ಬಾಗಲಕೋಟೆ ಪೋಲಿಸರ ಕಾರ್ಯಾಚರಣೆ: ಬೈಕ್ ಕದಿಯುತ್ತಿದ್ದ ಖತರ್ನಾಕ್ ಖದೀಮರ ಬಂಧನ

Published : Sep 10, 2023, 08:09 PM IST
ಬಾಗಲಕೋಟೆ ಪೋಲಿಸರ ಕಾರ್ಯಾಚರಣೆ: ಬೈಕ್ ಕದಿಯುತ್ತಿದ್ದ ಖತರ್ನಾಕ್ ಖದೀಮರ ಬಂಧನ

ಸಾರಾಂಶ

ಇತ್ತೀಚೆಗೆ ಬಾಗಲಕೋಟೆ ತಾಲ್ಲೂಕಿನ ಭಗವತಿ ಗ್ರಾಮದ ಮುತ್ತಪ್ಪ ಕಂಬಾರ ಎನ್ನುವವರ ಬೈಕ್ ಮನೆ ಮುಂದೆ ನಿಲ್ಲಿಸಿದ್ದಾಗಲೇ ಕಳ್ಳತನ ಆಗಿತ್ತು. ‌ಈ ಕುರಿತು ಮುತ್ತಪ್ಪ ಅವರಿಂದ ಬಾಗಲಕೋಟೆ ಗ್ರಾಮೀಣ ಠಾಣೆಯಲ್ಲಿ ದೂರು ದಾಖಲಾಗಿತ್ತು. 

ವರದಿ:- ಮಲ್ಲಿಕಾರ್ಜುನ ಹೊಸಮನಿ, ಏಷಿಯಾನೆಟ್ ಸುವರ್ಣ ನ್ಯೂಸ್, ಬಾಗಲಕೋಟೆ

ಬಾಗಲಕೋಟೆ(ಸೆ.10):  ಬೈಕ್ ಕದಿಯುತ್ತಿದ್ದ ಇಬ್ಬರು ಖತರ್ನಾಕ್ ಖದೀಮರನ್ನು ಹೆಡೆಮುರಿ ಕಟ್ಟುವಲ್ಲಿ ಬಾಗಲಕೋಟೆ ಗ್ರಾಮೀಣ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಬಾಗಲಕೋಟೆ ತಾಲ್ಲೂಕಿನ ಸಂಗಾಪುರ ಗ್ರಾಮದ 22 ವರ್ಷದ ಗೋಪಾಲ ಕುರಿ ಹಾಗೂ ಬಾಗಲಕೋಟೆ ತಾಲ್ಲೂಕಿನ ಬೇವೂರ ಗ್ರಾಮದ 25 ವರ್ಷದ ಸಚಿನ ಪಾಟೀಲ ಬಂಧಿತ ಆರೋಪಿತರು. 

ಬೈಕ್ ಖದೀಮರು ಕಳ್ಳತ‌ನ ಮಾಡಿದ್ದ ಸುಮಾರು 5,85,000 ಮೌಲ್ಯದ ಒಟ್ಟು 11 ಬೈಕ್ ಗಳನ್ನು ಪೊಲೀಸರು ಜಪ್ತಿ ಮಾಡಿದ್ದಾರೆ. ಇದರಲ್ಲಿ 5 ಹೆಚ್ ಎಫ್ ಡಿಲಕ್ಸ್ ಬೈಕ್, 4 ಸ್ಪ್ಲೆಂಡರ್ ಪ್ಲಸ್ ಬೈಕ್, 2 ಪಲ್ಸರ್ ಬೈಕ್ ಗಳಿವೆ. ಇತ್ತೀಚೆಗೆ ಬಾಗಲಕೋಟೆ ತಾಲ್ಲೂಕಿನ ಭಗವತಿ ಗ್ರಾಮದ ಮುತ್ತಪ್ಪ ಕಂಬಾರ ಎನ್ನುವವರ ಬೈಕ್ ಮನೆ ಮುಂದೆ ನಿಲ್ಲಿಸಿದ್ದಾಗಲೇ ಕಳ್ಳತನ ಆಗಿತ್ತು. ‌ಈ ಕುರಿತು ಮುತ್ತಪ್ಪ ಅವರಿಂದ ಬಾಗಲಕೋಟೆ ಗ್ರಾಮೀಣ ಠಾಣೆಯಲ್ಲಿ ದೂರು ದಾಖಲಾಗಿತ್ತು. 

ಬಾಗಲಕೋಟೆ: ಹೆಣ್ಣು ಮಕ್ಕಳು ಹೆತ್ತಿದ್ದಕ್ಕೆ ಬಾವಿಗೆ 3 ಮಕ್ಕಳ ಎಸೆದು ಕೊಂದು, ಬಾಣಂತಿ ಆತ್ಮಹತ್ಯೆ ಯತ್ನ

ಈ ಬಗ್ಗೆ ತನಿಖೆ ಕೈಗೊಂಡಿದ್ದ ಪೊಲೀಸರು ಸಂಶಯಾಸ್ಪದ ಮೇಲೆ ಆರೋಪಿಗಳಾದ ಗೋಪಾಲ್ ಹಾಗೂ ಸಚಿನ್ ವಿಚಾರಣೆ ನಡೆಸಿದಾಗ ಬೈಕ್ ಕಳ್ಳತನದ ಎಲ್ಲ ಪ್ರಕರಣಗಳು ಬೆಳಕಿಗೆ ಬಂದಿವೆ. ಇನ್ನು ಈ ಪ್ರಕರಣದಲ್ಲಿ ಕಾರ್ಯ ನಿರ್ವಹಿಸಿದ ಡಿವೈಎಸ್ಪಿ ಪಂಪನಗೌಡ, ಸಿಪಿಐ ಎಚ್.ಆರ್.ಪಾಟೀಲ, ಗ್ರಾಮೀಣ ಠಾಣೆಯ ಪಿಎಸ್ಐ ಶರಣಬಸಪ್ಪ ಸಂಗಳದ ಸೇರಿದಂತೆ ಬಾಗಲಕೋಟೆ ಗ್ರಾಮೀಣ ಠಾಣೆಯ ಪೊಲೀಸರ ಕಾರ್ಯಕ್ಕೆ ಅಪರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರಸನ್ನಕುಮಾರ್ ದೇಸಾಯಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಕ್ಯಾಸ್ಟ್ರೋಲ್ ಬ್ರಾಂಡ್‌ನ ನಕಲಿ ಎಂಜಿನ್ ಆಯಿಲ್ ಉತ್ಪಾದನೆ ಮಾಡುತ್ತಿದ್ದ ಘಟಕದ ಮೇಲೆ ದಾಳಿ
ಕೋಲಾರ: ಅಪ್ಪ- ಅಮ್ಮನ ವಿಚ್ಚೇದನಕ್ಕೆ ಮನನೊಂದು 26 ವರ್ಷದ ಪುತ್ರ ಆತ್ಮ*ಹತ್ಯೆ!