ಉಡುಪಿ;  ನಿಶ್ಚಿತಾರ್ಥವಾದ ಯುವತಿಗೆ ಚಾಕು ಇರಿದ ಪಾಗಲ್ ಪ್ರೇಮಿ!

Published : Aug 30, 2021, 11:40 PM IST
ಉಡುಪಿ;  ನಿಶ್ಚಿತಾರ್ಥವಾದ ಯುವತಿಗೆ ಚಾಕು ಇರಿದ ಪಾಗಲ್ ಪ್ರೇಮಿ!

ಸಾರಾಂಶ

* ಪ್ರೇಯಸಿಗೆ,  ಪ್ರಿಯಕರನಿಂದ ಚೂರಿ ಇರಿತ ಪ್ರಕರಣ * ಚಿಕಿತ್ಸೆ ಫಲಕಾರಿಯಾಗದೇ ಯುವತಿ ಆಸ್ಪತ್ರೆಯಲ್ಲಿ ಸಾವು * ಸೌಮ್ಯಶ್ರೀ ಭಂಡಾರಿ ಇರಿತಕ್ಕೊಳಗಾಗಿ ಸಾವನ್ನಪ್ಪಿದ ಯುವತಿ * ಸೌಮ್ಯಳಿಗೆ ಚೂರಿ ಇರಿದು, ತಾನು ಕತ್ತು ಕತ್ತರಿಸಿಕೊಂಡ ಸಂದೇಶ್ ಕುಲಾಲ್  

ಉಡುಪಿ(ಆ. 30)  ಪ್ರೇಯಸಿಗೆ ಚಾಕುವಿನಿಂದ ಇರಿದ ಪಾಗಲ್ ಪ್ರೇಮಿ ನಂತರ ತಾನೂ ಕೂಡ ಆತ್ಮಹತ್ಯೆಗೆ ಯತ್ನಿಸಿದ್ದಾನೆ.  ಘಟನೆ ಉಡುಪಿ ಅಂಬಾಗಿಲು ಸಮೀಪದ ಸಂತೆಕಟ್ಟೆಯ ಪೆಟ್ರೋಲ್‌ ಬಂಕ್‌ ಬಳಿಯಲ್ಲಿ ಘಟನೆ ನಡೆದಿದೆ.

ಸೌಮ್ಯಶ್ರೀ ಭಂಡಾರಿ ಇರಿತಕ್ಕೊಳಗಾಗಿ ಸಾವನ್ನಪ್ಪಿದ್ದಾರೆ. ಸೌಮ್ಯಳಿಗೆ ಚೂರಿ ಇರಿದು, ತಾನು ಕತ್ತು ಕೊಯಿದುಕೊಂಡ ಸಂದೇಶ್ ಕುಲಾಲ್ ಪರಿಸ್ಥಿತಿ ಚಿಂತಾಜನಕವಾಗಿದೆ.  ಸೌಮ್ಯ ಕೆಲಸ ಮುಗಿಸಿ, ಮನೆಗೆ ಹೋಗುತ್ತಿದ್ದಾಗ ಸ್ಕೂಟಿಯನ್ನು ತಡೆದ ಸಂದೇಶ್ ಪ್ರಶ್ನೆ ಮಾಡಿದ್ದಾನೆ.

ಪ್ರೀತಿ ನಿರಾಕರಿಸಿದವಳಿಗೆ ಮನಬಂದಂತೆ ಇರಿದ

ಪೆಟ್ರೋಲ್‌ ಬಂಕ್‌ ನಿಂದ ಸ್ವಲ್ಪ ಮುಂದಕ್ಕೆ ಬರುತ್ತಿದ್ದಂತೆಯೇ ಪರಸ್ಪರ ಜಗಳಕ್ಕೆ ಇಳಿದಿದ್ದಾರೆ. ಜಗಳ ವಿಕೋಪಕ್ಕೆ ತಿರುಗುತ್ತಿದ್ದಂತೆಯೇ ಪ್ರೇಯಸಿಗೆ ಯುವಕ ಚಾಕುವಿನಿಂದ ಇರಿದಿದ್ದಾನೆ. ನಂತರದ ಯುವತಿ ಪ್ರಜ್ಞೆ ತಪ್ಪಿ ಬೀಳುತ್ತಿದ್ದಂತೆಯೇ ತಾನೂ ಕೂಡ ಚಾಕುವಿನಿಂದ ಇರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾನೆ.

ಗಂಭೀರವಾಗಿ ಗಾಯಗೊಂಡಿದ್ದ ಇಬ್ಬರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಯುವತಿ ಪ್ರಾಣ ಬಿಟ್ಟಿದ್ದಾಳೆ. ಯುವಕನ ಸ್ಥಿತಿಯೂ ಚಿಂತಾಜನಕವಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿ ಮಾಹಿತಿ ಕಲೆ ಹಾಕಿದ್ದಾರೆ.

ನಿಶ್ಚಿತಾರ್ಥವೇ ಕಾರಣ;  ವಾರದ ಹಿಂದೆ ಯುವತಿಗೆ ನಿಶ್ಚಿತಾರ್ಥ ಆಗಿತ್ತು, ಇದರಿಂದ ಕೋಪಗೊಂಡ ಯುವಕ ಕೃತ್ಯ ಎಸಗಿರುವ ಸಾಧ್ಯತೆ ಇದೆ ಎನ್ನಲಾಗಿದೆ. ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

28ರ ಜಿಮ್ ಟ್ರೈನರ್‌ಗೆ 42ರ ಮಹಿಳೆ ಜೊತೆ ಸಂಬಂಧ? ಯುವಕನ ಸಾವಿನ ಹಿಂದೆ ಆಂಟಿ ಕರಿನೆರಳು
ಕುಂಭಮೇಳದ ಮೊನಾಲಿಸಾ ನಿಗೂಢ ಕಣ್ಮರೆ! ಹುಡುಕಿ ಕೊಡಿ ಎಂದ ಪತಿ ಫರ್ಮಾನ್​ ಖಾನ್: ಎಲ್ಲಿ ಹೋದಳು ಬಾಲೆ