ಮಂಗಳೂರು: ಬೆಂಗಳೂರಿಗೆ ಗಾಂಜಾ ಸಾಗಣೆ, ಇಬ್ಬರ ಬಂಧನ

Published : Feb 09, 2024, 04:00 AM IST
ಮಂಗಳೂರು: ಬೆಂಗಳೂರಿಗೆ ಗಾಂಜಾ ಸಾಗಣೆ, ಇಬ್ಬರ ಬಂಧನ

ಸಾರಾಂಶ

ಆರೋಪಿಗಳಾದ ಕೇರಳ ವಯನಾಡ್‌ನ ಅನೂಪ್‌ ಎಂ.ಎಸ್‌ ಮತ್ತು ಇರಿಟ್ಟಿಯ ಲತೀಫ್‌ ಕೆ.ವಿ ಬಂಧಿತರು. ಉಳ್ಳಾಲದ ತಲಪಾಡಿಯ ಪಿಲಿಕೂರಿನಲ್ಲಿ ಖಚಿತ ವರ್ತಮಾನ ಮೇರೆಗೆ ಸಿಸಿಬಿ ಇನ್‌ಸ್ಪೆಕ್ಟರ್‌ ಶ್ಯಾಮಸುಂದರ್‌ ತಂಡ ದಾಳಿ ನಡೆಸಿ ಬಂಧಿಸಿದೆ.

ಮಂಗಳೂರು(ಫೆ.09): ಒಡಿಶಾದಿಂದ ಮಂಗಳೂರಿಗೆ ಹಾಗೂ ಕೇರಳಕ್ಕೆ ಬೃಹತ್‌ ಪ್ರಮಾಣದಲ್ಲಿ ನಿಷೇಧಿತ ಮಾದಕ ವಸ್ತು ಗಾಂಜಾ ಸಾಗಾಟವನ್ನು ಸಿಸಿಬಿ ಪೊಲೀಸರು ಪತ್ತೆ ಮಾಡಿದ್ದು, ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರಿಂದ 28 ಲಕ್ಷ ರು.ಗಳ 120 ಕೇಜಿ ಗಾಂಜಾ ವಶಪಡಿಸಿದ್ದಾರೆ.

ಆರೋಪಿಗಳಾದ ಕೇರಳ ವಯನಾಡ್‌ನ ಅನೂಪ್‌ ಎಂ.ಎಸ್‌.(28) ಮತ್ತು ಇರಿಟ್ಟಿಯ ಲತೀಫ್‌ ಕೆ.ವಿ.(36) ಬಂಧಿತರು. ಉಳ್ಳಾಲದ ತಲಪಾಡಿಯ ಪಿಲಿಕೂರಿನಲ್ಲಿ ಖಚಿತ ವರ್ತಮಾನ ಮೇರೆಗೆ ಸಿಸಿಬಿ ಇನ್‌ಸ್ಪೆಕ್ಟರ್‌ ಶ್ಯಾಮಸುಂದರ್‌ ತಂಡ ದಾಳಿ ನಡೆಸಿ ಬಂಧಿಸಿದೆ.

ಕಲಬುರಗಿ ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ: ನಿತ್ಯ ಗುಟ್ಕಾ, ಸಿಗರೆಟ್‌ ಪೂರೈಕೆ!

ಆರೋಪಿಗಳು ಒಡಿಶಾದಿಂದ ಆಂಧ್ರಪ್ರದೇಶ, ಬೆಂಗಳೂರಿಗೆ ಗಾಂಜಾವನ್ನು ಕಾರಿನಲ್ಲಿರಿಸಿ ಸಾಗಾಟ ಮಾಡುತ್ತಿದ್ದರು. ಬೊಲೆರೋ ವಾಹನದ ಹಿಂಬದಿ ಡಿಕ್ಕಿಯಲ್ಲಿ ಪ್ರತ್ಯೇಕ ಕಬ್ಬಿಣದ ಬಾಕ್ಸ್‌ ಮಾಡಿಕೊಂಡು ಅದರಲ್ಲಿ ಗಾಂಜಾ ಬಚ್ಚಿಟ್ಟಿದ್ದರು. ಈ ಅಕ್ರಮ ಸಾಗಾಟದಲ್ಲಿ ಹಲವು ಮಂದಿ ಭಾಗಿಯಾಗಿರುವ ಶಂಕೆ ಇದ್ದು, ಆರೋಪಿಗಳ ಪತ್ತೆ ಕಾರ್ಯ ಮುಂದುವರಿದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ರಾಜಧಾನಿಯಲ್ಲಿ ಕೇವಲ 15 ದಿನದಲ್ಲಿ 807 ಜನ ನಾಪತ್ತೆ: ಮಕ್ಕಳು ಹದಿಹರೆಯದವರೇ ಹೆಚ್ಚು : ವರದಿ
ಜ್ಯೋತಿಷ್ಯ ಹೇಳು ಅಂದ್ರೆ ಆಂಟಿಯ ಹಿಂದೆ ಬಿದ್ದ..! ಪತ್ನಿಯ ಕಾ*ಮಕಾಂಡಕ್ಕೆ ಸಹೋದರನನ್ನು ಕಳೆದುಕೊಂಡ ಪತಿ!