
ಬೆಂಗಳೂರು(ಡಿ.28): ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಅವರ ಹೆಸರಿನಲ್ಲಿ ಸಾಮಾಜಿಕ ಜಾಲತಾಣದ ಮೂಲಕ ವಂಚಿಸುತ್ತಿದ್ದ ಉತ್ತರ ಪ್ರದೇಶ ಮೂಲದ ಇಬ್ಬರನ್ನು ಕೇಂದ್ರ ವಿಭಾಗದ ಸೈಬರ್ ಕ್ರೈಂ ಪೊಲೀಸರು ಬಂಧಿಸಿದ್ದಾರೆ.
ಉತ್ತರ ಪ್ರದೇಶ ಮೂಲದ ಇಬ್ರಾಹಿಂ(36), ಮೊಹಮ್ಮದ್ ಶೋಕಿನ್(28) ಬಂಧಿತರು. ಆರೋಪಿಗಳಿಂದ ಐದು ಮೊಬೈಲ್, ಹತ್ತಕ್ಕೂ ಹೆಚ್ಚು ಸಿಮ್ಕಾರ್ಡ್, ಬ್ಯಾಂಕ್ ಪಾಸ್ ಪುಸ್ತಕಗಳನ್ನು ವಶಕ್ಕೆ ಪಡೆಯಲಾಗಿದೆ. ಆರೋಪಿಗಳು ಸಂತೋಷ್ ಅವರ ಹೆಸರಿನಲ್ಲಿ ನಕಲಿ ಫೇಸ್ಬುಕ್ ಖಾತೆ ತೆರೆದು, ಮೆಸೆಂಜರ್ ಮೂಲಕ ಸಂತೋಷ್ ಅವರ ಹೆಸರಿನಲ್ಲಿ ಹಣ ಸಂದಾಯ ಮಾಡುವಂತೆ ಅಜಿತ್ ಎಂಬುವರಿಗೆ ಸಂದೇಶ ಕಳುಹಿಸಿ, ಹಣ ಪಡೆದುಕೊಂಡಿದ್ದರು. ಇದೇ ರೀತಿ ಹಣ ಕೋರಿ ಹಲವರಿಗೆ ವಂಚಿಸಿದ್ದರು. ಈ ಬಗ್ಗೆ ಕೇಂದ್ರ ಸೈಬರ್ ಕ್ರೈಂ ಪೊಲೀಸರಿಗೆ ದೂರು ನೀಡಲಾಗಿತ್ತು.
32 ಲಕ್ಷ ಗ್ರಾಹಕರನ್ನು ವಂಚಿಸಿದ ಅಗ್ರಿಗೋಲ್ಡ್ನ 4109 ಕೋಟಿ ರು. ಆಸ್ತಿ ಜಪ್ತಿ
ಈ ಸಂಬಂಧ ಕಾರ್ಯಾಚರಣೆ ನಡೆಸಿದ ಪೊಲೀಸರು, ಬ್ಯಾಂಕ್ ಡಿಟೇಲ್ಸ್ ಹಾಗೂ ಪಿನ್ ನಂಬರ್ ಚೆಕ್ ಮಾಡಿದಾಗ ಆರೋಪಿಗಳ ಮೂಲ ಉತ್ತರ ಪ್ರದೇಶ ಎಂಬುದು ಗೊತ್ತಾಗಿದೆ. ಬಂಧಿಸಲು ತೆರಳಿದಾಗ ಸ್ಥಳೀಯರ ನೆರವಿನಿಂದ ತಂಡ ಮಾಸ್ಟರ್ ಮೈಂಡ್ ಲಿಯಾಖತ್ ಸೇರಿ ನಾಲ್ವರು ಪರಾರಿಯಾಗಿದ್ದು, ಪಿಯುಸಿ ವ್ಯಾಸಂಗ ಮಾಡಿರುವ ಲಿಯಾಖತ್, ಇಂಗ್ಲೀಷ್ನಲ್ಲಿ ಚಾಟಿಂಗ್ ಮಾಡುವುದನ್ನು ಕರಗತ ಮಾಡಿಕೊಂಡಿದ್ದಾನೆ. ತನ್ನ ಸ್ನೇಹಿತರ ಜತೆ ಸೇರಿಕೊಂಡು ಪ್ರಭಾವಿ ರಾಜಕಾರಣಿ, ಐಎಎಸ್, ಐಪಿಎಸ್ ಅಧಿಕಾರಿಗಳ ಹೆಸರಿನಲ್ಲಿ ವಂಚನೆ ಮಾಡುತ್ತಿದ್ದರು ಎಂದು ಪೊಲೀಸರು ಹೇಳಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ