
ಬೆಳ್ತಂಗಡಿ (ಡಿ.8): ಅಯ್ಯಪ್ಪ ಮಾಲೆ ಧರಿಸಿ ಜನರಿಂದ ದೇಣಿಗೆ ಸಂಗ್ರಹಿಸುವ ಮೂಲಕ ವಂಚಿಸುತ್ತಿದ್ದ ನಕಲಿ ಅಯ್ಯಪ್ಪ ಮಾಲಾಧಾರಿಗಳನ್ನು ಸಾರ್ವಜನಿಕರು ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ನಿಡ್ಲೆ ಗ್ರಾಮದಲ್ಲಿ ನಡೆದಿದೆ.
ಇಬ್ಬರು ಯುವಕರಿಂದ ವಂಚನೆ. ಬೆಂಗಳೂರು ಮೂಲದ ಸ್ವಾಮಿ ವಿವೇಕಾನಂದ ಸೊಷಿಯಲ್ ಸರ್ವಿಸ್ ಟ್ರಸ್ಟ್ (ರಿ) ಹೆಸರಿನಲ್ಲಿ ವಂಚಿಸುತ್ತಿದ್ದ ಆರೋಪಿಗಳು. ಈಗಾಗಲೇ ಹಲವು ಜನರಿಂದ ದೇಣಿಗೆ ಸಂಗ್ರಹಿಸಿದ್ದರು. ನಿನ್ನೆ ನಿಡ್ಲೆ ಗ್ರಾಮದ ಧನುಷ್ ಎಂಬುವವರಲ್ಲಿ ದೇಣಿಗೆ ಕೇಳಿದಾಗ ಅನುಮಾನಗೊಂಡಿರುವ ಧನುಷ್ ಆರೋಪಿಗಳು ನಡೆಸುತ್ತಿರುವ ಟ್ರಸ್ಟ್ ಬಗ್ಗೆ ಮಾಹಿತಿ ಕೇಳಿದ್ದಾನೆ. ಸಂಸ್ಥೆಯದ್ದೆಂದು ಹೇಳಲಾದ ಮೊಬೈಲ್ ನಂಬರ್ಗೆ ಕರೆ ಮಾಡಿ ವಿಚಾರಣೆ ನಡೆಸಿದ್ದ ಧನುಷ್ ಈ ವೇಳೆ ಬಯಲಾದ ಆರೋಪಿಗಳ ಕೃತ್ಯ.
ಆನ್ಲೈನ್ನಲ್ಲಿ ಹಣ ವರ್ಗಾಯಿಸುವೆ ಎಂದು ನಂಬಿಸಿ ₹50,000 ಟೋಪಿ!
ಆ ಸಂಸ್ಥೆಯವರು ಯಾರನ್ನೂ ಸಾರ್ವಜನಿಕರಿಂದ ದೇಣಿಗೆ ಸಂಗ್ರಹಿಸಲು ಕಳಿಸಿಲ್ಲವೆಂದು ಧನುಷ್ ಕರೆಮಾಡಿದಾಗ ಸ್ಪಷ್ಟಪಡಿಸಿದ್ದಾರೆ. ಇದರಿಂದ ಅನುಮಾನಗೊಂಡು ಇನ್ನಷ್ಟು ಪ್ರಶ್ನೆ ಮಾಡಿರುವ ಯುವಕ. ಆರೋಪಿಗಳು ನಕಲಿ ಟ್ರಸ್ಟ್ ಮೂಲಕ ದೇಣಿಗೆ ಸಂಗ್ರಹಿಸುತ್ತಿರುವ ಕೃತ್ಯ ಬಯಲಾಗಿದೆ. ಸಾರ್ವಜನಿಕರು ಪೊಲೀಸರಿಗೆ ಕರೆ ಮಾಡಿ ಸ್ಥಳಕ್ಕೆ ಕರೆಸಿಕೊಂಡು ಆರೋಪಿಗಳನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ. ಯುವಕರನ್ನು ವಶಕ್ಕೆ ಪಡೆದುಕೊಂಡು ಸದ್ಯ ವಂಚನೆ ಕೇಸ್ ಸಂಬಂಧ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ವಿಚಾರಣೆ ಮುಂದುವರಿಸಿರುವ ಪೊಲೀಸರು.
ರಾಜ್ಯದ ಪ್ರಪ್ರಥಮ ವಿಧಾನಸಭಾ ಶಾಸಕರ ಕುಟುಂಬಕ್ಕೆ ತುತ್ತು ಅನ್ನಕ್ಕೂ ಗತಿಯಿಲ್ಲ: ಸರಳ್ಳತನಕ್ಕಿಳಿದ ಮೊಮ್ಮಗ
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ