ಕಲಬುರಗಿ: ನೇಣು ಬಿಗಿದುಕೊಂಡು ಅಕ್ಕ ತಂಗಿ ಆತ್ಮಹತ್ಯೆ

Kannadaprabha News   | Asianet News
Published : Dec 09, 2020, 02:10 PM IST
ಕಲಬುರಗಿ: ನೇಣು ಬಿಗಿದುಕೊಂಡು ಅಕ್ಕ ತಂಗಿ ಆತ್ಮಹತ್ಯೆ

ಸಾರಾಂಶ

ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ಆತ್ಮಹತ್ಯೆಗೆ ಶರಣಾದ ಸಹೋದರಿಯರು| ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಐನಾಪುರ ಗ್ರಾಮದಲ್ಲಿ ನಡೆದ ಘಟನೆ| ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ| ಈ ಸಂಬಂಧ ಚಿಂಚೋಳಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲು| 

ಕಲಬುರಗಿ(ಡಿ.09): ಒಂದೇ ಮನೆಯಲ್ಲಿ ಅಕ್ಕ ತಂಗಿ ಇಬ್ಬರೂ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಂಚೋಳಿ ತಾಲೂಕಿನ ಐನಾಪುರ ಗ್ರಾಮದಲ್ಲಿ ನಡೆದಿದೆ. ಐಶ್ವರ್ಯ ಸುತಾರ (20) ಹಾಗೂ ಸಾರಿಕಾ ಸುತಾರ (17) ಆತ್ಮಹತ್ಯೆಗೆ ಶರಣಾದ ಸಹೋದರಿಯರು. 

ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ಇಬ್ಬರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಇವರ ತಂದೆ ವಿಶ್ವನಾಥ ಸುತಾರ ಐನಾಪುರ ಗ್ರಾಮದಲ್ಲಿ ಪೆಟ್ಟಿಗೆ ಅಂಗಡಿ ಇಟ್ಟುಕೊಂಡು ಜೀವನ ನಡೆಸುತ್ತಿದ್ದರು. ಇವರಿಗೆ ಐವರು ಮಕ್ಕಳಿದ್ದು ಮೂವರ ಮದುವೆಯಾಗಿದೆ. ಐದನೆಯವಳಾದ ಸಾರಿಕಾಗೆ ತಿಂಗಳ ಹಿಂದಷ್ಟೆಮದುವೆ ನಿಶ್ಚಯವಾಗಿತ್ತು. ನಾಲ್ಕನೆಯವಳಾದ ಐಶ್ವರ್ಯಗೆ ಗಂಡು ಹುಡುಕಲಾಗುತಿತ್ತು ಎನ್ನಲಾಗಿದೆ. 

ಅಂಕೋಲಾ: ನೇಣು ಬಿಗಿ​ದು​ಕೊಂಡು ವಿದ್ಯಾರ್ಥಿನಿ ಆತ್ಮ​ಹ​ತ್ಯೆ

ವಿಶ್ವನಾಥ ಎಂದಿನಂತೆ ಮಧ್ಯಾಹ್ನ ಊಟಕ್ಕೆಂದು ಅಂಗಡಿಯಿಂದ ಮನೆಗೆ ಬಂದಾಗ ಇವರೇ ಊಟ ಬಡಿಸಿದ್ದಾರೆ. ನಂತರ ತಂದೆ ಮರಳಿ ಅಂಗಡಿಗೆ ತೆರಳಿದಾಗ ಇಬ್ಬರು ಯುವತಿಯರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಂಜೆ ತಾಯಿ ಹೊಲದಿಂದ ಮನೆಗೆ ಬಂದಾಗ ಪ್ರಕರಣ ಬೆಳಕಿಗೆ ಬಂದಿದೆ. ಸ್ಥಳಕ್ಕೆ ಪಿಎಸ್‌ಐ ರಾಜಶೇಖರ ರಾಠೋಡ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಚಿಂಚೋಳಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತನಿಖೆ ನಂತರವಷ್ಟೇ ಈ ಸಹೋದರಿಯರ ಸಾವಿಗೆ ಕಾರಣ ತಿಳಿದು ಬರಬೇಕಿದೆ.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಚಿಕ್ಕಮಗಳೂರು ಕಾಂಗ್ರೆಸ್ ಕಾರ್ಯಕರ್ತ ಗಣೇಶ್ ಗೌಡ ಹಂತಕರನ್ನು ಸುಮ್ಮನೆ ಬಿಡಲ್ಲ: ಸಿಎಂ ಡಿಸಿಎಂ
ಮಧುಗಿರಿ: ಕದ್ದ ಎಟಿಎಂ ಭಾರ ಇದೆ ಎಂದು ರಸ್ತೆಯಲ್ಲೇ ಬಿಟ್ಟು ಹೋದರು