
ಹುಬ್ಬಳ್ಳಿ(ಸೆ.13): ಗ್ರಾಹಕರ ಸೋಗಿನಲ್ಲಿ ಪ್ರತಿಷ್ಠಿತ ಚಿನ್ನದ ಮಳಿಗೆಗಳಿಗೆ ಭೇಟಿ ನೀಡಿ, ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭವರಣಗಳನ್ನು ಎಗರಿಸುತ್ತಿದ್ದ ಇಬ್ಬರು ಚಾಲಾಕಿ ಕಳ್ಳರನ್ನ ಹುಬ್ಬಳ್ಳಿಯ ಶಹರ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಬಂಧಿತರನ್ನು ಧಾರವಾಡದ ವಿರಕ್ತಾನ ಕಟಗಿ ಹಾಗೂ ಗದಗನ ಶರತ ಶ್ರೀಕಾಂತ ಕಾರಂತ ಎಂದು ಗುರುತಿಸಲಾಗಿದೆ. ಬಂಧಿತರಿಂದ 3.98 ಲಕ್ಷ ಮೌಲ್ಯದ ಚಿನ್ನಾಭರಣ ಜಪ್ತಿ ಮಾಡಲಾಗಿದೆ. ಮೂರು ದಿನಗಳ ಹಿಂದೆ ಬಂಧಿತ ಖದೀಮರು ಹುಬ್ಬಳ್ಳಿಯ ಕೊಪ್ಪಿಕರ್ ರಸ್ತೆಯ ಕಲ್ಯಾಣ ಜುವೆಲರ್ಸ್ಗೆ ಭೇಟಿ ನೀಡಿದ್ದರು. ಮುಖಕ್ಕೆ ಮಾಸ್ಕ್ ಧರಿಸಿ ಗ್ರಾಹಕರ ಸೋಗಿನಲ್ಲಿ ಜುವೆಲರ್ಸ್ಗೆ ಬಂದ ಈ ಇಬ್ಬರು ಮೂರು ಲಕ್ಷದ ತೊಂಬತ್ತೆಂಟು ಸಾವಿರ ರು. ಮೌಲ್ಯದ ಆಭರಣಗಳನ್ನು ಎಗರಿಸಿ ಪರಾರಿಯಾಗಿದ್ದರು.
ಗುಂಡಿಕ್ಕಿ ಬಂಧಿಸಿದ್ದ ಸರಗಳ್ಳರಿಂದ 20 ಲಕ್ಷ ಮೌಲ್ಯದ ಆಭರಣ ವಶ
ಈ ಬಗ್ಗೆ ದೂರು ದಾಖಲಿಸಿಕೊಂಡಿದ್ದ ಹುಬ್ಬಳ್ಳಿಯ ಶಹರ ಠಾಣೆ ಪೊಲೀಸರು ತಕ್ಷಣವೇ ಕಾರ್ಯಪೃವತ್ತರಾಗಿ ಚಾಲಾಕಿ ಕಳ್ಳರನ್ನು ಇಬ್ಬರನ್ನ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕಳ್ಳತನದ ದೃಶ್ಯಗಳು ಜುವೆಲರ್ಸ್ ಶಾಪ್ನ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ