
ಗುರುಗ್ರಾಮ (ಮಾ. 28) ಗುರುಗ್ರಾಮ-ದ್ವಾರಕಾ ಎಕ್ಸ್ ಪ್ರೆಸ್ ವೇ ಬಳಿ ನಿರ್ಮಾಣ ಹಂತದ ಮೇಲ್ಸೋತುವೆಯೊಂದು ಕುಸಿದುಬಿದ್ದಿದೆ. ದುರಂತದಲ್ಲಿ ಮೂವರು ಕಾರ್ಮಿಕರು ಗಂಭೀರವಾಗಿ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.
ಮೇಲ್ಸೇತುವೆ ಕುಸಿದುಬಿದ್ದಿರುವ ವಿಚಾರ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ದೌಡಾಯಿಸಿರುವ ಅಗ್ನಿಶಾಮಕ ದಳದ ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆ ನಡೆಸಿ ಕಾರ್ಮಿಕರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದಾರೆ. ಪೊಲೀಸರು ಪರಿಸ್ಥಿತಿ ನಿಯಂತ್ರಣಕ್ಕೆ ತಂದಿದ್ದು ಜನರು ಈ ಪ್ರದೇಶದ ಕಡೆ ಬರದಂತೆ ನೋಡಿಕೊಳ್ಳಲಾಗಿದೆ.
ರಾಯಘಡದ ಕಟ್ಟಡ ಕುಸಿತ; ಕಣ್ಣೀರ ಕತೆಗಳು
ದೌಲತಾಬಾದ್ ಬಳಿ ಗುರುಗ್ರಾಮ-ದ್ವಾರಕಾ ಎಕ್ಸ್ ಪ್ರೆಸ್ ವೇನಲ್ಲಿ ಭಾನುವಾರ ಬೆಳಿಗ್ಗೆ 7.30ರ ಸುಮಾರಿಗೆ ನಿರ್ಮಾಣ ಹಂತದ ಸೇತುವೆಯ ಒಂದು ಭಾಗ ಕುಸಿದು ಬಿದ್ದಿದೆ. ಪರಿಣಾಮ ಮೂವರು ಕಾರ್ಮಿಕರು ಗಾಯಗೊಂಡಿದ್ದಾರೆ. ಅನೇಕ ದಿನಗಳಿಂದ ಕೆಲಸ ಪ್ರಗತಿಯಲ್ಲಿತ್ತು.
ಘಟನೆಗೆ ಏನು ಕಾರಣ ಎಂಬುದನ್ನು ಪತ್ತೆಹಚ್ಚಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ. ಕಳಪೆ ಕಾಮಗಾರಿಯೇ ಇದಕ್ಕೆಲ್ಲ ಕಾರಣ ಎಂದು ಸಾರ್ವಜನಿಕರು ದೂರಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ