
ಶಿವಮೊಗ್ಗ(ಜ. 05) ಮಾವಿನ ಹಣ್ಣಿನ ಜ್ಯೂಸ್ ಕುಡಿದು ಇಬ್ಬರು ಮಕ್ಕಳು ಸಾವನ್ನಪ್ಪಿದ್ದಾರೆ. ಭದ್ರಾವತಿಯ ಗೀತಾ ಎಂಬುವವರ ಮಕ್ಕಳಾದ ಆಕಾಂಕ್ಷಾ ಯಾನೆ ಹಲಿನಾ(5) ಮತ್ತು ಅಶ್ವಿನ್ ಯಾನೆ ಅಲೆಕ್ಸ್ (8) ದಾರುಣ ಅಂತ್ಯ ಕಂಡಿದ್ದಾರೆ.
ಭದ್ರಾವತಿಯ ಪೇಪರ್ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯ ಸುರಗಿ ತೋಪ್ ಬಡಾವಣೆಯ ಗೀತಾ ಎಂಬುವವರು ತಮ್ಮ ಇಬ್ಬರು ಮಕ್ಕಳನ್ನು ಕರೆದುಕೊಂಡು ಸೋಮವಾರ ಶಿವಮೊಗ್ಗ ಗಾಂಧಿ ಪಾರ್ಕಿಗೆ ಬಂದಿದ್ದಾರೆ. ಇಲ್ಲಿ ಮಕ್ಕಳಿಗೆ ಮಾವಿನ ಹಣ್ಣಿನ ಜ್ಯೂಸ್ ಕುಡಿಸಿ ತಾವೂ ಕುಡಿದಿದ್ದಾಾರೆ.
ಪತ್ನಿಗೆ ಸೆಕ್ಸ್ ಟಿಪ್ಸ್ ಕೊಟ್ಟವ ಕೊಲೆಯಾಗಿ ಹೋದ
ಕುಡಿದ ಸ್ವಲ್ಪ ಹೊತ್ತಿನಲ್ಲಿಯೇ ಇಬ್ಬರು ಮಕ್ಕಳೂ ಅಸ್ವಸ್ಥಗೊಂಡಿವೆ. ತಕ್ಷಣವೇ ಅವರನ್ನು ಸರ್ಜಿ ಆಸ್ಪತ್ರೆೆಗೆ ಸೇರಿಸಲಾಯಿತಾದರೂ ಚಿಕಿತ್ಸೆೆ ವಿಫಲವಾಗಿ ಮಂಗಳವಾರ ಬೆಳಗಿನ ಜಾವ ಮೃತಪಟ್ಟಿವೆ.
ತಾಯಿ ಗೀತಾ ಈ ಸಂಬಂಧ ಪೊಲೀಸರಿಗೆ ದೂರು ದಾಖಲಿಸಿದ್ದು, ಕೋಟೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಮಕ್ಕಳ ಶವದ ಮರಣೋತ್ತರ ಪರೀಕ್ಷೆೆ ನಡೆಯುತ್ತಿಿದ್ದು, ಸಾವಿಗೆ ಸರಿಯಾದ ಕಾರಣ ಇನ್ನಷ್ಟೇ ತಿಳಿಯಬೇಕಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಬೇರೆ ಬೇರೆ ಆಯಾಮಗಳ ಕುರಿತು ತನಿಖೆ ಆರಂಭಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ