ಬೆಂಗ್ಳೂರಲ್ಲಿ 2.47 ಕೋಟಿಯ ಗಾಂಜಾ ಜಪ್ತಿ, ಇಬ್ಬರು ಪೆಡ್ಲರ್‌ಗಳ ಬಂಧನ

Published : Mar 05, 2023, 06:40 AM IST
ಬೆಂಗ್ಳೂರಲ್ಲಿ 2.47 ಕೋಟಿಯ ಗಾಂಜಾ ಜಪ್ತಿ, ಇಬ್ಬರು ಪೆಡ್ಲರ್‌ಗಳ ಬಂಧನ

ಸಾರಾಂಶ

ಆರೋಪಿಗಳಿಂದ 2.47 ಕೋಟಿ ಮೌಲ್ಯದ 410 ಕೇಜಿ ಗಾಂಜಾ ಜಪ್ತಿ ಮಾಡಲಾಗಿದೆ. ಈ ವೇಳೆ ತಪ್ಪಿಸಿಕೊಂಡಿರುವ ಪ್ರಮುಖ ಗಾಂಜಾ ಪೂರೈಕೆದಾರರಾದ ಆಂಧ್ರಪ್ರದೇಶ ಮೂಲದ ಫೈರೋಜ್‌ ಖಾನ್‌ ಹಾಗೂ ಪ್ರಸಾದ್‌ ಪತ್ತೆಗೆ ತನಿಖೆ ನಡೆದಿದೆ.

ಬೆಂಗಳೂರು(ಮಾ.05): ರಾಜಧಾನಿಯಲ್ಲಿನ ಡ್ರಗ್ಸ್‌ ಮಾಫಿಯಾದ ಮೇಲೆ ಭರ್ಜರಿ ಕಾರ್ಯಾಚರಣೆ ನಡೆಸಿರುವ ಡಿ.ಜೆ.ಹಳ್ಳಿ ಠಾಣೆ ಪೊಲೀಸರು ಇಬ್ಬರು ಪೆಡ್ಲರ್‌ಗಳನ್ನು ಬಂಧಿಸಿ 2.47 ಕೋಟಿ ಮೌಲ್ಯದ ನಾಲ್ಕು ಕ್ವಿಂಟಾಲ್‌ ಗಾಂಜಾ ಜಪ್ತಿ ಮಾಡಿದ್ದಾರೆ. ಲಿಂಗರಾಜಪುರದ ಅಬ್ದುಲ್‌ ರೆಹಮಾನ್‌ ಅಲಿಯಾಸ್‌ ಅಜ್ಜು ಹಾಗೂ ನವಾಜ್‌ ಬಂಧಿತರಾಗಿದ್ದು, ಆರೋಪಿಗಳಿಂದ 2.47 ಕೋಟಿ ಮೌಲ್ಯದ 410 ಕೇಜಿ ಗಾಂಜಾ ಜಪ್ತಿ ಮಾಡಲಾಗಿದೆ. ಈ ವೇಳೆ ತಪ್ಪಿಸಿಕೊಂಡಿರುವ ಪ್ರಮುಖ ಗಾಂಜಾ ಪೂರೈಕೆದಾರರಾದ ಆಂಧ್ರಪ್ರದೇಶ ಮೂಲದ ಫೈರೋಜ್‌ ಖಾನ್‌ ಹಾಗೂ ಪ್ರಸಾದ್‌ ಪತ್ತೆಗೆ ತನಿಖೆ ನಡೆದಿದೆ.

ಇತ್ತೀಚೆಗೆ ಟ್ಯಾನರಿ ರಸ್ತೆಯಲ್ಲಿ ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದು ನವಾಜ್‌ನನ್ನು ಬಂಧಿಸಿ .3 ಲಕ್ಷ ಮೌಲ್ಯದ 3 ಕೇಜಿ ಗಾಂಜಾ ಜಪ್ತಿ ಮಾಡಲಾಯತು. ವಿಚಾರಣೆ ವೇಳೆ ಆತ ನೀಡಿದ ಸುಳಿವು ಆಧರಿಸಿ ಮತ್ತೆ ಕಾರ್ಯಾಚರಣೆ ನಡೆಸಿ ಮತ್ತೊಬ್ಬನನ್ನು ಬಂಧಿಸಿ .2.43 ಕೋಟಿ ಮೌಲ್ಯದ ಗಾಂಜಾವನ್ನು ಡಿ.ಜೆ.ಹಳ್ಳಿ ಠಾಣೆ ಇನ್‌ಸ್ಪೆಕ್ಟರ್‌ ಆರ್‌.ಪ್ರಕಾಶ್‌ ಹಾಗೂ ಸಬ್‌ ಇನ್‌ಸ್ಪೆಕ್ಟರ್‌ ನಾಗದೇವ್‌ ತಂಡ ಜಪ್ತಿ ಮಾಡಿದೆ ಎಂದು ಹೆಚ್ಚುವರಿ ಪೊಲೀಸ್‌ ಆಯುಕ್ತ (ಪೂರ್ವ) ಆರ್‌.ಚಂದ್ರಶೇಖರ್‌ ತಿಳಿಸಿದ್ದಾರೆ.

Bengaluru: ಯುಕೆನಲ್ಲಿ ಕೆಲಸ ಕೊಡಿಸೋದಾಗಿ ಮಹಿಳೆಯರಿಗೆ ವಂಚನೆ: ನೈಜೀರಿಯಾ ಪ್ರಜೆಯ ಬಂಧನ

ಆಂಧ್ರದಿಂದ ಗಾಂಜಾ ಪೂರೈಕೆ

ಅಬ್ದುಲ್‌ ಹಾಗೂ ನವಾಜ್‌ ವೃತ್ತಿಪರ ಪೆಡ್ಲರ್‌ಗಳಾಗಿದ್ದು, ಅಬ್ದುಲ್‌ ರೆಹಮಾನ್‌ ವಿರುದ್ಧ ಬಾಣಸವಾಡಿ, ವೈಯಾಲಿಕಾವಲ್‌ ಹಾಗೂ ಡಿ.ಜೆ.ಹಳ್ಳಿ ಠಾಣೆಗಳಲ್ಲಿ ಪ್ರಕರಣಗಳು ದಾಖಲಾಗಿವೆ. ಈ ಇಬ್ಬರಿಗೆ ಆಂಧ್ರಪ್ರದೇಶದ ಕುಖ್ಯಾತ ಗಾಂಜಾ ಪೂರೈಕೆದಾರರಾದ ಫೈರೋಜ್‌ ಖಾನ್‌ ಹಾಗೂ ಪ್ರಸಾದ್‌ ಜತೆ ಸಂಪರ್ಕವಿತ್ತು. ಈ ಬಗ್ಗೆ ಮಾಹಿತಿ ಪಡೆದು ನವಾಜ್‌ನನ್ನು ಬಂಧಿಸಲಾಯಿತು. ನಂತರ ಆತನ ನೀಡಿದ ಸುಳಿವಿನಿಂದ ರೆಹಮಾನ್‌ನನ್ನು ಬಂಧಿಸಲಾಯಿತು. ಈ ವೇಳೆ ಫೈರೋಜ್‌ ಹಾಗೂ ಪ್ರಸಾದ್‌ ತಪ್ಪಿಸಿಕೊಂಡಿದ್ದಾರೆ.

ರೈಲು, ಬಸ್‌, ಕಾರಿನಲ್ಲಿ ನಗರಕ್ಕೆ ಗಾಂಜಾ ಸಾಗಣೆ

ಆಂಧ್ರ ಪೆಡ್ಲರ್‌ಗಳು ರೈಲು, ಬಸ್‌ ಹಾಗೂ ಕಾರುಗಳ ಮೂಲಕ ಬೆಂಗಳೂರಿಗೆ ಗಾಂಜಾ ಸಾಗಿಸಿ ಬಳಿಕ ಸಬ್‌ ಪೆಡ್ಲರ್‌ಗಳ ಮುಖಾಂತರ ಗ್ರಾಹಕರಿಗೆ ತಲುಪಿಸುತ್ತಿದ್ದರು. ಆಂಧ್ರಪ್ರದೇಶದಲ್ಲಿ ಕಡಿಮೆ ಬೆಲೆಗೆ ಗಾಂಜಾ ಖರೀದಿಸಿ ನಗರದಲ್ಲಿ ದುಬಾರಿ ಬೆಲೆ ಮಾರುತ್ತಿದ್ದರು ಎಂದು ಅಧಿಕಾರಿಗಳು ಹೇಳಿದ್ದಾರೆ. ನಗರದಲ್ಲಿ ಚಿಕ್ಕ ಚಿಕ್ಕ ಪೊಟ್ಟಣಗಳಲ್ಲಿ ತುಂಬಿ ಗ್ರಾಹಕರಿಗೆ ಅಬ್ದುಲ್‌ ಹಾಗೂ ನವಾಜ್‌ ಗಾಂಜಾ ಮಾರುತ್ತಿದ್ದರು. ಈ ಹಿಂದೆ ಗಾಂಜಾ ಮಾರಾಟ ಪ್ರಕರಣದಲ್ಲಿ ತನ್ನನ್ನು ಬಂಧಿಸಲು ಬಂದಿದ್ದ ಸಿಸಿಬಿ ಅಧಿಕಾರಿಗಳ ಮೇಲೆ ಅಬ್ದುಲ್‌ ದಾಳಿ ನಡೆಸಿದ್ದ ಎಂದು ಅಧಿಕಾರಿಗಳು ವಿವರಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಭಜರಂಗ ದಳ ಕಾರ್ಯಕರ್ತರಿಂದ ಕಾಂಗ್ರೆಸ್ ನಾಯಕ ಗಣೇಶ್ ಭೀಕರ ಹ*ತ್ಯೆಗೆ ಕಾರಣ ಏನು?
ಮಂಗಳಮುಖಿಯರಿಂದ ಯುವಕನ ಅಪಹರಣ; ಶಸ್ತ್ರಚಿಕಿತ್ಸೆ ನಡೆಸಿ ಪರಿವರ್ತನೆಗೆ ಯತ್ನ?