Tumakuru: ಮೀನು ಹಿಡಿಯಲು ಹೋದ ಇಬ್ಬರು ಯುವಕರು ನೀರುಪಾಲು!

Published : Jul 23, 2023, 01:11 PM IST
Tumakuru: ಮೀನು ಹಿಡಿಯಲು ಹೋದ ಇಬ್ಬರು ಯುವಕರು ನೀರುಪಾಲು!

ಸಾರಾಂಶ

ಮೀನು ಹಿಡಿಯಲು ಹೋದ ಇಬ್ಬರು ಯವಕರು ಕಣ್ಮರೆಯಾದ ಘಟನೆ ಗುಬ್ಬಿ ತಾಲೂಕಿನ ಕಡಬ ಕೆರೆಯಲ್ಲಿ ನಡೆದಿದೆ. ತಡ ರಾತ್ರಿ ಯುವಕರು ಕೆರೆಯಲ್ಲಿ ಮೀನು ಹಿಡಿಯಲು ತೆರಳಿದ್ದಾಗ ಈ ದುರಂತ ನಡೆದಿದೆ.

ತುಮಕೂರು (ಜು.23): ಮೀನು ಹಿಡಿಯಲು ಹೋದ ಇಬ್ಬರು ಯವಕರು ಕಣ್ಮರೆಯಾದ ಘಟನೆ ಗುಬ್ಬಿ ತಾಲೂಕಿನ ಕಡಬ ಕೆರೆಯಲ್ಲಿ ನಡೆದಿದೆ. ತಡ ರಾತ್ರಿ ಯುವಕರು ಕೆರೆಯಲ್ಲಿ ಮೀನು ಹಿಡಿಯಲು ತೆರಳಿದ್ದಾಗ ಈ ದುರಂತ ನಡೆದಿದ್ದು, ಇಬ್ಬರು ಕೆರೆ ನೀರಿನಲ್ಲಿ ಮುಳುಗಿರುವ ಶಂಕೆ ವ್ಯಕ್ತವಾಗಿದೆ. ಹರೀಶ್(31) ಯೋಗೀಶ್ (36) ಕಣ್ಮರೆಯಾದ ಯುವಕರಾಗಿದ್ದು, ಗುಬ್ಬಿ ತಾಲ್ಲೂಕಿನ ಆಡುಗೊಂಡನಹಳ್ಳಿ ನಿವಾಸಿಗಳಾಗಿದ್ದಾರೆ. ಸ್ಥಳಕ್ಕೆ ಗುಬ್ಬಿ ಪೊಲಿಸರು ಭೇಟಿ ನೀಡಿದ್ದು, ನಾಪತ್ತೆಯಾದವರಿಗಾಗಿ ಕೆರೆಯಲ್ಲಿ ಶೋಧ ನಡೆಸಲಾಗುತ್ತಿದೆ. ಕೆರೆಯ ಬಳಿ ನೂರಾರು ಮಂದಿ ಗ್ರಾಮಸ್ಥರು ಜಮಾಯಿಸಿದ್ದಾರೆ.

ಟೊಂಕಾ ಮೀನುಗಾರಿಕಾ ಬಂದರಿನ ಸಮಸ್ಯೆ ನಿವಾರಿಸಿ: ಹೊನ್ನಾವರ ತಾಲೂಕಿನ ಕಾಸರಕೋಡ್‌ ಫಾರೆಸ್ಟ್‌ ಐಬಿಯಲ್ಲಿ ಸಚಿವ ಮಂಕಾಳ ವೈದ್ಯ ಅವರಿಗೆ ಇಲ್ಲಿನ ಟ್ರೋಲ್‌ ಬೋಟ್‌ ಮಾಲೀಕರ ಸಂಘದ ವತಿಯಿಂದ ಸನ್ಮಾನಿಸಲಾಯಿತು. ಈ ವೇಳೆ ಟೊಂಕಾ ಮೀನುಗಾರಿಕಾ ಬಂದರಿನ ಸಮಸ್ಯೆಗಳನ್ನು ಅತಿ ಶೀಘ್ರದಲ್ಲಿ ಪರಿಹರಿಸುವ ಕುರಿತು ಸಚಿವರಿಗೆ ಮನವಿ ಸಲ್ಲಿಸಿದರು. ಜಿಲ್ಲೆಯಲ್ಲಿ ಮೀನುಗಾರಿಕೆಗೆ ಪ್ರಸಿದ್ಧಿ ಪಡೆದ ಏಕೈಕ ಬಂದರಾಗಿದೆ. ಕಳೆದ 5 ದಶಕಗಳಿಂದ ಬಂದರಿನ ಅಭಿವೃದ್ಧಿಯ 2ನೇ ಹಂತದ ಕಾಮಗಾರಿ 2022ನೇ ಸಾಲಿನಲ್ಲಿ ಪೂರ್ತಿಗೊಂಡಿದೆ. 

ಕಾಂಗ್ರೆಸ್ ಪಕ್ಷದಲ್ಲಿ ಯಾವುದೇ ಗೊಂದಲಗಳು ಇಲ್ಲ: ಮಾಜಿ ಸಂಸದ ಉಗ್ರಪ್ಪ

ತಾಲೂಕಿನಾದ್ಯಂತ ಸರ್ಕಾರದ ಅಂಕಿ-ಅಂಶಗಳ ಪ್ರಕಾರ ಸರಿ ಸುಮಾರು 26,000 ಮೀನುಗಾರರು ಅಧಿಕೃತವಾಗಿ ಮೀನುಗಾರಿಕೆಯ ಇಲಾಖೆಯಲ್ಲಿ ನೋಂದಣಿಯಾಗಿದ್ದು, ತಾಲೂಕಿನಲ್ಲಿಯೇ 1 ಲಕ್ಷಕ್ಕೂ ಅಧಿಕ ಮೀನುಗಾರರು ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ಮೀನುಗಾರಿಕೆಗೆ ಅವಲಂಬಿತರಾಗಿ ಜೀವನ ನಡೆಸುತ್ತಿದ್ದಾರೆ ಎಂದು ತಿಳಿಸಿದ್ದಾರೆ. ತಾಲೂಕಿನಾದ್ಯಂತ ಸಾಂಪ್ರದಾಯಿಕ, ಮೋಟಾರಿಕೃತ ಮತ್ತು ಯಾಂತ್ರೀಕೃತ ಮೀನುಗಾರಿಕೆ ಯಥೇಚ್ಛ ಪ್ರಮಾಣದಲ್ಲಿ ನಡೆಯುತ್ತಿದೆ. 

ಪುತ್ತೂರಿನಲ್ಲಿ ‌ಮತ್ತೆ ಹಿಂದುತ್ವ ವರ್ಸಸ್ ಬಿಜೆಪಿ ಮಧ್ಯೆ ಬಿಗ್ ಫೈಟ್!

ಆರ್ಥಿಕವಾಗಿ ಹಲವು ರೀತಿಯಲ್ಲಿ ಸರ್ಕಾರಕ್ಕೆ ಲಾಭ ತರುವಲ್ಲಿ ಯಶಸ್ವಿಯಾದ ಮೀನುಗಾರಿಕೆ ಉದ್ಯಮದ ಪ್ರಮುಖರಾದ ಮೀನುಗಾರರ ನಿರ್ಲಕ್ಷತನವೇ ಎನ್ನುವಂತೆ ಮೀನುಗಾರಿಕೆ ನಡೆಯುತ್ತಿದೆ ಎಂದು ಮನವಿಯಲ್ಲಿ ವಿವರಿಸಿದ್ದಾರೆ. ಸಮಗ್ರ ಮೀನುಗಾರರ ಪರವಾಗಿ ಅತಿ ಅವಶ್ಯವಾಗಿರುವ 9 ಬೇಡಿಕೆಗಳನ್ನು ಮನವಿಯಲ್ಲಿ ಪ್ರಸ್ತಾಪಿಸಿ, ಸರ್ಕಾರದ ಮಟ್ಟದಲ್ಲಿ ಶೀಘ್ರ ಪರಿಹರಿಸುವಂತೆ ಒತ್ತಾಯಿಸಿದ್ದಾರೆ. ಸಂಬಂಧಪಟ್ಟವರಿಗೆ ಸೂಕ್ತ ಮಾರ್ಗದರ್ಶನ ನೀಡಿ, ಮುಂದಿನ ಋುತುವಿನಲ್ಲಿ ಸಮರ್ಪಕ ಮೀನುಗಾರಿಕೆ ನಡೆಸಲು ಅನುವು ಮಾಡಿಕೊಡುವಂತೆ ಮನವಿಯಲ್ಲಿ ವಿನಂತಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ವೃದ್ಧೆಯ ಕೇರ್ ಟೇಕರ್‌ನಿಂದಲೇ ₹31 ಲಕ್ಷ ಮೌಲ್ಯದ ಚಿನ್ನಾಭರಣ ಕಳವು: ಬಿಹಾರ ಮೂಲದ ಚಾಂದಿನಿ ಬಂಧನ!
ಈ ವರ್ತನೆ ಸರಿಯಲ್ಲ, ಹೈಕೋರ್ಟ್ ಪರಿಗಣಿಸುವ ಮೊದಲು ಕ್ಷಮೆ ಮುಖ್ಯ, ಪ್ರಜ್ವಲ್ ರೇವಣ್ಣ ಅರ್ಜಿಗೆ ಸುಪ್ರೀಂ ಕೆಂಡ!