
ಕೊಪ್ಪಳ(ಅ.03): ಪೊಲೀಸ್(Police) ಅಧಿಕಾರಿಗಳೆಂದು ಹೇಳಿಕೊಂಡು ಹಣ ವಸೂಲಿ ಮಾಡುತ್ತಿದ್ದ ಇಬ್ಬರು ಯುವಕರನ್ನ ಪೊಲೀಸರು ಬಂಧಿಸಿದ ಘಟನೆ ನಗರದಲ್ಲಿ ಇಂದು(ಭಾನುವಾರ) ನಡೆದಿದೆ. ಗದಗ(Gadag) ಮೂಲದ ಸಂಜಯ ಕೊಪ್ಪದ ಹಾಗೂ ನರಗುಂದ(Nargund) ಪಟ್ಟಣದ ಸಂಜು ಛಲವಾದಿ ಬಂಧಿತ ಯುವಕರಾಗಿದ್ದಾರೆ.
ಇಬ್ಬರೂ ಆಗಸ್ಟ್ 15 ರಂದು ಯಲಬುರ್ಗಾದ ಭೀಮೇಶ ಎಂಬುವವರಿಂದ ಬಂಧಿತ ಯುವಕರು ಹಣ ವಸೂಲಿ ಮಾಡಿದ್ದರು. ಭೀಮೇಶ ಅವರು ಬೈಕ್ನಲ್ಲಿ ಮುನಿರಾಬಾದ್ಗೆ ಹೊರಟಾಗ ಕೊಪ್ಪಳ(Koppal) ಹೊರವಲಯದಲ್ಲಿ ಘಟನೆ ನಡೆದಿದೆ. ತಾವು ಪೊಲೀಸ್ ಅಧಿಕಾರಿಗಳೆಂದು ಸುಳ್ಳು ಹೇಳಿ ವಾಹನ ತಪಾಸಣೆ ಮಾಡಿ ಹಣ ವಸೂಲಿ ಮಾಡಿದ್ದರು. ಭೀಮೇಶ ಅವರ ಪರ್ಸ್ನಲ್ಲಿದ್ದ 1000 ರೂಪಾಯಿ ತೆಗೆದುಕೊಂಡು ಜೊತೆಗೆ ಎಟಿಎಂ ಕಾರ್ಡ್ ಪಿನ್ ಪಡೆದು 1500 ರೂಪಾಯಿ ಡ್ರಾ ಮಾಡಿದ್ದರು ಬಂಧಿತ ಯುವಕರು.
ಹಾವೇರಿ: ಅತ್ಯಾಚಾರ ಆರೋಪಿ ಅನುಮಾನಾಸ್ಪದ ಸಾವು
ಈ ಕುರಿತು ಭೀಮೇಶ್ ಅವರು ಕೊಪ್ಪಳ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿದ್ದರು. ಈ ಸಂಬಂಧ ತನಿಖೆ ನಡೆಸಿ ಇಬ್ಬರು ಯುವಕರನ್ನು ಬಂಧಿಸಿದ್ದಾರೆ. ಬಂಧಿತ ಯುವಕರ ವಿರುದ್ಧ ವಿವಿಧ ಠಾಣೆಗಳಲ್ಲಿ ಪ್ರಕರಣಗಳು ದಾಖಲಾಗಿವೆ ಅಂತ ಪೊಲೀಸರಿಂದ ಮಾಹಿತಿ ಲಭ್ಯವಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ