ಬೆಂಗಳೂರು: ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿ ಪರಾರಿಯಾಗುತ್ತಿದ್ದ ಖರ್ತನಾಕ್‌ ಕಳ್ಳರ ಬಂಧನ

Published : Aug 14, 2022, 12:02 PM IST
ಬೆಂಗಳೂರು: ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿ ಪರಾರಿಯಾಗುತ್ತಿದ್ದ ಖರ್ತನಾಕ್‌ ಕಳ್ಳರ ಬಂಧನ

ಸಾರಾಂಶ

ಮದ್ಯದ ನಶೆಯಲ್ಲಿ ಯಾವ ವಾಹನ ಕಂಡರೂ ಕ್ಷಣಮಾತ್ರದಲ್ಲಿ ಎಗರಿಸಿ ಪರಾರಿಯಾಗುತ್ತಿದ್ದ ಖದೀಮರು  

ಬೆಂಗಳೂರು(ಆ.14):  ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿ ಬೈಕು, ಕಾರು, ಆಟೋ ಏನೇ ಆಗಲಿ ಕ್ಷಣಮಾತ್ರದಲ್ಲಿ ಕದ್ದು ಎಸ್ಕೇಪ್ ಆಗುತ್ತಿದ್ದ ಇಬ್ಬರು ಆರೋಪಿಗಳನ್ನ ಹುಳಿಮಾವು ಠಾಣಾ ಪೊಲೀಸರು ಬಂಧಿಸಿದ್ದಾರೆ. ನದೀಂ ಅಹಮದ್ ಹಾಗೂ ಗುಲಾಂ ಹುಸೇನ್ ಬಂಧಿತ ಆರೋಪಿಗಳಾಗಿದ್ದಾರೆ. ಬಂಧಿತ ಖದೀಮರು ಮದ್ಯದ ನಶೆಯಲ್ಲಿ ಯಾವ ವಾಹನ ಕಂಡರೂ ಕ್ಷಣಮಾತ್ರದಲ್ಲಿ ಎಗರಿಸಿ ಪರಾರಿಯಾಗುತ್ತಿದ್ದರು.  

ಕದ್ದ ವಾಹನಗಳ ನಂಬರ್ ಪ್ಲೇಟ್ ಬದಲಿಸಿ ಎಷ್ಟು ಸಿಕ್ರೆ ಅಷ್ಟಕ್ಕೆ ಮಾರಾಟ ಮಾಡುತ್ತಿದ್ದರು. ಕೆಲವೊಂದು ಸಲ ಕದ್ದ ವಾಹನಗಳನ್ನ ಕೊಳ್ಳೋರ ಜೊತೆ ಸಂಚಾರಿ ಪೊಲೀಸರಿಗೂ ಯಾಮಾರಿಸುತ್ತಿದ್ದರು. 

ಸ್ನೇಹಿತರ ಜೊತೆ ಸೇರಿ ಕುಡಿದು ರೆಸ್ಟೋರೆಂಟ್‌ನಲ್ಲಿ ಗಲಾಟೆ: ಗಗನಸಖಿಯ ಬಂಧನ

ಬಂಧಿತ ಆರೋಪಿಗಳು ಎಲೆಕ್ಟ್ರಾನಿಕ್ ಸಿಟಿ, ಬನ್ನೇರುಘಟ್ಟ, ಹುಳಿಮಾವು, ಚಂದ್ರಾಲೇಔಟ್ ವ್ಯಾಪ್ತಿಯಲ್ಲಿ ವಾಹನಗಳನ್ನ ಕಳ್ಳತನ ಮಾಡುತ್ತಿದ್ದರು. ಜೈಲಿಗೆ ಹೋಗಿ‌ ಬಂದರೂ ಈ ಖದೀಮರು ಮತ್ತದೇ ಕೃತ್ಯ ಮುಂದುವರೆಸಿದ್ದರು. ಬಂಧಿತರಿಂದ 2 ಆಟೋ, 1 ಕಾರು 6 ಬೈಕುಗಳನ್ನ ಪೊಲೀಸರು ಜಪ್ತಿ ಮಾಡಿಕೊಂಡಿದ್ದಾರೆ. ಮತ್ತೋರ್ವ ಆರೋಪಿಗಾಗಿ ಪೊಲೀಸರು ಜಾಲ ಬೀಸಿದ್ದಾರೆ. 
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಬೆಂಗಳೂರು ವಿಜಯ್ ಗುರೂಜಿ ಗ್ಯಾಂಗ್ ಸಮೇತ ಅರೆಸ್ಟ್; ಟೆಕ್ಕಿಗೆ ಲೈಂಗಿಕ ಶಕ್ತಿ ಹೆಚ್ಚಿಸೋದಾಗಿ ₹40 ಲಕ್ಷ ವಂಚನೆ!
ಶಾಲಾ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಆರೋಪ: ಶಿಕ್ಷಕನಿಗೆ ಪೋಷಕರಿಂದ ಧರ್ಮದೇಟು!