
ಉಡುಪಿ, [ಜ.03]: ಜೆಡಿಎಸ್ ವಕ್ತಾರ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರವ ಘಟನೆ ಉಡುಪಿ ಜಿಲ್ಲೆಯ ಕೊರಂಗ್ರಪಾಡಿಯಲ್ಲಿ ನಡೆದಿದೆ.
ಪ್ರದೀಪ್ ಜಿ ಬೈಲೂರು( 37) ನೇಣಿಗೆ ಶರಣಾದ ವ್ಯಕ್ತಿ. ತಂದೆ-ತಾಯಿ ತೀರ್ಥಹಳ್ಳಿಗೆ ತೆರಳಿದ್ದಾಗ, ಇಂದು [ಶುಕ್ರವಾರ] ಕೊರಂಗ್ರಪಾಡಿಯಲ್ಲಿರುವ ನಿವಾಸದಲ್ಲಿ ಪ್ರದೀಪ್ ಜಿ ಬೈಲೂರು ನೇಣಿಗೆ ಶರಣಾಗಿದ್ದಾರೆ.
ಅಪರಾಧ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಉಡುಪಿ ಜಿಲ್ಲಾ ಜೆಡಿಎಸ್ ವಕ್ತಾರರಾಗಿದ್ದ ಪ್ರದೀಪ್ ಅವರು ಸಹಕಾರಿ ಬ್ಯಾಂಕ್ ಅನ್ನು ನಡೆಸುತ್ತಿದ್ದರು. ಅವರು ಆರ್ಥಿಕ ಬಿಕ್ಕಟ್ಟಿನಿಂದಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗುತ್ತಿದೆ.
ಆದ್ರೆ, ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದುಬಂದಿಲ್ಲ. ಈ ಬಗ್ಗೆ ಉಡುಪಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರ ತನಿಖೆ ಬಳಿಕ ಆತ್ಮಹತ್ಯೆಗೆ ನಿಜಾಂಶ ಹೊರಬರಲಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ