ಮೀನು ಕದ್ದ ಆರೋಪ: ಕೂಲಿ ಮಾಡುವ ಮಹಿಳೆಯನ್ನ ಮರಕ್ಕೆ ಕಟ್ಟಿಹಾಕಿ ಹಲ್ಲೆ! ನಿಜಕ್ಕೂ ನಡೆದಿದ್ದೇನು?

Published : Mar 21, 2025, 07:23 AM ISTUpdated : Mar 21, 2025, 09:57 AM IST
ಮೀನು ಕದ್ದ ಆರೋಪ: ಕೂಲಿ ಮಾಡುವ ಮಹಿಳೆಯನ್ನ ಮರಕ್ಕೆ ಕಟ್ಟಿಹಾಕಿ ಹಲ್ಲೆ! ನಿಜಕ್ಕೂ ನಡೆದಿದ್ದೇನು?

ಸಾರಾಂಶ

ಇಲ್ಲಿನ ಮಲ್ಪೆ ಮೀನುಗಾರಿಕಾ ಬಂದರಿನಲ್ಲಿ ಮೀನು ಕದ್ದ ಆರೋಪದ ಮೇಲೆ ಮಹಿಳೆಯೊಬ್ಬಳನ್ನು ಮರಕ್ಕೆ ಕಟ್ಟಿ ಹಾಕಿ ಸಾರ್ವಜನಿಕರೆದುರು ಅಮಾನುಷವಾಗಿ ಥಳಿಸಿದ ಘಟನೆ ಮಂಗಳವಾರ ನಡೆದಿದೆ. ಘಟನೆ ಬಗ್ಗೆ ಎಲ್ಲೆಡೆ ತೀವ್ರ ಆಕ್ರೋಶ ವ್ಯಕ್ತವಾಗಿದೆ.

ಉಡುಪಿ (ಮಾ.21): ಇಲ್ಲಿನ ಮಲ್ಪೆ ಮೀನುಗಾರಿಕಾ ಬಂದರಿನಲ್ಲಿ ಮೀನು ಕದ್ದ ಆರೋಪದ ಮೇಲೆ ಮಹಿಳೆಯೊಬ್ಬಳನ್ನು ಮರಕ್ಕೆ ಕಟ್ಟಿ ಹಾಕಿ ಸಾರ್ವಜನಿಕರೆದುರು ಅಮಾನುಷವಾಗಿ ಥಳಿಸಿದ ಘಟನೆ ಮಂಗಳವಾರ ನಡೆದಿದೆ. ಘಟನೆ ಬಗ್ಗೆ ಎಲ್ಲೆಡೆ ತೀವ್ರ ಆಕ್ರೋಶ ವ್ಯಕ್ತವಾಗಿದೆ.

ಹಲ್ಲೆಗೊಳಗಾದ ಮಹಿಳೆ ಮಲ್ಪೆ ಠಾಣೆಗೆ ದೂರು ನೀಡಿದ್ದು, ಹಲ್ಲೆ ನಡೆಸಿದ ಲಕ್ಷ್ಮೀಬಾಯಿ, ಶಿಲ್ಪಾ, ಸುಂದರ್‌ನನ್ನು ಬಂಧಿಸಲಾಗಿದೆ. ವಿಜಯನಗರ ಜಿಲ್ಲೆಯ ಈ ದಲಿತ ಮಹಿಳೆ 5 ವರ್ಷಗಳಿಂದ ಮಲ್ಪೆ ಬಂದರಿನಲ್ಲಿ ಮೀನು ಬುಟ್ಟಿ ಹೊರುವ ಕೂಲಿ ಕೆಲಸ ಮಾಡುತಿದ್ದರು. ಬೋಟೊಂದರಿಂದ ಮೀನು ಖಾಲಿ ಮಾಡಿ, ತಲೆ ಮೇಲೆ ಬುಟ್ಟಿ ಹೊತ್ತು ಮನೆಗೆ ಹೋಗುತ್ತಿದ್ದರು. ಆಗ ಆಕೆಯ ಬುಟ್ಟಿಯಲ್ಲಿ ಚಟ್ಲಿ (ಸಿಗಡಿ) ಮೀನು ಇದ್ದು, ಅದನ್ನು ಆಕೆ ಕದ್ದುಕೊಂಡು ಹೋಗುತ್ತಿದ್ದರು ಎಂದು ಆರೋಪಿಸಿ ಲಕ್ಷ್ಮೀ, ಶಿಲ್ಪಾ ಮತ್ತು ಬೋಟಿನ ಕಾರ್ಮಿಕರಾದ ಸುಂದರ, ಚಂದ್ರ ಮತ್ತು ಇತರರ ಸೇರಿ ಆಕೆಯನ್ನು ಎಳೆದಾಡಿ, ಅವಾಚ್ಯವಾಗಿ ನಿಂದಿಸಿದ್ದಾರೆ. ಆಕೆಯನ್ನು ಮರಕ್ಕೆ ಕಟ್ಟಿ ಹಾಕಿ, ಕೆನ್ನೆಗೆ ಹೊಡೆದಿದ್ದಾರೆ.

ಇದನ್ನೂ ಓದಿ: ನಂಜನಗೂಡು: ₹14000ಕ್ಕೆ 2 ವರ್ಷ ಹೆಣ್ಣು ಮಗು ಮಾರಿದ ತಂದೆ, ತಾಯಿ ಬಂಧನ

ಈ ಹಲ್ಲೆಯ ವಿಡಿಯೋ ಇದೀಗ ವೈರಲ್ ಆಗಿದ್ದು, ಈ ವಿಡಿಯೋದ ಆಧಾರದಲ್ಲಿ 3 ಮಂದಿಯನ್ನು ದಲಿತ ದೌರ್ಜನ್ಯ ತಡೆ ಕಾಯ್ದೆಯಡಿ ಬಂಧಿಸಲಾಗಿದೆ. ಇನ್ನೊಬ್ಬ ಶಂಕಿತನನ್ನು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸಲಾಗುತ್ತಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಥಾಯ್ಲೆಂಡ್‌ನಿಂದ ರಾಜ್ಯಕ್ಕೆ ಹೆಚ್ಚು ಹೈಡ್ರೋ ಗಾಂಜಾ!
ಖ್ಯಾತ ಸ್ಟಾರ್ ನಟನಿಗೆ ಬಿಷ್ಟೋಯ್ ಗ್ಯಾಂಗ್ ಬೆದರಿಕೆ! ಆತಂಕದಲ್ಲಿರುವ ಫ್ಯಾನ್ಸ್, ಏನಾಗ್ತಿದೆ ಅಲ್ಲೀಗ?