
ಬೆಳಗಾವಿ(ಡಿ.14): ವಿವಾಹಿತ ಪುರುಷ ಹಾಗೂ ಮಹಿಳೆ ನೇಣು ಬೀಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಭಾನುವಾರ ನಡೆದಿದೆ. ಬೆಳಗಾವಿ ತಾಲೂಕಿನ ಬೆನ್ನಾಳಿ ಗ್ರಾಮದ ಜಯಶ್ರೀ ರಾಜು ಗಾಡಿವಡ್ಡರ (35) ಹಾಗೂ ಶಿವಾಜಿ ಭೀಮಾ ಗಾಡಿವಡ್ಡರ (31) ಆತ್ಮಹತ್ಯೆಗೆ ಶರಣಾದವರು.
ಹಲವು ವರ್ಷಗಳಿಂದ ಇವರಿಬ್ಬರ ನಡುವೆ ಪರಿಚಯವಾಗಿ ನಂತರ ಪ್ರೇಮಾಂಕುರವಾಗಿತ್ತು. ಅಕ್ರಮ ಸಂಬಂಧವನ್ನೂ ಹೊಂದಿದ್ದರಿಂದ ಎರಡೂ ಮನೆಯ ಕುಟುಂಬಸ್ಥರು ಇಬ್ಬರಿಗೂ ತಿಳುವಳಿಕೆ ಹೇಳಿದ್ದರು. ಆದರೆ ಇವರಿಬ್ಬರು ತಮ್ಮ ಹಳೆಯ ಚಾಳಿಯನ್ನು ಮುಂದುವರೆಸಿದ್ದರು ಎನ್ನಲಾಗುತ್ತಿದೆ. ಇದರಿಂದಾಗಿ ಶಿವಾಜಿ ಮನೆಯವರು ತೀವ್ರ ತರಾಟೆಗೆ ತೆಗೆದುಕೊಂಡ ಹಿನ್ನೆಲೆಯಲ್ಲಿ ಮನನೊಂದು ಹೆದ್ದಾರಿ ಪಕ್ಕದಲ್ಲಿರುವ ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ಸುದ್ದಿ ತಿಳಿದ ಜಯಶ್ರೀ ಗಾಡಿವಡ್ಡರ ಮನೆಯಲ್ಲಿ ನೇಣಿಗೆ ಶರಣಾಗಿದ್ದಾಳೆ.
ಹುಬ್ಬಳ್ಳಿ: ಪ್ರಿಯಕರ ಬೈದಿದ್ದಕ್ಕೆ ಯುವತಿ ಆತ್ಮಹತ್ಯೆ
ಈ ಘಟನೆ ಸುದ್ದಿ ತಿಳಿದ ಕಾಕತಿ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್ ರಾಘವೇಂದ್ರ ಹಳ್ಳೂರ ಸೇರಿದಂತೆ ಇನ್ನಿತರ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಕುರಿತು ಕಾಕತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ