ರಾಯಚೂರು: ಬೃಹತ್ ಕಲ್ಲುಬಂಡೆ ಉರುಳಿಬಿದ್ದು ಮಕ್ಕಳಿಬ್ಬರು ದಾರುಣ ಸಾವು

Published : Oct 15, 2024, 04:50 PM IST
ರಾಯಚೂರು: ಬೃಹತ್ ಕಲ್ಲುಬಂಡೆ ಉರುಳಿಬಿದ್ದು ಮಕ್ಕಳಿಬ್ಬರು ದಾರುಣ ಸಾವು

ಸಾರಾಂಶ

ಬೃಹತ್ ಗಾತ್ರದ ಕಲ್ಲು ಉರುಳಿಬಿದ್ದು ಇಬ್ಬರು ಮಕ್ಕಳು ದಾರುಣವಾಗಿ ಮೃತಪಟ್ಟ ಘಟನೆ ರಾಯಚೂರು ಜಿಲ್ಲೆಯ ಲಿಂಗಸೂಗೂರು ತಾಲೂಕಿನ ಗೌಡೂರು ತಾಂಡದಲ್ಲಿ ನಡೆದಿದೆ.

ರಾಯಚೂರು (ಅ.15): ಬೃಹತ್ ಗಾತ್ರದ ಕಲ್ಲು ಉರುಳಿಬಿದ್ದು ಇಬ್ಬರು ಮಕ್ಕಳು ದಾರುಣವಾಗಿ ಮೃತಪಟ್ಟ ಘಟನೆ ರಾಯಚೂರು ಜಿಲ್ಲೆಯ ಲಿಂಗಸೂಗೂರು ತಾಲೂಕಿನ ಗೌಡೂರು ತಾಂಡದಲ್ಲಿ ನಡೆದಿದೆ.

ದುರಂತದಲ್ಲಿ ಮಂಜುನಾಥ, ವೈಶಾಲಿ ಮಕ್ಕಳು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಇನ್ನೋರ್ವ ರಘು(8) ಬಾಲಕನ ಕಾಲು ಮುರಿದಿದ್ದು, ಗಂಭೀರವಾಗಿ ಗಾಯಗೊಂಡಿದ್ದಾನೆ. ಗಾಯಾಳು ಬಾಲಕನನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ರಾಯಚೂರು: ಕಾಲುವೆಯಲ್ಲಿ ಬಟ್ಟೆ ತೊಳೆಯಲು ಹೋಗಿದ್ದ ತಾಯಿ-ಮಗಳು ನಾಪತ್ತೆ

ಮೂವರು ವಿದ್ಯಾರ್ಥಿಗಳು ಮೂರನೇ ತರಗತಿಯಲ್ಲಿ ಓದುತ್ತಿದ್ದರು ಎನ್ನಲಾಗಿದೆ. ದಸರಾ ಹಬ್ಬದ ಪ್ರಯುಕ್ತ ಶಾಲೆಗಳಿಗೆ ರಜೆ ಘೋಷಿಸಿರುವ ಹಿನ್ನೆಲೆ ಪೋಷಕರ ಜೊತೆಗೆ ಜಮೀನಿಗೆ ಬಂದಿದ್ದ ಮಕ್ಕಳು. ಜಮೀನು ಬದಿಯಲ್ಲಿ ಬೃಹತ್ ಬಂಡೆಗಳು ಹಾಕಲಾಗಿತ್ತು. ಇದೇ ಕಲ್ಲು ಬಂಡೆಗಳ ಸುತ್ತ ಆಟವಾಡುತ್ತಿದ್ದ ಮಕ್ಕಳು. ಮಕ್ಕಳು ಆಟವಾಡುವಾಗಲೇ ಕುಸಿದುಬಿದ್ದಿರುವ ಬೃಹತ್ ಬಂಡೆ. ಬಂಡೆಗಳ ಕೆಳಗೆ ಆಡುತ್ತಿದ್ದ ಇಬ್ಬರು ಮಕ್ಕಳ ಮೇಲೆ ಏಕಾಏಕಿ ಉರುಳಿಬಿದ್ದಿ. ಮಕ್ಕಳ ನರಳಾಟ ಕೇಳಿ ಓಡಿಬಂದಿರುವ ಪೋಷಕರು.  ತಕ್ಷಣ ಕಲ್ಲು ಬಂಡೆ ಎತ್ತಿಹಾಕದಷ್ಟು ಭಾರವಾಗಿದ್ದರಿಂದ ಪೋಷಕರು ಮಕ್ಕಳ ನರಳಾಟ ಕೇಳಿ ಅಸಹಾಯಕರಾಗಿದ್ದಾರೆ. ಕಣ್ಮುಂದೆ ಅಟವಾಡುತ್ತಿದ್ದ ದಾರುಣ ಸಾವು ಕಂಡು ಪೋಷಕರ ಅಕ್ರಂದನ ಮುಗಿಲು ಮುಟ್ಟಿದೆ. ಘಟನೆ ನಡೆಯುತ್ತಿದ್ದಂತೆ ಸ್ಥಳೀಯರು ಸ್ಥಳಕ್ಕೆ ಬಂದು ಬೃಹತ್ ಬಂಡೆ ಎತ್ತಿಹಾಕಿದ್ದಾರೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಎರಡು ಮಕ್ಕಳ ತಾಯಿ ಸಹವಾಸ ಮಾಡಿ ಮಸಣ ಸೇರಿದ ಯುವಕ: ತಾಯಿಯ ಲೀವಿಂಗ್ ಪಾರ್ಟನರ್ ಕತೆ ಮುಗಿಸಿದ ಅಮ್ಮ ಮಕ್ಕಳು
ರಿಯಲ್ ಎಸ್ಟೇಟ್ ಉದ್ಯಮಿಯ ಬರ್ಬರ ಹತ್ಯೆ: ಮಗ ಓದುತ್ತಿದ್ದ ಶಾಲೆಯ ಮುಂದೆಯೇ ಕೃತ್ಯ