ಬೆಂಗಳೂರು: ಅದೃಷ್ಟ ಬರುತ್ತೆ ಅಂತ ಪ್ರಾಚೀನ ವಸ್ತು ಮಾರಲು ಯತ್ನ, ಇಬ್ಬರ ಬಂಧನ

Published : Dec 02, 2022, 08:00 AM IST
ಬೆಂಗಳೂರು: ಅದೃಷ್ಟ ಬರುತ್ತೆ ಅಂತ ಪ್ರಾಚೀನ ವಸ್ತು ಮಾರಲು ಯತ್ನ, ಇಬ್ಬರ ಬಂಧನ

ಸಾರಾಂಶ

ಬಂಧಿತ ಆರೋಪಿಗಳಿಂದ ಹಳೆಯ ಕಾಲದ ನಂದಿ ವಿಗ್ರಹ, ಬೈನಾಕುಲರ್‌, ಬಿಂದಿಗೆ ಹಾಗೂ ನಾಣ್ಯಗಳು ಸೇರಿ ಇತರೆ ವಸ್ತುಗಳನ್ನು ವಶಪಡಿಸಿಕೊಂಡ ಪೊಲೀಸರು 

ಬೆಂಗಳೂರು(ಡಿ.02):  ಮನೆಗೆ ಅದೃಷ್ಟದ ತರುತ್ತವೆ ಎಂದು ಹೇಳಿ ಪ್ರಾಚೀನ ಕಾಲದ ದೇವರ ವಿಗ್ರಹ ಸೇರಿದಂತೆ ಕೆಲ ವಸ್ತುಗಳ ಮಾರಾಟದ ನೆಪದಲ್ಲಿ ಸಾರ್ವಜನಿಕರಿಗೆ ವಂಚಿಸಲು ಯತ್ನಿಸಿದ್ದ ಇಬ್ಬರನ್ನು ವೈಯಾಲಿಕಾವಲ್‌ ಠಾಣೆ ಪೊಲೀಸರು ಸೆರೆ ಹಿಡಿದಿದ್ದಾರೆ.

ಚಿತ್ರದುರ್ಗ ಜಿಲ್ಲೆ ಮೊಳಕಾಲ್ಮೂರು ತಾಲೂಕಿನ ಭಾಗ್ಯಜ್ಯೋತಿ ನಗರದ ಮಹಮ್ಮದ್‌ ಮುಸ್ತಾಫ ಹಾಗೂ ಮೊಹಮ್ಮದ್‌ ಮುಬೀನ್‌ ಬಂಧಿತರಾಗಿದ್ದು, ಆರೋಪಿಗಳಿಂದ ಹಳೆಯ ಕಾಲದ ನಂದಿ ವಿಗ್ರಹ, ಬೈನಾಕುಲರ್‌, ಬಿಂದಿಗೆ ಹಾಗೂ ನಾಣ್ಯಗಳು ಸೇರಿ ಇತರೆ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಕೆಲ ದಿನಗಳ ಹಿಂದೆ ಆರೋಪಿಗಳು ಜನರಿಗೆ ವಂಚಿಸಲು ಯತ್ನಿಸಿರುವ ಬಗ್ಗೆ ಸಿಕ್ಕ ಮಾಹಿತಿ ಆಧರಿಸಿ ತನಿಖೆ ನಡೆಸಿ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಬೆಂಗಳೂರು: ಬೈಕ್‌ ಕಳ್ಳರ ಸುಳಿವು ಕೊಟ್ಟ ಜಿಪಿಎಸ್‌..!

ತಮ್ಮ ಬಳಿ ಇರುವ ಪ್ರಾಚೀನ ಕಾಲದ ನಂದಿ ವಿಗ್ರಹದಲ್ಲಿ ದಿವ್ಯ ಶಕ್ತಿ ಇದೆ. ಅಲ್ಲದೆ ನಾಣ್ಯಗಳು, ಬೈನಾಕುಲರ್‌ ಸೇರಿದಂತೆ ಈ ವಸ್ತುಗಳನ್ನು ಮನೆಯಲ್ಲಿ ಇಟ್ಟರೆ ಅದೃಷ್ಟಬರುತ್ತ ದೆ ಎಂದು ಹೇಳಿ ಜನರಿಂದ ಕೋಟ್ಯಂತರ ರುಪಾಯಿ ವಸೂಲಿ ಮಾಡಿ ಆರೋಪಿಗಳು ವಂಚಿಸಲು ಯತ್ನಿಸಿದ್ದರು ಎಂದು ಅಧಿಕಾರಿಗಳು ಹೇಳಿದ್ದಾರೆ.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಚಿಕ್ಕಮಗಳೂರು ಕಾಂಗ್ರೆಸ್ ಕಾರ್ಯಕರ್ತ ಗಣೇಶ್ ಗೌಡ ಹಂತಕರನ್ನು ಸುಮ್ಮನೆ ಬಿಡಲ್ಲ: ಸಿಎಂ ಡಿಸಿಎಂ
ಮಧುಗಿರಿ: ಕದ್ದ ಎಟಿಎಂ ಭಾರ ಇದೆ ಎಂದು ರಸ್ತೆಯಲ್ಲೇ ಬಿಟ್ಟು ಹೋದರು