
ತುಮಕೂರು (ಜ.6): ಅಕ್ರಮ ಸಂಬಂಧದ ಸುದ್ದಿ ಮಾಡಿದ್ದಕ್ಕೆ ಪತ್ರಕರ್ತನ ಮೇಲೆ ಮಾರಣಾಂತಿಕವಾಗಿ ಹಲ್ಲೆ ಮಾಡಿದ ಘಟನೆ ತುಮಕೂರು ಜಿಲ್ಲೆಯ ಪಾವಗಡ ಪಟ್ಟಣದ ಅಂಬೇಡ್ಕರ್ ವೃತ್ತದಲ್ಲಿ ನಡೆದಿದೆ.
ರಾಮಾಂಜಿನಪ್ಪ, ಹಲ್ಲೆಗೊಳಗಾದ ಪತ್ರಕರ್ತ. ನಾರಾಯಣ ರೆಡ್ಡಿ ಬಂಧಿತ ಆರೋಪಿ.'ಗಡಿನಾಡು ಮಿತ್ರ' ಸ್ಥಳೀಯ ಪತ್ರಿಕೆಯ ವರದಿಗಾರನಾಗಿರುವ ರಾಮಾಂಜಿನಪ್ಪ. ನಾರಾಯಣ ರೆಡ್ಡಿ ಎಂಬಾತನ ಅಕ್ರಮ ಸಂಬಂಧದ ಬಗ್ಗೆ ಇತ್ತೀಚೆಗೆ ಡಿಸೆಂಬರ್ 16ರಂದು ಪತ್ರಿಕೆಯಲ್ಲಿ ವರದಿ ಮಾಡಿದ್ದ. ಈ ಪ್ರಕರಣ ಸಂಬಂಧ ಪೊಲೀಸರು ನಾರಾಯಣ ರೆಡ್ಡಿಯನ್ನ ಬಂಧಿಸಿದ್ದರು.
ಇದನ್ನೂ ಓದಿ: ದಾನ ಕೇಳುವ ನೆಪದಲ್ಲಿ ಕಳ್ಳತನಕ್ಕೆ ಯತ್ನ; ಗ್ರಾಮಸ್ಥರಿಂದ ನಕಲಿ ಸ್ವಾಮೀಜಿಗಳಿಗೆ ಹಿಗ್ಗಾಮುಗ್ಗಾ ಗೂಸಾ!
ರಾತ್ರಿ ಪೊಲೀಸರು ನಾರಾಯಣ ರೆಡ್ಡಿಯನ್ನ ಬಂಧಿಸಿ ಕೊರಳಪಟ್ಟಿ ಹಿಡಿದು ಪೊಲೀಸ್ ವಾಹನದಲ್ಲಿ ಠಾಣೆಗೆ ಕರೆದೊಯ್ಯುತ್ತಿರುವ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದ ಪತ್ರಕರ್ತ. ಇದೇ ವಿಚಾರವಾಗಿ ಆರೋಪಿ ನಾರಾಯಣ ರೆಡ್ಡಿ ಕುಟುಂಬದ ಮಹಿಳೆಯರು ದ್ವೇಷ ಸಾಧಿಸಿ ಹಲ್ಲೆ ನಡೆಸಿದ್ದಾರೆ.
ಸದ್ಯ ಹಲ್ಲೆ ನಡೆಸಿದ ಮಹಿಳೆಯರ ವಿರುದ್ಧ ಪತ್ರಕರ್ತ ದೂರು ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪ್ರಕರಣ ಸಂಬಂಧ ವಿಚಾರಣೆ ನಡೆಸುತ್ತಿರುವ ಪೊಲೀಸರು.
ಇದೇ ವಿಚಾರಕ್ಕೆ ದ್ವೇಷ ಸಾಧಿಸಿ ನಾರಾಯಣ ರೆಡ್ಡಿ ಕುಟುಂಬದ ಮಹಿಳೆಯರು ಏಕಾಏಕಿ ಪತ್ರಕರ್ತನ ಮೇಲೆರಗಿ ಹಲ್ಲೆ ನಡೆಸಿದ್ದಾರೆ. ಹಲ್ಲೆ ನಡೆಸಿದ ಮಹಿಳೆಯರ ವಿರುದ್ಧ ಪಾವಗಡ ಪೊಲೀಸ್ ಠಾಣೆಯಲ್ಲಿ ಪತ್ರಕರ್ತ ದೂರು ದಾಖಲಿಸಿದ್ದಾರೆ. ಘಟನೆ ಸಂಬಂದ ವಿಚಾರಣೆ ಮುಂದುವರಿಸಿರುವ ಪೊಲೀಸರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ