
ಹೊನ್ನಾಳಿ/ಪಾವಗಡ(ಡಿ.24): ಗ್ರಾಮ ಪಂಚಾಯಿತಿ ಚುನಾವಣೆಗೆ ಸ್ಪರ್ಧಿಸಿ ಮತದಾನ ಮಾಡಿದ ಇಬ್ಬರು ಅಭ್ಯರ್ಥಿಗಳು ಹೃದಯಾಘಾತದಿಂದ ನಿಧನರಾಗಿರುವ ಘಟನೆ ದಾವಣಗೆರೆ ಜಿಲ್ಲೆ ಹೊನ್ನಾಳಿ ತಾಲೂಕು ಮತ್ತು ಬೆಂಗಳೂರಿನಲ್ಲಿ ನಡೆದಿದೆ.
ಹೊನ್ನಾಳಿ ತಾಲೂಕಿನ ಅರಬಗಟ್ಟೆ ಗ್ರಾಪಂ ವ್ಯಾಪ್ತಿಯ ಸುಂಕದಕಟ್ಟೆ ಸಾಮಾನ್ಯ ಮೀಸಲಾತಿಯಲ್ಲಿ ಸ್ಪರ್ಧಿಸಿದ್ದ ಡಿ.ಬಸಪ್ಪ (78) ಮತ್ತು ಪಾವಗಡ ತಾಲೂಕಿನ ಪೊನ್ನಸಮುದ್ರ ಗ್ರಾಪಂಗೆ ಸ್ಪರ್ಧಿಸಿದ್ದ ಅಧಿಶೇಷಪ್ಪ ನಿಧನರಾಗಿದ್ದಾರೆ.
ದೇವ್ರಾಣೆ ಮಾಡಿ ಹೇಳು ಯಾರಿಗೆ ವೋಟು ಹಾಕಿದಿ..!
ಬಸಪ್ಪ ಮತದಾನ ಮಾಡಿ ಮನೆಗೆ ಹೋಗಿದ್ದಾಗ ರಾತ್ರಿ ವೇಳೆ ಹೃದಯಾಘಾತವಾಗಿದೆ. ಅಧಿಶೇಷಪ್ಪ ಮತದಾನ ಮಾಡಿ ಬೆಂಗಳೂರಿಗೆ ಆಗಮಿಸಿದ್ದರು. ರಾತ್ರಿ ವೇಳೆ ಜೆ.ಪಿ.ನಗರದ ನಿವಾಸದಲ್ಲಿ ಅವರಿಗೆ ಹೃದಯಾಘಾತವಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ