ಗಾಂಜಾ ಸಾಗಾಟ: ಅಂತಾರಾಜ್ಯ ಗ್ಯಾಂಗ್‌ನ ಇಬ್ಬರ ಬಂಧನ

Kannadaprabha News   | Asianet News
Published : Jun 21, 2021, 03:34 PM IST
ಗಾಂಜಾ ಸಾಗಾಟ: ಅಂತಾರಾಜ್ಯ ಗ್ಯಾಂಗ್‌ನ ಇಬ್ಬರ ಬಂಧನ

ಸಾರಾಂಶ

* ಕರ್ನಾಟಕ-ಮಹಾರಾಷ್ಟ್ರ ನಡುವೆ ಗಾಂಜಾ ಸಾಗಾಟ  * ಇಬ್ಬರು ಆರೋಪಿಗಳನ್ನು ಬಂಧಿಸಿದ ಆಳಂದ ಪೊಲೀಸರು * ಸ್ಕಾರ್ಪಿಯೋ ವಾಹನದಲ್ಲಿ ಗಾಂಜಾ ಸಾಗಾಟ 

ಕಲಬುರಗಿ(ಜೂ.21): ಕರ್ನಾಟಕ-ಮಹಾರಾಷ್ಟ್ರ ನಡುವೆ ಗಾಂಜಾ ಸಾಗಾಟ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್‌ನ ಇಬ್ಬರು ಆರೋಪಿಗಳನ್ನು ಆಳಂದ ಪೊಲೀಸರು ಬಂಧಿಸಿದ್ದಾರೆ. ಆಳಂದ ತಾಲೂಕಿನ ಕೋಡಲಹಂಗರಗಾ ತಾಂಡಾದ ರಾಜು ಪವಾರ ಹಾಗೂ ಜೀರಹಳ್ಳಿ ತಾಂಡಾದ ಸಂತೋಷ ಚೌವ್ಹಾಣ ಬಂಧಿತ ಆರೋಪಿಗಳಾಗಿದ್ದಾರೆ.

ಸ್ಕಾರ್ಪಿಯೋ ವಾಹನದಲ್ಲಿ ಗಾಂಜಾ ಸಾಗಾಟ ಮಾಡಲಾಗುತ್ತಿದೆ ಎಂಬ ಮಾಹಿತಿ ಡಿವೈಎಸ್‌ಪಿ ಮಲ್ಲಿಕಾರ್ಜುನ್‌ ಸಾಲಿ ಅವರಿಗೆ ಬಂದಿತ್ತು. ಈ ಹಿನ್ನೆಲೆಯಲ್ಲಿ ವಿಶೇಷ ತಂಡ ರಚಿಸಿದ ಆಳಂದ ಪೊಲೀಸರು ಮಹಾರಾಷ್ಟ್ರದ ಉಮರ್ಗಾ- ಕರ್ನಾಟಕದ ಆಳಂದ ಮಾರ್ಗದ ಚಿತಲಿ ಕ್ರಾಸ್‌ ಬಳಿ ಆರೋಪಿಗಳನ್ನು ಬಂಧಿಸಿದ್ದಾರೆ.

ಕಲಬುರಗಿ: ಪೆಟ್ರೋಲ್‌ ಸುರಿದು ವಿದ್ಯಾರ್ಥಿಯ ಬರ್ಬರ ಕೊಲೆ, ಕಾರಣ..?

ಆರೋಪಿಗಳು ಜಿಲ್ಲೆಯ ಹಲವೆಡೆ ಬೆಳೆದ ಗಾಂಜಾ ಸಂಗ್ರಹಿಸಿ ಗುಪ್ತವಾಗಿ ಮಹಾರಾಷ್ಟ್ರಕ್ಕೆ ಸಾಗಾಟ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ. ಬಂಧಿತರಿಂದ 6 ಲಕ್ಷ ರೂ. ಮೌಲ್ಯದ 59 ಕೆಜಿ ಒಣ ಗಾಂಜಾ ಹಾಗು 6 ಲಕ್ಷ ರು ಮೌಲ್ಯದ ಸ್ಕಾರ್ಪಿಯೋ ವಾಹನವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಈ ಕುರಿತು ಪ್ರಕರಣ ದಾಖಲಿಸಿಕೊಂಡ ಆಳಂದ ಪೊಲೀಸರು, ಗಾಂಜಾ ಸಾಗಾಟದ ಹಿಂದಿರುವ ಗ್ಯಾಂಗ್‌ ಪತ್ತೆಗಾಗಿ ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಶಾಲಾ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಆರೋಪ: ಶಿಕ್ಷಕನಿಗೆ ಪೋಷಕರಿಂದ ಧರ್ಮದೇಟು!
ಬೆಂಗಳೂರಲ್ಲಿ ಹೊಟ್ಟೆಪಾಡಿಗೆ ಕಳ್ಳತನ ಮಾಡ್ತಿದ್ದ ಕಳ್ಳನನ್ನೇ ರಾಬರಿ ಮಾಡಿದ ಖತರ್ನಾಕ್ ಕಿತಾಪತಿಗಳು!