
ಮಡಿಕೇರಿ(ನ.23): ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಭೋಸರಾಜು ಅವರ ಆಪ್ತ ಸಹಾಯಕರು ಎಂದು ಹೇಳಿಕೊಂಡು ಸರ್ಕಾರಿ ಅಧಿಕಾರಿಯೊಬ್ಬರಿಂದ ಹಣ ಪಡೆದು ವಂಚಿಸಿದ್ದ ಆರೋಪಿಗಳಿಬ್ಬರನ್ನು ಬಂಧಿಸಲಾಗಿದೆ.
ಮೈಸೂರು ನಿವಾಸಿಗಳಾದ ರಘುನಾಥ (34) ಮತ್ತು ಶಿವಮೂರ್ತಿ (35) ಬಂಧಿತರು. ಕುಶಾಲನಗರ ತಾಲೂಕಿನ ಕಂದಾಯ ನಿರೀಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿರುವ ಎಚ್.ಎನ್. ಸಂತೋಷ್ ಎಂಬುವರ ಮೊಬೈಲ್ ಗೆ ನ.19 ರಂದು ರಾತ್ರಿ 9 ಗಂಟೆ ಸಮಯದಲ್ಲಿ ಇವರು ಕರೆ ಮಾಡಿ, ತಾವು ಸಚಿವರ ಆಪ್ತ ಸಹಾಯಕರು. ತಮಗೆ ತುರ್ತಾಗಿ 20 ಸಾವಿರ ರೂ. ಹಣದ ಅವಶ್ಯಕತೆಯಿದ್ದು, ಗೂಗಲ್ ಪೇ ಮೂಲಕ ಕಳುಹಿಸಿಕೊಡು. ಹಣವನ್ನು ಆದಷ್ಟು ಬೇಗ ಹಿಂತಿರುಗಿಸುತ್ತೇವೆ ಎಂದು ಹೇಳಿದ್ದರು.
ಪತ್ನಿಯ ಶೀಲ ಶಂಕಿಸಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಪತಿರಾಯ!
ಅವರ ಮಾತನ್ನು ನಂಬಿದ ಕಂದಾಯ ನಿರೀಕ್ಷಕ ಸಂತೋಷ್, 20 ಸಾವಿರವನ್ನು ಗೂಗಲ್ ಪೇ ಮೂಲಕ ಕಳುಹಿಸಿದ್ದರು. ಮರುದಿನ ಹಣದ ವಿಚಾರವಾಗಿ ಸಂತೋಷ್ ಅವರು ಸಚಿವರ ಕಚೇರಿಯಲ್ಲಿ ಪ್ರಸ್ತಾಪಿಸಿದಾಗ ಹಣ ಪಡೆದವರ ಬಗ್ಗೆ ಯಾವುದೇ ಮಾಹಿತಿ ಇಲ್ಲ ಎಂದಿದ್ದರು. ಬಳಿಕ, ತಾವು ವಂಚನೆಗೊಳಗಾಗಿರುವುದನ್ನು ಅರಿತ ಅಧಿಕಾರಿ ಸಂತೋಷ್, ಪೊಲೀಸರಿಗೆ ದೂರು ದಾಖಲಿಸಿದ್ದರು. ಪ್ರಕರಣದ ತನಿಖೆ ನಡೆಸಿದ ಪೊಲೀಸರು, ಆರೋಪಿಗಳನ್ನು ಬಂಧಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ