ಸಾವಿನಲ್ಲೂ ಒಂದಾದ ಅವಳಿ ಸಹೋದರಿಯರು!

Published : Jul 05, 2021, 11:32 AM ISTUpdated : Jul 06, 2021, 11:31 AM IST
ಸಾವಿನಲ್ಲೂ ಒಂದಾದ ಅವಳಿ ಸಹೋದರಿಯರು!

ಸಾರಾಂಶ

* ಮನೆಯಲ್ಲೇ ನೇಣಿಗೆ ಶರಣಾದ ಅಕ್ಕ-ತಂಗಿ * ಹುಣಸನಹಳ್ಳಿ ಗ್ರಾಮದಲ್ಲಿ ಹೃದಯ ವಿದ್ರಾವಕ ಘಟನೆ * ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಹುಣಸನಹಳ್ಳಿ ಗ್ರಾಮ

ಮಂಡ್ಯ(ಜು.05): ಅವಳಿ ಮಕ್ಕಳೆಂದರೆ ಸಾಮಾನ್ಯವಾಗಿ ಎಲ್ಲಾ ಸಂದರ್ಭದಲ್ಲೂ ಒಟ್ಟಾಗಿರುತ್ತಾರೆ. ಬಹುತೇಕ ಅವಳಿ ಮಕ್ಕಳ ಒಟನಾಟ ಚೆನ್ನಾಗಿರುತ್ತದೆ ಹಾಗೂ ಇಷ್ಟಗಳೂ ಒಂದೇ ತೆರನಾಗಿರುತ್ತವೆ. ಆದರೀಗ ಮಂಡ್ಯ ಜಿಲ್ಲೆಯ ಅವಳಿ ಸಹೋದರಿಯರು ಒಟ್ಟಾಗಿ ನೇಣಿಗೆ ಶರಣಾಗಿರುವ ಹೃದಯ ವಿದ್ರಾವಕ ಘಟನೆ ಬೆಳಕಿಗೆ ಬಂದಿದೆ.

ಒಟ್ಟಿಗೆ ಹುಟ್ಟಿ, ಒಟ್ಟಿಗೆ ಬೆಳೆದ ಅವಳಿಗಳು 24ನೇ ಹುಟ್ಟುಹಬ್ಬದಂದೇ ದೂರವಾದರು!

ಹೌದು ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಹುಣಸನಹಳ್ಳಿ ಗ್ರಾಮದ ದೀಪಿಕಾ (19) ಮತ್ತು ದಿವ್ಯ(19) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿಗಳು. ಅಂತಿಮ‌ ವರ್ಷದ ಡಿಪ್ಲೊಮಾ‌ ಓದುತ್ತಿದ್ದ ಸಹೋದರಿಯರು ಚಿಕ್ಕಂದಿನಿಂದ ಅನ್ಯೋನ್ಯತೆಯಿಂದ ಇದ್ದರು. ಆದರೀಗ ಮನೆಯ ಬೇರೆ ಬೇರೆ ಕೊಠಡಿಯಲ್ಇ ನೇಣಿಗೆ ಶರಣಾಗಿದ್ದಾರೆ.

ಸದ್ಯ ಕುಟುಂಬಸ್ಥರು ಈ ಅವಳಿಗಳ ಒಟ್ಟಿಗೆ ಅಂತ್ಯಕ್ರಿಯೆ ನೆರವೇರಿಸಿದ್ದು, ಅರೆಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ರಾಮನಗರ: ರಸ್ತೆಗೆ ಕುರಿಗಳು ಅಡ್ಡಿ, ಹಾರ್ನ್ ಮಾಡಿದ್ದಕ್ಕೆ ಬಸ್ ಚಾಲಕನ ಮೇಲೆ ಗ್ರಾಮಸ್ಥರಿಂದ ಹಲ್ಲೆ!
ಬೆಂಗಳೂರು ವಿಜಯ್ ಗುರೂಜಿ ಗ್ಯಾಂಗ್ ಸಮೇತ ಅರೆಸ್ಟ್; ಟೆಕ್ಕಿಗೆ ಲೈಂಗಿಕ ಶಕ್ತಿ ಹೆಚ್ಚಿಸೋದಾಗಿ ₹40 ಲಕ್ಷ ವಂಚನೆ!