Udupi: 2 ಲಕ್ಷ ಮೌಲ್ಯದ ಬೆಲೆ ಬಾಳುವ ಚಿನ್ನ-ಬೆಳ್ಳಿ ಕದ್ದಿದ್ದ ಕಾರ್ಕಳ ಮನೆಗಳ್ಳರ ಬಂಧನ

Published : Dec 22, 2022, 06:22 PM IST
Udupi: 2 ಲಕ್ಷ ಮೌಲ್ಯದ ಬೆಲೆ ಬಾಳುವ ಚಿನ್ನ-ಬೆಳ್ಳಿ ಕದ್ದಿದ್ದ ಕಾರ್ಕಳ ಮನೆಗಳ್ಳರ ಬಂಧನ

ಸಾರಾಂಶ

ಕಾರ್ಕಳ ಗ್ರಾಮಾಂತರ ಠಾಣಾ ವ್ಯಾಪ್ತಿಯ ಕಲ್ಯಾ ಗ್ರಾಮದ ಉಷಾ ಜಗದೀಶ್ ಅಂಚನ್ ಅವರ ಮನೆ ಕಳ್ಳತನದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಬಂಟ್ವಾಳ ಅರಂಬೋಡಿ ನಿವಾಸಿ ಪ್ರಸಾದ್ ಪಚ್ಚು ಮತ್ತು ಆತನಗೆ ಸಹಕರಿಸಿದ ಕಲ್ಯಾ ನಿವಾಸಿ ಶಿಬಾ ಎಂದು ಗುರುತಿಸಲಾಗಿದೆ.

ಉಡುಪಿ (ಡಿ.22): ಕಾರ್ಕಳ ಗ್ರಾಮಾಂತರ ಠಾಣಾ ವ್ಯಾಪ್ತಿಯ ಕಲ್ಯಾ ಗ್ರಾಮದ ಉಷಾ ಜಗದೀಶ್ ಅಂಚನ್ ಅವರ ಮನೆ ಕಳ್ಳತನದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಬಂಟ್ವಾಳ ಅರಂಬೋಡಿ ನಿವಾಸಿ ಪ್ರಸಾದ್ ಪಚ್ಚು (34) ಮತ್ತು ಆತನಗೆ ಸಹಕರಿಸಿದ ಕಲ್ಯಾ ನಿವಾಸಿ ಶಿಬಾ (39) ಎಂದು ಗುರುತಿಸಲಾಗಿದೆ. ಡಿಸೆಂಬರ್ 3 ರಂದು ರಾತ್ರಿ 08-30 ರಿಂದ 10:00 ಗಂಟೆಯ ಮದ್ಯೆ ಕಾರ್ಕಳ ಗ್ರಾಮಾಂತರ ಠಾಣಾ ವ್ಯಾಪ್ತಿಯ ಕಲ್ಯಾ ಗ್ರಾಮದ ಉಷಾ ಜಗದೀಶ್‌ ಅಂಚನ್ ಎಂಬವರ ಮನೆಯ ಬಾಗಿಲನ್ನು ಯಾರೋ ಕಳ್ಳರು ಮುರಿದು ಒಳ ಪ್ರವೇಶಿಸಿ ಕೊಠಡಿಯಲ್ಲಿದ್ದ ಗೋದ್ರೇಜ್‌ನ ಬೀಗ ಮುರಿದು ಒಳಗಿದ್ದ ರೂ 9,75,000/-ಬೆಲೆಬಾಳುವ ಬಂಗಾರದ ಆಭರಣಗಳನ್ನು ಕಳವು ಮಾಡಿಕೊಂಡು ಹೋದ ಬಗ್ಗೆ ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ತನಿಖೆಯನ್ನು ಕೈಗೆತ್ತಿಕೊಂಡ ಕಾರ್ಕಳ ವೃತ್ತ ನಿರೀಕ್ಷಕರಾದ ಟಿ.ಡಿ ನಾಗರಾಜ್‌ರವರ ತಂಡವು ದಿನಾಂಕ 21/12/2022 ರಂದು ಪ್ರಕರಣದ ಆರೋಪಿ ಪ್ರಸಾದ್ @ ಪಚ್ಚು ಮತ್ತು ಆತನಿಗೆ ಕಳ್ಳತನ ಮಾಡಲು ಮಾಹಿತಿ ನೀಡಿ ಸಹಕರಿಸಿದ ಇನ್ನೊರ್ವ ಆರೋಪಿತೆ ಶಿಬಾ ಎಂಬಾಕೆಯನ್ನು ಬಂಧಿಸಿ, ಇಬ್ಬರು ಆರೋಪಿಗಳಿಂದ ಕಳ್ಳತನವಾಗಿದ್ದ ರೂ 9,75,000/- ರೂ ,ಮೌಲ್ಯದ 216 ಗ್ರಾಂ ಬಂಗಾರದ ಒಡವೆಗಳು ಮತ್ತು 77 ಗ್ರಾಂ ತೂಕದ ಬೆಳ್ಳಿಯ ಒಡವೆಗಳನ್ನು ವಶಪಡಿಸಲಾಗಿದೆ.

Udupi Crime: ವಜ್ರದುಂಗುರ, ಚಿನ್ನ ಕದಿಯುತ್ತಿದ್ದ ನಟೋರಿಯಸ್ ಕಳ್ಳನ ಸೆರೆ

ಆರೋಪಿ ಪ್ರಸಾದ್‌ ಪಚ್ಚು ಎಂಬವನ ಮೇಲೆ ಈ ಹಿಂದೆ ಬಂಟ್ವಾಳ ಗ್ರಾಮಾಂತರ, ಮೂಡಬಿದ್ರಿ, ಕಾರ್ಕಳ ನಗರ ಠಾಣೆಗಳಲ್ಲಿ ಕಳ್ಳತನ ಪ್ರಕರಣಗಳು ಮತ್ತು ಮೂಡಬಿದ್ರೆ ಠಾಣೆಯಲ್ಲಿ ಸುದರ್ಶನ ಜೈನ್‌ ಎಂಬವರ ಕೊಲೆ ಹಾಗೂ ವೇಣೂರು ಠಾಣಾ ವ್ಯಾಪ್ತಿಯಲ್ಲಿ ಫೋಕ್ಸೋ ಪ್ರಕರಣಗಳು ದಾಖಲಾಗಿದ್ದವು. ಆರೋಪಿತರನ್ನು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

Udupi: ಕುಖ್ಯಾತ ಕಳ್ಳನ ಬಂಧನ, 7 ಲಕ್ಷ ಮೌಲ್ಯದ ಸ್ವತ್ತು ವಶ

ಜಿಲ್ಲಾ ಪೊಲೀಸ್‌ ಅಧೀಕ್ಷಕರಾದ ಅಕ್ಷಯ ಹಾಕೆ ಮಚ್ಚೀಂದ್ರ, ಐಪಿಎಸ್‌, ಹೆಚ್ಚುವರಿ ಪೊಲೀಸ್‌ ಅಧೀಕ್ಷಕರಾದ ಸಿದ್ದಲಿಂಗಪ್ಪ,ರವರ ನಿರ್ದೇಶನದಂತೆ ಕಾರ್ಕಳ ಉಪವೀಬಾಗದ ಡಿ.ವೈ,ಎಸ್‌.ಪಿ ವಿಜಯಪ್ರಸಾದ್‌ ರವರ ಮಾರ್ಗದರ್ಶನದಲ್ಲಿ, ಕಾರ್ಕಳ ವೃತ್ತ ನಿರೀಕ್ಷಕರಾದ  ಟಿ.ಡಿ ನಾಗರಾಜ್‌ ರವರ ನೇತೃತ್ವದಲ್ಲಿ ಕಾರ್ಕಳ ಗ್ರಾಮಾಂತರ ಠಾಣಾ ಪಿಎಸ್‌ಐ  ತೇಜಸ್ವಿ ಟಿ ಐ ಮತ್ತು ಸಿಬ್ಬಂದಿಯವರಾದ ಗಿರೀಶ್‌, ಪ್ರಶಾಂತ್‌, ವಿಶ್ವನಾಥ್‌, ಸುಂದರ್‌, ವಿದ್ಯಾ, ಗಣೇಶ್‌ ರೆಡ್ಡಿ, ರುಕ್ಮಿಣಿ, ಶ್ಯಾಮ್‌, ಮಹಂತೇಶ, ಈರಣ್ಣ, ಆಶೋಕ್‌ ಪಡುಬಿದ್ರೆ ಮತ್ತು ಸತೀಶ್‌ ಪತ್ತೆ ಕಾರ್ಯದಲ್ಲಿ ಪಾಲ್ಗೊಂಡಿರುತ್ತಾರೆ. ಹಾಗೂ ಎಸ್‌.ಪಿ ರವರ ಕಚೇರಿಯ ಸಿಬ್ಬಂದಿಯವರಾದ ಶಿವಾನಂದ ಹಾಗೂ ದಿನೇಶ್‌ರವರು ಸಹಕರಿಸಿರುತ್ತಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಬಾಲಿವುಡ್ ನಿರ್ದೇಶಕ ವಿಕ್ರಂ ಭಟ್, ಪತ್ನಿ ಶ್ವೇತಾಂಬರಿ ಭಟ್ ಬಂಧನ; ಅಂತಿಂಥ ವಂಚನೆ ಕೇಸಲ್ಲ ಇದು ಅಂತೀರಾ?!
ಕೊಪ್ಪಳ: ಹಸೆಮಣೆ ಏರಬೇಕಿದ್ದ ಜೋಡಿ ಮಸಣಕ್ಕೆ - ಪ್ರಿ-ವೆಡ್ಡಿಂಗ್ ಶೂಟಿಂಗ್ ಮುಗಿಸಿ ವಾಪಸಾಗುವಾಗ ಭೀಕರ ದುರಂತ!