ಬಳ್ಳಾರಿ ಲಾಡ್ಜ್‌ನಲ್ಲಿದ್ದುಕೊಂಡು ಖೋಟಾ ನೋಟು ಪ್ರಿಂಟ್ ಮಾಡುತ್ತಿದ್ದ ಖದೀಮರ ಬಂಧನ

Published : Apr 14, 2024, 10:42 AM IST
ಬಳ್ಳಾರಿ ಲಾಡ್ಜ್‌ನಲ್ಲಿದ್ದುಕೊಂಡು ಖೋಟಾ ನೋಟು ಪ್ರಿಂಟ್ ಮಾಡುತ್ತಿದ್ದ ಖದೀಮರ ಬಂಧನ

ಸಾರಾಂಶ

ನಗರದ ಲಾಡ್ಜ್ ಒಂದರಲ್ಲಿ ರೂಂ ಬುಕ್ ಮಾಡಿ ಖೋಟಾ ನೋಟು ಪ್ರಿಂಟ್ ಮಾಡುತ್ತಿದ್ದ ಗ್ಯಾಂಗ್ ಮೇಲೆ ಬಳ್ಳಾರಿ ಗಾಂಧಿನಗರ ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ. ಅಶೋಕ್  ಮತ್ತು ಹರೀಶ್ ಕುಮಾರ್ ಬಂಧಿತ ಆರೋಪಿಗಳು

ಬಳ್ಳಾರಿ (ಏ.14):ನಗರದ ಲಾಡ್ಜ್ ಒಂದರಲ್ಲಿ ರೂಂ ಬುಕ್ ಮಾಡಿ ಖೋಟಾ ನೋಟು ಪ್ರಿಂಟ್ ಮಾಡುತ್ತಿದ್ದ ಗ್ಯಾಂಗ್ ಮೇಲೆ ಬಳ್ಳಾರಿ ಗಾಂಧಿನಗರ ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ.

ಅಶೋಕ್  ಮತ್ತು ಹರೀಶ್ ಕುಮಾರ್ ಬಂಧಿತ ಆರೋಪಿಗಳು. ಎ1 ಆರೋಪಿಯಾಗಿರುವ ಅಶೋಕ್ ಬ್ಯಾಂಕ್ ಆಫ್ ಬರೋಡಾದಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿದ್ದ. ಬ್ಯಾಂಕಿನಲ್ಲಿ ನೋಟು ಚಲಾವಣೆ ವಹಿವಾಟು ಅರಿತಿದ್ದ ಖದೀಮ, ಹರೀಶ್ ಜೊತೆಗೆ ಸೇರಿ ಖೋಟಾ ನೋಟು ಪ್ರಿಂಟ್ ಮಾಡಲು ಸ್ಕೆಚ್‌ ಆಗಿದ್ದ. ಅದಕ್ಕಾಗಿ ಬಳ್ಳಾರಿಯ ಕೋಲಾಚಲಂ ಕಾಂಪೌಂಡ್‌ ನಲ್ಲಿರುವ ಮೋಹನ್ ಲಾಡ್ಜ್‌ ನಲ್ಲಿ ಉಳಿದುಕೊಂಡು ಖೋಟಾ ನೋಟು ಪ್ರಿಂಟ್ ಮಾಡಲು ಮುಂದಾಗಿದ್ದರು.

ಮಗು ಮಾಡಿಕಕೊಳ್ಳುವ ವಿಚಾರಕ್ಕೆ ಗಂಡ-ಹೆಂಡತಿ ನಡುವೆ ಜಗಳ; ಕೊಲೆಯಲ್ಲಿ ಅಂತ್ಯ!

ಲೋಕಸಭಾ ಚುನಾವಣೆ ಹಿನ್ನೆಲೆ ನಕಲಿ ನೋಟುಗಳನ್ನು ಮಾರುಕಟ್ಟೆಗೆ ಬಿಡುವ ಪ್ಲಾನ್ ಮಾಡಿದ್ದ ಖದೀಮರು. ಈ ಬಗ್ಗೆ ಖಚಿತ ಮಾಹಿತಿ ಮೇರೆಗೆ ಸಿಪಿಐ ಸಿದ್ದರಾಮೇಶ್ವರ, ಪಿಎಸ್ಐ ಸೌಮ್ಯಾ ನೇತೃತ್ವದಲ್ಲಿ ನಡೆದ ಕಾರ್ಯಚರಣೆಯಲ್ಲಿ ಆರೋಪಿಗಳನ್ನು ಬಂದಿಸಲಾಗಿದೆ. ದಾಳಿ ವೇಳೆ ಲಾಡ್ಜ್ ರೂಂ ನಲ್ಲಿಟ್ಟಿದ್ದ ಝರಾಕ್ಸ್ ಕಲರ್ ಪ್ರಿಂಟ್ ಮಷಿನ್, ಸುಮಾರು 8000 ಮೌಲ್ಯದ ಖೋಟಾ ನೋಟುಗಳನ್ನು ವಶಕ್ಕೆ ಪೆಡದ ಪೊಲೀಸರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಕಬಡ್ಡಿ ಟೂರ್ನಿ ವೇಳೆಯಲ್ಲೇ ಪ್ಲೇಯರ್‌ ರಾಣಾ ಬಲ್ಚೌರಿಯಾ ಕೊ*ಲೆ!
ಪೊಲೀಸ್‌ ಚೆಕಿಂಗ್‌ ವೇಳೆ ಹೋಟೆಲ್‌ ಬಾಲ್ಕನಿಯಿಂದ ಹಾರಿದ ಬೆಂಗಳೂರು ಮಹಿಳೆ, ಸ್ಥಿತಿ ಗಂಭೀರ!