ಫ್ರೆಂಡ್‌ ಮನೆಯಲ್ಲೇ ಚಿನ್ನ ಕದ್ದ ಚಾಲಾಕಿ ಕಳ್ಳಿ, ಅಕೆಯ ಸ್ನೇಹಿತ ಅರೆಸ್ಟ್

Published : Oct 09, 2020, 08:20 AM ISTUpdated : Oct 09, 2020, 08:33 AM IST
ಫ್ರೆಂಡ್‌ ಮನೆಯಲ್ಲೇ ಚಿನ್ನ ಕದ್ದ ಚಾಲಾಕಿ ಕಳ್ಳಿ, ಅಕೆಯ ಸ್ನೇಹಿತ ಅರೆಸ್ಟ್

ಸಾರಾಂಶ

ಸ್ನೇಹಿತೆ ಮನೆಯಲ್ಲೇ ಚಿನ್ನಾಭರಣ ಕಳವು| ಹಾಗೂ ಆಕೆಯ ಸ್ನೇಹಿತನ ಬಂಧನ| ಬೆಂಗಳೂರಿನ ಶ್ರೀರಾಮಪುರದಲ್ಲಿ ನಡೆದ ಘಟನೆ|  

ಬೆಂಗಳೂರು(ಅ.09): ತನ್ನ ಸ್ನೇಹಿತೆ ಮನೆಯಲ್ಲೇ ಚಿನ್ನಾಭರಣ ಕಳವು ಮಾಡಿದ್ದ ಮಹಿಳೆ ಹಾಗೂ ಆಕೆಯ ಸ್ನೇಹಿತನನ್ನು ಶ್ರೀರಾಮಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಶ್ರೀರಾಂಪುರದ ಶಶಿಕಲಾ ಹಾಗೂ ಆಕೆಯ ಗೆಳೆಯ ಪ್ರಶಾಂತ್‌ ಬಂಧಿತರಾಗಿದ್ದು, ಆರೋಪಿಗಳಿಂದ 12 ಲಕ್ಷ ಮೌಲ್ಯದ 200 ಗ್ರಾಂ ಚಿನ್ನಾಭರಣ ಜಪ್ತಿ ಮಾಡಲಾಗಿದೆ. ಕೆಲ ದಿನಗಳ ಹಿಂದೆ ಕುಶಲೋಪರಿ ವಿಚಾರಿಸುವ ನೆಪದಲ್ಲಿ ಗೆಳತಿ ಭಾಗ್ಯಲಕ್ಷ್ಮೀ ಮನೆಗೆ ಹೋಗಿ ಆರೋಪಿ ಕಳ್ಳತನ ಕೃತ್ಯ ಎಸಗಿದ್ದಳು ಎಂದು ಪೊಲೀಸರು ತಿಳಿಸಿದ್ದಾರೆ.

ರಾಮಚಂದ್ರಪುರದ ಭಾಗ್ಯಲಕ್ಷ್ಮೀ ಮನೆ ಹತ್ತಿರದಲ್ಲೇ ಬಟ್ಟೆ ಅಂಗಡಿ ಇಟ್ಟಿದ್ದಾರೆ. ಬಟ್ಟೆ ಖರೀದಿಗೆ ಬಂದಿದ್ದಾಗ ಭಾಗ್ಯಲಕ್ಷ್ಮೀಗೆ ಶಶಿಕಲಾ ಪರಿಚಯವಾಗಿತ್ತು. ಬಳಿಕ ಆತ್ಮೀಯತೆ ಬೆಳೆದಿತ್ತು. ಈ ಗೆಳೆತನದ ಹಿನ್ನೆಲೆಯಲ್ಲಿ ಭಾಗ್ಯಲಕ್ಷ್ಮೀ ಮನೆಗೆ ಆರೋಪಿ ಶಶಿಕಲಾ ಹೋಗಿದ್ದಳು. ಆಗ ಗೆಳತಿಗೆ ಚಹಾ ನೀಡಿ ಸತ್ಕರಿಸಿದ್ದರು. 

ದೇವದುರ್ಗ: ಮುಂಡರಗಿ ಶಿವರಾಯ ದೇವಸ್ಥಾನಕ್ಕೆ ಕನ್ನ ಹಾಕಿದ ಖದೀಮರು

ಈ ವೇಳೆ ಭಾಗ್ಯಲಕ್ಷ್ಮೀ ಅವರಿಗೆ ಗೊತ್ತಾಗದಂತೆ ಆಭರಣವನ್ನು ಶಶಿಕಲಾ ಎಗರಿಸಿದ್ದಳು. ಬಳಿಕ ಆ ಒಡವೆಯನ್ನು ಭಾಗ್ಯಲಕ್ಷ್ಮೀ ಪಕ್ಕದ ಮನೆಯಲ್ಲಿರುವ ತನ್ನ ಸ್ನೇಹಿತ ಪ್ರಶಾಂತ್‌ನ ಮನೆಯಲ್ಲಿ ಬಚ್ಚಿಟ್ಟಿದ್ದಳು. ಯಾರಿಗೂ ಗೊತ್ತಾಗದ ರೀತಿಯಲ್ಲಿ ಮಾರಾಟ ಮಾಡಿಸಿಕೊಟ್ಟರೆ, ಅರ್ಧ ಪಾಲು ಕೊಡುವುದಾಗಿ ಪ್ರಶಾಂತ್‌ಗೆ ಹೇಳಿದ್ದಳು. ಕೃತ್ಯಕ್ಕೆ ಸಹಕರಿಸಿದ ಆರೋಪದ ಮೇಲೆ ಪ್ರಶಾಂತ್‌ನನ್ನು ಬಂಧಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

Shivamogga: 14 ವರ್ಷ ಜೈಲು ಶಿಕ್ಷೆ ಅನುಭವಿಸಿದ್ರು ಬದಲಾಗಲಿಲ್ಲ; ತಂದೆಯನ್ನು ಕೊಲೆಗೈದು ಬಾವಿಗೆ ಎಸೆದ ಮಗ!
ಆಷಾಢ ಮುಗಿದ್ರೂ ತವರಿನಿಂದ ಬರಲಿಲ್ಲ ಪತ್ನಿ; ಪ್ರಾಣ ಕಳೆದುಕೊಂಡ ನವವಿವಾಹಿತ ಅವಿನಾಶ್