ಲಾಯರ್ ಮನೆಗೆ ದೋಚಲು ಕಳ್ಳನಿಗೆ ನೆರವಾದ ಪ್ರೇಯಸಿ, 24 ಗಂಟೆಯೊಳಗೆ ಆರೋಪಿಗಳು ಅಂದರ್

Published : Aug 03, 2022, 03:03 PM IST
ಲಾಯರ್ ಮನೆಗೆ ದೋಚಲು ಕಳ್ಳನಿಗೆ  ನೆರವಾದ ಪ್ರೇಯಸಿ, 24 ಗಂಟೆಯೊಳಗೆ ಆರೋಪಿಗಳು ಅಂದರ್

ಸಾರಾಂಶ

ಉಡುಪಿಯ ವಕೀಲೆಯೊಬ್ಬರ ಮನೆಗೆ ಇತ್ತೀಚೆಗೆ ಕಳ್ಳನೊಬ್ಬ ಕನ್ನ ಹಾಕಿದ್ದ. ಲಕ್ಷಾಂತರ ರೂಪಾಯಿ ದೋಚಿ ಪರಾರಿಯಾಗಿದ್ದ ಚೋರನನ್ನು 24 ಗಂಟೆ ಒಳಗೆ ಪೊಲೀಸರು ಬಂಧಿಸಿದ್ದಾರೆ.

ಉಡುಪಿ (ಆ.3): ಉಡುಪಿಯ ವಕೀಲೆಯೊಬ್ಬರ ಮನೆಗೆ ಇತ್ತೀಚೆಗೆ ಕಳ್ಳನೊಬ್ಬ ಕನ್ನ ಹಾಕಿದ್ದ. ಲಕ್ಷಾಂತರ ರೂಪಾಯಿ ದೋಚಿ ಪರಾರಿಯಾಗಿದ್ದ ಚೋರನನ್ನು 24 ಗಂಟೆ ಒಳಗೆ ಪೊಲೀಸರು ಬಂಧಿಸಿದ್ದಾರೆ. ಈತನ ಬಂಧನದ ನಂತರ ಬೆಳಕಿಗೆ ಬಂದ ಕಳ್ಳತನದ ಕಥೆ ರೋಚಕವಾಗಿದೆ! ನಗರದ ಕೋರ್ಟ್ ಹಿಂಭಾಗದಲ್ಲಿದ್ದ ವಕೀಲೆಯ ಮನೆಗೆ ನುಗ್ಗಿದ್ದ ಕಳ್ಳ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳ್ಳತನ ಮಾಡಿದ್ದ. ಉಡುಪಿ ನಗರ ಠಾಣೆ ಪೊಲೀಸರು ಕೇವಲ 24 ತಾಸಿನೊಳಗೆ ಆತನನ್ನು  ಬಂಧಿಸಿ ಜೈಲಿಗಟ್ಟಿದ್ದಾರೆ. ಈ ಪ್ರಕರಣ ಬೇಧಿಸಿದ ಉಡುಪಿ ಪೊಲೀಸರ ಕಾರ್ಯಕ್ಕೆ ವಕೀಲರ ಸಂಘದ ಅಧ್ಯಕ್ಷ ಬಿ.ನಾಗರಾಜ್ ಮತ್ತು  ಕಳ್ಳತನಕ್ಕೊಳಗಾದ ಮನೆಯ ವಕೀಲೆ ಮೆಚ್ಚುಗೆ ಸೂಚಿಸಿದ್ದಾರೆ. 

ವಕೀಲೆಯ ಮನೆ ಟಾರ್ಗೆಟ್ ಆಗಿದ್ದು ಹೇಗೆ ಗೊತ್ತಾ?
ಆತ ಖತರ್ನಾಕ್ ಕಳ್ಳ ಉಡುಪಿಯ ಹಿರಿಯ ವಕೀಲೆ ವಾಣಿ ವಿ ರಾವ್ ಅವರ ಮನೆಗೆ ಆತ ಹಂಚು ಹಾಕಿದ್ದ. ನಗರದ ಹೃದಯ ಭಾಗದಲ್ಲಿ ಇರುವ ಮನೆಯನ್ನು ಆತ ಆಯ್ಕೆ ಮಾಡಿಕೊಳ್ಳುವುದಕ್ಕೆ ಅವನ ಪ್ರೇಯಸಿ ಸಹಕರಿಸಿದ್ದಳು.  ಪ್ರೇಯಸಿ ನೀಡಿದ ಮಾಹಿತಿಯಂತೆಯೇ ವಕೀಲೆಯ ಮನೆಗೆ ನುಗ್ಗಿದ್ದ.

ಹಾಡಹಗಲೇ ಮನೆಗೆ ನುಗ್ಗಿದಾತ ಸುಮಾರು 25 ಲಕ್ಷ ಮೌಲ್ಯದ ಚಿನ್ನಾಭರಣ ಮತ್ತು ನಗದು ದೋಚಿದ್ದ.ತಕ್ಷಣ ವಕೀಲೆ ವಾಣಿ ವಿ.ರಾವ್ ಪೊಲೀಸರಿಗೆ ದೂರು ನೀಡುತ್ತಾರೆ. ಮನೆಯ ಸುತ್ತಮುತ್ತ ಇದ್ದ ಸಿಸಿ ಕ್ಯಾಮೆರಾ ಪರಿಶೀಲಿಸಿದ ಪೊಲೀಸರಿಗೆ ಕಳ್ಳನ ಜಾಡು ದೂರದ ಬಾಗಲಕೋಟೆಯಲ್ಲಿರುವುದು ಗೊತ್ತಾಗುತ್ತದೆ!

ಕಳ್ಳನಿಗೆ ಐಡಿಯಾ ಕೊಟ್ಟಿದ್ದೇ  ಮಾಜಿ ಪ್ರೇಯಸಿ!
ಕೆಲವು ವರ್ಷಗಳ ಹಿಂದೆ ವಕೀಲೆ ವಾಣಿ ಅವರ ಮನೆಯಲ್ಲಿ ಯುವತಿಯೊಬ್ಬಳು ಕೆಲಸಕ್ಕಿದ್ದಳು.ಆಕೆ ಈ ಮನೆಯಲ್ಲಿದ್ದ ಬೆಲೆ ಬಾಳುವ ಚಿನ್ನಾಭರಣಗಳನ್ನು ನೋಡಿ ,ಆರೋಪಿ ಪ್ರಿಯತಮನಿಗೆ ಎಲ್ಲಾ ಮಾಹಿತಿ ಹೇಳಿದ್ದಳು. ಲಾರಿ ಚಾಲಕನಾಗಿರುವ ಆರೋಪಿ ಮುತ್ತಪ್ಪ ಬಸಪ್ಪ ಮಾವರಾಣಿ (27) ಉಡುಪಿಗೆ ಪದೇ ಪದೇ ಬರುತ್ತಿದ್ದ. ಇದೇ ಮನೆಯಲ್ಲಿ‌ ಕಳ್ಳತನ ನಡೆಸಲು ಕಾದು ಕುಳಿತಿದ್ದ. 

ಮನೆಗೆ ಸಿಂಪಡಿಸಿದ್ದ ತಿಗಣೆ ನಾಶಕ ವಾಸನೆಗೆ ಬಾಲಕಿ ಸಾವು, ಪೋಷಕರ ಜೀವನ್ಮರಣ

ಉಡುಪಿಗೆ ಬಂದಾಗ ಪ್ರಿಯತಮೆಯನ್ನು ಭೇಟಿಯಾಗುತ್ತಿದ್ದ.ಈ ಸಂದರ್ಭದಲ್ಲಿ ಪ್ರೇಯಸಿ ಕಳ್ಳತನದ ಪ್ಲ್ಯಾನ್ ರೂಪಿಸಿದ್ದಾಳೆ. ಇದನ್ನು ಕಾರ್ಯರೂಪಕ್ಕೆ ತಂದ ಮುತ್ತಪ್ಪ, ವಕೀಲೆ ಮನೆಯಿಂದ ಕಳ್ಳತನ ಮಾಡಿ ಪರಾರಿಯಾಗಿದ್ದಾನೆ.

ಪತ್ನಿಯನ್ನು ಕೊಂದು ತಾನೂ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಪತಿ!

ಆದರೆ ತನಿಖೆಯ ನೇತೃತ್ವ ವಹಿಸಿದ ಉಡುಪಿ ಪೊಲೀಸ್ ನಿರೀಕ್ಷಕ ಪ್ರಮೋದ್ ಕುಮಾರ್ ಅವರ ತಂಡ ಕೇವಲ 24 ತಾಸಿನೊಳಗೆ ಕಳ್ಳ ಮತ್ತು ಆತನ ಪ್ರೇಯಸಿಯ ಹೆಡೆಮುರಿ ಕಟ್ಟಿ ಜೈಲಿಗಟ್ಟಿದ್ದಾರೆ. ಕಳವಾದ ಚಿನ್ನಾಭರಣ ಮತ್ತು ನಗದನ್ನು ಆರೋಪಿಯಿಂದ ವಶಪಡಿಸಿಕೊಳ್ಳಲಾಗಿದೆ. ಈ ಮೂಲಕ ವಕೀಲೆಗೆ ಉಡುಪಿ ಪೊಲೀಸರು ಶೀಘ್ರ ನ್ಯಾಯ ಒದಗಿಸಿದ್ದಾರೆ. ಪೊಲೀಸರ ಕಾರ್ಯಾಚರಣೆ ಮತ್ತು ಚಾಕಚಕ್ಯತೆಗೆ ವಕೀಲೆ ವಾಣಿ ರಾವ್ ಮತ್ತು ವಕೀಲರ ಸಂಘದ ಅಧ್ಯಕ್ಷರು ಮೆಚ್ಚುಗೆ ಜೊತೆಗೆ ಕೃತಜ್ಞತೆ ಸಲ್ಲಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ರಿಯಲ್ ಎಸ್ಟೇಟ್ ಉದ್ಯಮಿಯ ಬರ್ಬರ ಹತ್ಯೆ: ಮಗ ಓದುತ್ತಿದ್ದ ಶಾಲೆಯ ಮುಂದೆಯೇ ಕೃತ್ಯ
ಭಜರಂಗ ದಳ ಕಾರ್ಯಕರ್ತರಿಂದ ಕಾಂಗ್ರೆಸ್ ನಾಯಕ ಗಣೇಶ್ ಭೀಕರ ಹ*ತ್ಯೆಗೆ ಕಾರಣ ಏನು?