ಬೆಂಗಳೂರು: ಪ್ರೇಮಿ ಜತೆ ಇರುವಾಗ್ಲೆ ಸಿಕ್ಕಿ ಬಿದ್ದ ಪತ್ನಿ, ಗಂಡನ ಕತ್ತು ಹಿಸುಕಿ ಕೊಂದ ಹೆಂಡ್ತಿ, ಪ್ರಿಯಕರ..!

Published : Aug 11, 2024, 09:53 AM IST
ಬೆಂಗಳೂರು: ಪ್ರೇಮಿ ಜತೆ ಇರುವಾಗ್ಲೆ ಸಿಕ್ಕಿ ಬಿದ್ದ ಪತ್ನಿ, ಗಂಡನ ಕತ್ತು ಹಿಸುಕಿ ಕೊಂದ ಹೆಂಡ್ತಿ, ಪ್ರಿಯಕರ..!

ಸಾರಾಂಶ

ಹಗದೂರು ನಿವಾಸಿ ತೇಜಸ್ವಿನಿ ಮತ್ತು ಈಕೆಯ ಪ್ರಿಯಕರ ಗಜೇಂದ್ರ ಬಂಧಿತರು. ಆರೋಪಿಗಳು ಆ.9ರಂದು ಮಧ್ಯಾಹ್ನ ಮಹೇಶ್ ನನ್ನು ಕೊಲೆಗೈದಿದ್ದರು. ಈ ಸಂಬಂಧ ಇಬ್ಬರನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಲಾಗಿದೆ.   

ಬೆಂಗಳೂರು(ಆ.11): ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಪತಿಯ ಕುತ್ತಿಗೆ ಹಿಸುಕಿ ಕೊಲೆಗೈದಿದ್ದ ಪತ್ನಿ ಹಾಗೂ ಈಕೆಯ ಪ್ರಿಯಕರನನ್ನು ವೈಟ್ ಫೀಲ್ಡ್ ಠಾಣೆ ಪೊಲೀಸರು ಬಂಧಿದ್ದಾರೆ. ಹಗದೂರು ನಿವಾಸಿ ತೇಜಸ್ವಿನಿ(28) ಮತ್ತು ಈಕೆಯ ಪ್ರಿಯಕರ ಗಜೇಂದ್ರ (36) ಬಂಧಿತರು. ಆರೋಪಿಗಳು ಆ.9ರಂದು ಮಧ್ಯಾಹ್ನ ಮಹೇಶ್ ನನ್ನು (36) ಕೊಲೆಗೈ ದಿದ್ದರು. ಈ ಸಂಬಂಧ ಇಬ್ಬರನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಕರಣದ ವಿವರ: 

ಹಾಸನ ಮೂಲದ ಮಹೇಶ್ ಮತ್ತು ತೇಜಸ್ವಿನಿ ಕೆಲ ವರ್ಷಗಳ ಹಿಂದೆ ಮದುವೆಯಾಗಿದ್ದರು. ವೈಟ್‌ಫೀಲ್ಡ್‌ನ ಹಗದೂರಿನ ಬಾಡಿಗೆ ಮನೆಯಲ್ಲಿ ನೆಲೆಸಿದ್ದರು. ಮಹೇಶ್ ಆಟೋ ಚಾಲಕನಾಗಿದ್ದರೆ, ಪತ್ನಿ ತೇಜಸ್ವಿನಿ ಖಾಸಗಿ ಫೈನಾನ್ಸ್‌ನಲ್ಲಿ ಸಾಲ ವಸೂಲಾತಿ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದಳು. ಆದರೆ, ಕಳೆದ ವರ್ಷದಿಂದ ದಂಪತಿ ನಡುವೆ ಕೌಟುಂಬಿಕ ವಿಚಾರಕ್ಕೆ ಗಲಾಟೆ ಆಗುತ್ತಿತ್ತು.

ಬೆಂಗಳೂರು: ಸ್ನೇಹಿತ ಜತೆ ಪತ್ನಿ ಅನೈತಿಕ ಸಂಬಂಧ, ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯ ಹತ್ಯೆ..!

ಈ ನಡುವೆ ತೇಜಸ್ವಿನಿ, ತಾನು ಕೆಲಸ ಮಾಡುವ ಫೈನಾನ್ಸ್ ಕಂಪನಿಯಲ್ಲಿ ಗಜೇಂದ್ರ ಎಂಬಾತನ ಜತೆಗೆ ಸಲುಗೆ ಬೆಳೆಸಿಕೊಂಡು ಬಳಿಕ ಅಕ್ರಮ ಸಂಬಂಧ ಇರಿಸಿಕೊಂಡಿ ದ್ದಳು. ಈ ವಿಚಾರ ಮಹೇಶ್ ಗೊತ್ತಾಗಿ ತೇಜಸ್ವಿಗೆ ಜಸ್ಟಿಗೆ ಬುದ್ದಿವಾದ ಹೇಳಿದ್ದಾನೆ. ಇನ್ನು ಮುಂದೆ ಆತನ ಸಹವಾಸಕ್ಕೆ ಹೋಗದಂತೆ ಎಚ್ಚರಿಕೆ ಸಹ ನೀಡಿದ್ದಾನೆ. ಗಜೇಂದ್ರನಿಗೂ ಕರೆ ಮಾಡಿ ಪತ್ನಿಯ ಸಹವಾಸಕ್ಕೆ ಬಾರದಂತೆ ಎಚ್ಚರಿಕೆ ನೀಡಿದ್ದ ಎನ್ನಲಾಗಿದೆ.

ಪ್ರಿಯಕರನ ಜತೆಗೆ ಸಿಕ್ಕಿಬಿದ್ದ ತೇಜಸ್ವಿನಿ: 

ಆ.9ರ ಬೆಳಗ್ಗೆ ಮಹೇಶ್ ಕೆಲಸಕ್ಕೆ ತೆರಳಿದ್ದ ವೇಳೆ ತೇಜಸ್ವಿನಿ ತನ್ನ ಪ್ರಿಯಕರ ಗಜೇಂದ್ರನನ್ನು ಮನೆಗೆ ಕರೆಸಿಕೊಂಡಿದ್ದಳು. ಮಧ್ಯಾಹ್ನ ಮಹೇಶ್ ಮನೆಗೆ ಬಂದಾಗ, , ಪತ್ನಿ ತೇಜಸ್ವಿನಿ ಜತೆ ಮಹೇಶ್ ಇರುವುದನ್ನು ನೋಡಿದ್ದಾನೆ. ಇದರಿಂದ ಕೋಪಗೊಂಡ ಮಹೇಶ್, ಏಕಾಏಕಿ ಪತ್ನಿ ಮೇಲೆ ಹಲ್ಲೆಗೆ ಮುಂದಾಗಿದ್ದಾನೆ. ಈ ವೇಳೆ ಬಿಡಿಸಲು ಮಧ್ಯೆ ಬಂದ ಗಜೇಂದ್ರನ ಮೇಲೂ ಮಹೇಶ್ ಹಲ್ಲೆ ಮಾಡಿದ್ದಾನೆ. ಬಳಿಕ ತೇಜಸ್ವಿನಿ ಮತ್ತು ಗಜೇಂದ್ರ ಇಬ್ಬರೂ ಸೇರಿಕೊಂಡು ಮಹೇಶ್‌ನ ಕುತ್ತಿಗೆ ಹಿಡಿದು ಉಸಿರುಗಟ್ಟಿಸಿ ಕೊಲೆ ಮಾಡಿದ್ದಾರೆ. ಬಳಿಕ ಗಜೇಂದ್ರ ಮನೆಯಿಂದ ಪರಾರಿ ಆಗಿದ್ದಾನೆ.

ಕುಸಿದು ಬಿದ್ದು ಪತಿ ಸಾವು ಎಂದು ನಾಟಕ!

ಬಳಿಕ ಆರೋಪಿ ತೇಜಸ್ವಿನಿ, ಪತಿ ಮಹೇಶ್ ಮನೆ ಯಲ್ಲಿ ಕುಸಿದು ಬಿದ್ದು ಮೃತಪಟ್ಟಿದ್ದಾರೆ ಎಂದು ಜೋರಾಗಿ ಚೀರಾಡುತ್ತಾ ಹೈಡ್ರಾಮಾ ಮಾಡಿ ದ್ದಾಳೆ. ಆದರೆ, ಸ್ಥಳೀಯರು ನೀಡಿದ ಮಾಹಿತಿ ಮೇರೆಗೆ ಪೊಲೀಸರು, ಆಕೆಯನ್ನು ವಶಕ್ಕೆ ಪಡೆದು ವಿಚಾರಣೆ ಮಾಡಿದಾಗ, ಪ್ರಿಯಕರನ ಜತೆ ಸೇರಿ ಪತಿಯನ್ನು ಕೊಲೆ ಮಾಡಿದ್ದಾಗಿ ತಪ್ಪೊಪ್ಪಿಕೊಂಡಿ ದ್ದಾಳೆ. ಬಳಿಕ ಪ್ರಿಯಕರನನ್ನೂ ಬಂಧಿಸಲಾಗಿದೆ. ಈ ಸಂಬಂಧ ವೈಟ್ ಫೀಲ್ಡ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಜಿರಳೆಗಳಿಗೆ 35 ದಿನ ಊಟ ಹಾಕಿದೆ, ಈಗ ನಿಜ ಬಣ್ಣ ಗೊತ್ತಾಯ್ತು: ಬಿಕ್ಕಿ ಬಿಕ್ಕಿ ಅತ್ತ ಮೊಹಮ್ಮದ್ ಜುನೈದ್
ಮುನಿಸು ಮರೆತರಾ ಕುಚಿಕೂ? ನಟ ದರ್ಶನ್ ಭೇಟಿಗೆ ಹೋದ ಧನ್ವೀರ್ ಗೌಡ.. ಅಲ್ಲಿ ಆಗಿದ್ದೇನು, ಮಾತಾಡಿದ್ದೇನು?