ಹಂಪಿ ನದಿಯಲ್ಲಿ ಕೊಚ್ಚಿಹೋದ ಇಬ್ಬರು ಯುವಕರು

Published : Dec 28, 2022, 09:50 PM IST
ಹಂಪಿ ನದಿಯಲ್ಲಿ ಕೊಚ್ಚಿಹೋದ ಇಬ್ಬರು ಯುವಕರು

ಸಾರಾಂಶ

ವಿಶ್ವವಿಖ್ಯಾತ ಹಂಪಿ ನದಿಯಲ್ಲಿ ಈಜಲು ತೆರಳಿದ ಇಬ್ಬರು ಯುವಕರು ನೀರಿನಲ್ಲಿ ಕೊಚ್ಚಿ ಹೋದ ಘಟನೆ ಬುಧವಾರ ನಡೆದಿದೆ. ಬೆಂಗಳೂರು ಮೂಲದ ಹರೀಶ್‌ (18) ಮತ್ತು ಜೀವನ್‌ (18) ನದಿಯಲ್ಲಿ ಕೊಚ್ಚಿ ಹೋದ ಯುವಕರು.

ವಿಜಯನಗರ (ಡಿ.28): ವಿಶ್ವವಿಖ್ಯಾತ ಹಂಪಿ ನದಿಯಲ್ಲಿ ಈಜಲು ತೆರಳಿದ ಇಬ್ಬರು ಯುವಕರು ನೀರಿನಲ್ಲಿ ಕೊಚ್ಚಿ ಹೋದ ಘಟನೆ ಬುಧವಾರ ನಡೆದಿದೆ. ಬೆಂಗಳೂರು ಮೂಲದ ಹರೀಶ್‌ (18) ಮತ್ತು ಜೀವನ್‌ (18) ನದಿಯಲ್ಲಿ ಕೊಚ್ಚಿ ಹೋದ ಯುವಕರು. ಸ್ನೇಹಿತರೊಂದಿಗೆ ಹಂಪಿ ಪ್ರವಾಸಕ್ಕೆ ಆಗಮಿಸಿದ್ದ ಯುವಕರು,ಪುರಂದರ ದಾಸರ ಮಂಟಪದ ಬಳಿ ಹರಿಯುತ್ತಿರುವ ನದಿಯಲ್ಲಿ ಈಜಲು ತೆರಳಿ ನೀರು ಪಾಲಾಗಿದ್ದಾರೆ.

ಗೆಳೆಯನ ಜನ್ಮದಿನದ ಹಿನ್ನೆಲೆಯಲ್ಲಿ ಬಳ್ಳಾರಿಗೆ ಬುಧವಾರ ಆಗಮಿಸಿದ್ದ ಯುವಕರು ಎಂಟು ಜನ ಗೆಳೆಯರೊಂದಿಗೆ ಹಂಪಿಗೆ ಭೇಟಿ ನೀಡಿದ್ದರು. ಮಧ್ಯಾಹ್ನ 3 ಗಂಟೆ ಸುಮಾರಿಗೆ ಪುರಂದರ ಮಂಟಪದ ಹತ್ತಿರ ಹಾದು ಹೋಗಿರುವ ನದಿಯಲ್ಲಿ ಈಜಾಡಲು ನೀರಿಗೆ ಇಳಿದಿದ್ದಾರೆ. ನೀರಿನ ಸೆಳೆತಕ್ಕೆ ಸಿಲುಕಿ ಹೊರ ಬರಲಾರದೇ ಜಲ ಸಮಾಧಿಯಾಗಿದ್ದಾರೆ. ಹಂಪಿ ಪೊಲೀಸರು, ಅಗ್ನಿಶಾಮಕದ ದಳದ ಸಿಬ್ಬಂದಿ ಹಾಗೂ ನುರಿತ ಈಜುಗಾರರು, ನಾಪತ್ತೆಯಾದ ಯುವಕರ ಶೋಧ ನಡೆಸಿದ್ದಾರೆ. ಹಂಪಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಮ್ಮನನ್ನು ಉಳಿಸಲು ಹೋದ ಮೂರು ಅಕ್ಕಂದಿರು ನೀರುಪಾಲು: ವಿಜಯಪುರದಲ್ಲಿ ಮನಕಲಕುವ ಘಟನೆ

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಚಿಕ್ಕಮಗಳೂರು ಕಾಂಗ್ರೆಸ್ ಕಾರ್ಯಕರ್ತ ಗಣೇಶ್ ಗೌಡ ಹಂತಕರನ್ನು ಸುಮ್ಮನೆ ಬಿಡಲ್ಲ: ಸಿಎಂ ಡಿಸಿಎಂ
ಮಧುಗಿರಿ: ಕದ್ದ ಎಟಿಎಂ ಭಾರ ಇದೆ ಎಂದು ರಸ್ತೆಯಲ್ಲೇ ಬಿಟ್ಟು ಹೋದರು