸ್ಥರ ನೋವಿಗೆ ಸ್ಪಂದಿಸಿ ಸಾಂತ್ವನ ಹೇಳಿದರು.

ಅಪಘಾತ ನಡೆದ ಸ್ಥಳದಿಂದಲೇ ತುರುವೇಕೆರೆ ಠಾಣೆ ಪೊಲೀಸರಿಗೆ ಕರೆ ಮಾಡಿ ಇನ್ಸ್‌ಪೆಕ್ಟರ್ ಲೋಹಿತ್ ಅವರನ್ನ ಸ್ಥಳಕ್ಕೆ ಕರೆಯಿಸಿಕೊಂಡರು. ಬಳಿಕ ಅಪಘಾತ ಘಟನೆ ಸಂಬಂಧ ಪ್ರಕರಣ ದಾಖಲಿಸಿಕೊಂಡು ಸೂಕ್ತ ತನಿಖೆ ನಡೆಸುವಂತೆ ಸೂಚನೆ ನೀಡಿದರು. ಈ ವೇಳೆ ಶಾಸಕ ಎಸ್‌ಆರ್ ಶ್ರೀನಿವಾಸ, ಪಾವಗಡ ಶಾಸಕ ವೆಂಕಟೇಶ್ ಸೇರಿದಂತೆ ಹಲವು ನಾಯಕರು ಗೃಹ ಸಚಿವರ ಜೊತೆಗಿದ್ದು ಸಾಥ್ ನೀಡಿದರು.

 

ಭೀಕರದ ರಸ್ತೆ ಅಪಘಾತದಲ್ಲಿ ನಟಿ ಅರುಂಧತಿಗೆ ಗಂಭೀರ ಗಾಯ, ವೆಂಟಿಲೇಟರ್ ನೆರವಿನಲ್ಲಿ ಚಿಕಿತ್ಸೆ!

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಕೊಪ್ಪಳ: ಹಸೆಮಣೆ ಏರಬೇಕಿದ್ದ ಜೋಡಿ ಮಸಣಕ್ಕೆ - ಪ್ರಿ-ವೆಡ್ಡಿಂಗ್ ಶೂಟಿಂಗ್ ಮುಗಿಸಿ ವಾಪಸಾಗುವಾಗ ಭೀಕರ ದುರಂತ!
ಪ್ರೆಗ್ನೆಂಟ್ ಮಾಡಿ ಗರ್ಭಪಾತ ಮಾಡಿಸಿದ, Sorry ಅಮ್ಮಾ ಸಾಯ್ತಿದ್ದೀನಿ: ಯುವತಿ ಆತ್ಮ*ಹತ್ಯೆ