ತ್ರಿಕೋನ ಪ್ರೇಮ ಪ್ರಕರಣ: ಓರ್ವ ಹುಡುಗಿಗಾಗಿ ವಿದ್ಯಾರ್ಥಿಗಳ ಮಾರಾಮಾರಿ, ಚಾಕು ಇರಿತ

Published : Aug 13, 2022, 10:12 PM IST
ತ್ರಿಕೋನ ಪ್ರೇಮ ಪ್ರಕರಣ:  ಓರ್ವ ಹುಡುಗಿಗಾಗಿ ವಿದ್ಯಾರ್ಥಿಗಳ ಮಾರಾಮಾರಿ, ಚಾಕು ಇರಿತ

ಸಾರಾಂಶ

ಓರ್ವ ಹುಡುಗಿ ಸಂಬಂಧ ಮೂವರು ವಿದ್ಯಾರ್ಥಿಗಳು ಕಿತ್ತಾಡಿಕೊಂಡು, ಹೊಡೆದಾಡಿದ್ದಾರೆ. ಅಲ್ಲದೇ ಚಾಕು ಇರಿತ ಉಂಟಾಗಿದ್ದು, ಜನತೆ ಬೆಚ್ಚಿ ಬೀಳುವಂತೆ ಮಾಡಿದೆ.

ಕೊಡಗು, (ಆಗಸ್ಟ್. 13): ಲವ್ ವಿಷಯಕ್ಕೆ ಸಂಬಂಧಿಸಿದಂತೆ ಕೊಡಗಿನ ಪ್ರಸಿದ್ಧ ಕಾವೇರಿ ನಿಸರ್ಗಧಾಮದಲ್ಲಿ ಮೂವರು ವಿದ್ಯಾರ್ಥಿಗಳ ನಡುವೆ ಮಾರಾಮಾರಿಯಾಗಿದೆ. ತ್ರಿಕೋನ ಪ್ರೇಮ ಪ್ರಕರಣ ಸಂಬಂಧ ವಿದ್ಯಾರ್ಥಿಗಳು ಹೊಡೆದಾಕೊಂಡಿದ್ದು, ಚಾಕು ಇರಿತ ಕೂಡ ಉಂಟಾಗಿದೆ.

 ಕೊಡಗು ಜಿಲ್ಲೆಯ ಪ್ರಸಿದ್ಧ ಪ್ರವಾಸಿ ತಾಣಗಳಲ್ಲಿ ಒಂದಾದ ಕಾವೇರಿ ನಿಸರ್ಗಧಾಮದಲ್ಲಿ ಇಂದು(ಶನಿವಾರ) ಮೂವರು ವಿದ್ಯಾರ್ಥಿಗಳ ನಡುವೆ ಮಾರಾಮಾರಿ ನಡೆದಿದೆ. ಓರ್ವ ಹುಡುಗಿ ಸಂಬಂಧ ಮೂವರು ವಿದ್ಯಾರ್ಥಿಗಳು ಕಿತ್ತಾಡಿಕೊಂಡು, ಹೊಡೆದಾಡಿದ್ದಾರೆ.

ವಿವಾಹ ವಿಚ್ಛೇದನ ಕೇಸ್: ಕೋರ್ಟ್‌ ಆವರಣದಲ್ಲೇ ಪತ್ನಿ ಕತ್ತು ಕೊಯ್ದು ಹತ್ಯೆಗೈದ ಪತಿ

ಇನ್ನೂ ವಿದ್ಯಾರ್ಥಿಗಳ ಹೊಡೆದಾಟ, ಮಾರಾಮಾರಿ ತಾರಕ್ಕೇರಿದ ಸಂದರ್ಭದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಇಬ್ಬರು ವಿದ್ಯಾರ್ಥಿಗಳಿಗೆ ಚಾಕುವಿನಿಂದ ಇರಿದಿದ್ದಾನೆ. ಚಾಕು ಇರಿತದಲ್ಲಿ ಇಬ್ಬರು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ.

ಸೋನಿಕಾ, ಪ್ರವೀಣ್ ಎಂಬಾತನಿಗೆ ವಿಜಯ್ ಎಂಬುವರು ಚಾಕುವಿನಿಂದ ಇರಿದಿದ್ದಾರೆ. ಹಲವು ಜನರ ನಡುವೆ ವಿದ್ಯಾರ್ಥಿಗಳ ಚಾಕು ಇರಿತ ಕಂಡು, ಜನರು ಬೆಚ್ಚಿ ಬಿದ್ದಿದ್ದಾರೆ. ಚಾಕು ಇರಿತಕ್ಕೆ ಒಳಗಾದಂತ ಸೋನಿಕಾ, ಪ್ರವೀಣ್ ನನ್ನು ಕುಶಾಲನಗರದ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳೀಯರೇ ಚಾಕು ಇರಿದಂತ ವಿಜಯ್ ನನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ. ಈ ಸಂಬಂಧ ಕುಶಾಲನಗರ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಸಿದ್ದಾರೆ.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ರಿಯಲ್ ಎಸ್ಟೇಟ್ ಉದ್ಯಮಿಯ ಬರ್ಬರ ಹತ್ಯೆ: ಮಗ ಓದುತ್ತಿದ್ದ ಶಾಲೆಯ ಮುಂದೆಯೇ ಕೃತ್ಯ
ಭಜರಂಗ ದಳ ಕಾರ್ಯಕರ್ತರಿಂದ ಕಾಂಗ್ರೆಸ್ ನಾಯಕ ಗಣೇಶ್ ಭೀಕರ ಹ*ತ್ಯೆಗೆ ಕಾರಣ ಏನು?