ಜ್ಯೂವೆಲ್ಲರ್ಸ್ ಮಾಲೀಕನ ಮನೆ ಮೇಲೆ ಐಟಿ ದಾಳಿ; ಬಿಹಾರ ಮೂಲದ ಅಪ್ರಾಪ್ತ ಬಾಲಕಿಯರು ಪತ್ತೆ!

Published : Dec 18, 2023, 09:10 AM ISTUpdated : Dec 18, 2023, 09:13 AM IST
 ಜ್ಯೂವೆಲ್ಲರ್ಸ್ ಮಾಲೀಕನ ಮನೆ ಮೇಲೆ ಐಟಿ ದಾಳಿ; ಬಿಹಾರ ಮೂಲದ ಅಪ್ರಾಪ್ತ ಬಾಲಕಿಯರು ಪತ್ತೆ!

ಸಾರಾಂಶ

ತೆರಿಗೆ ವಂಚನೆ ಪ್ರಕರಣ ಸಂಬಂಧ ಜ್ಯುವೆಲ್ಲರ್ಸ್ ಮಾಲೀಕನ ಮನೆ ಮೇಲೆ ನಡೆದ ಐಟಿ ದಾಳಿ ವೇಳೆ ಇಬ್ಬರು ಆಪ್ರಾಪ್ತ ಬಾಲಕಿಯರು ಪತ್ತೆಯಾಗಿದ್ದಾರೆ. ಬಿಹಾರ ಮೂಲದ ಮಕ್ಕಳನ್ನು ಕಾನೂನುಬಾಹಿರವಾಗಿ ಮನೆಯಲ್ಲಿಟ್ಟುಕೊಂಡಿರುವ ಮಾಲೀಕ. ಮಕ್ಕಳು ಪತ್ತೆಯಾಗ್ತಿದ್ದಂತೆ ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಮಾಹಿತಿ ನೀಡಿದ ಅಧಿಕಾರಿಗಳು. ಬಾಲಕಿಯರನ್ನು ರಕ್ಷಣೆ ಮಾಡಲಾಗಿದೆ.

ಬೆಂಗಳೂರು (ಡಿ.18): ತೆರಿಗೆ ವಂಚನೆ ಮಾಡಿರುವ ಪ್ರಕರಣದಲ್ಲಿ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಆಭೂಷಣ್ ಜ್ಯುವೆಲ್ಲರಿ ಶಾಪ್ ಮಾಲೀಕನ ಮನೆಮೇಲೆ ದಾಳಿ ನಡೆಸಿದ ವೇಳೆ ಮನೆಯಲ್ಲಿ ಇಬ್ಬರು ಅಪ್ರಾಪ್ತ ಹೆಣ್ಣುಮಕ್ಕಳು ಪತ್ತೆಯಾಗಿದ್ದಾರೆ. ಕಳೆದೆರಡು ದಿನಗಳಿಂದ  ಜ್ಯುವೆಲ್ಲರಿ ಶಾಪ್ ಲೆಕ್ಕ ಪತ್ರ ಪರಿಶೀಲನೆ ನಡೆಸುತ್ತಿರುವ ಅಧಿಕಾರಿಗಳು. ನಿವಾಸದ ಮೇಲೂ ದಾಳಿ ನಡೆಸಿ ಮನೆಯಲ್ಲಿ ಶೋಧ ನಡೆಸುವಾಗ ಕಾನೂನುಬಾಹಿರವಾಗಿ ಇಬ್ಬರು ಅಪ್ರಾಪ್ತ ಬಾಲಕಿಯರನ್ನಿರಿಸಿಕೊಂಡಿರುವುದು ಬೆಳಕಿಗೆ ಬಂದಿದೆ. ಈ ಸಂಬಂಧ ಅಭೂಷಣ್ ಮೇಲೆ ಮತ್ತೊಂದು ಎಫ್‌ಐಆರ್ ದಾಖಲು ಮಾಡಿರುವ ಅಧಿಕಾರಿಗಳು.

10 ಹಾಗೂ 8 ವರ್ಷದ ಇಬ್ಬರು ಅಪ್ರಾಪ್ತ ಬಾಲಕಿಯರನ್ನು ಮನೆಯಲ್ಲಿಟ್ಟುಕೊಂಡಿರುವ ಮಾಲೀಕ. ಯಡಿಯೂರಿನ ಸಾಕಮ್ಮ ಗಾರ್ಡನ್ ನಲ್ಲಿರುವ ಮನೆ. ಮನೆಯಲ್ಲಿ ಅಪ್ರಾಪ್ತ ಮಕ್ಕಳಿರುವುದು ಪತ್ತೆಯಾಗುತ್ತಿದ್ದಂತೆ ಹಿರಿಯ ಪೊಲೀಸರಿಗೆ ಮಾಹಿತಿ ನೀಡಿದ ಅಧಿಕಾರಿಗಳು. ಮಾಲಿಕರಾದ ಅಶೋಕ್ ಕುಮಾರ್, ಶ್ರೇಯಸ್ ಮತ್ತು ಗೌರವ್ ಎಂಬುವವರ ಮೇಲೆ ಜಯನಗರ ಪೊಲೀಸ್ ಠಾಣೆಯಲ್ಲಿ ಜೆಜೆ ಆ್ಯಕ್ಟ್ ಸೆಕ್ಷನ್ 79 & ಚೈಲ್ಡ್ ಲೇಬರ್ ಆ್ಯಕ್ಟ್ ಸೆಕ್ಷನ್ 3 ಮತ್ತು 14 ಅಡಿ ಎಫ್ಐಆರ್ ದಾಖಲಿಸಿದ ಪೊಲೀಸರು. ಸದ್ಯ ಇಬ್ಬರು ಅಪ್ರಾಪ್ತ ಹೆಣ್ಣು ಮಕ್ಕಳನ್ನ ರಕ್ಷಣೆ ಮಾಡಿದ ಐಟಿ ಅಧಿಕಾರಿಗಳು. ಬಳಿಕ ಪ್ರಾಪ್ತ ಮಕ್ಕಳು ಸಿದ್ದಾಪುರದ ಬಾಲ ರಕ್ಷಣಾ ಕೇಂದ್ರದಲ್ಲಿ ವಾಸ್ತವ್ಯಕ್ಕೆ ವ್ಯವಸ್ಥೆ ಮಾಡಿದ ಅಧಿಕಾರಿಗಳು.

ರೈಲ್ವೆ ಶೌಚಾಲಯದಲ್ಲಿ ಪಿಸ್ತೂಲ್ ಬಿಟ್ಟು ಹೋದ ಪೊಲೀಸಪ್ಪ! ದುಷ್ಕರ್ಮಿಗಳ ಕೈಗೆ ಸಿಕ್ಕಿದ್ರೆ ಏನು ಗತಿ?

ಬಿಹಾರದ ಗಾಯಾ ಜಿಲ್ಲೆ ಮೂಲದ ಇಬ್ಬರು ಮಕ್ಕಳನ್ನು ಕಾನೂನುಬಾಹಿರವಾಗಿ ಕರೆತಂದು ಕಾನೂನು ಮನೆಯಲ್ಲಿಟ್ಟುಕೊಳ್ಳಲಾಗಿದೆ. ಮನೆಯ ಮಾಲಕೀ ಪಿಂಕಿ ಜೈನ್ ಆನಾರೋಗ್ಯದಲ್ಲಿದ್ದು ಅವರ ಆರೈಕೆಗೆ ಕರೆತಂದಿರುವುದಾಗಿ ಪೊಲೀಸರ ಮುಂದೆ ಬಾಯ್ಬಿಟ್ಟಿರುವ ಆರೋಪಿಗಳು. ಪ್ರಕರಣ ಸಂಬಂಧ ಜಯನಗರ ಪೊಲೀಸರಿಂದ ಮುಂದುವರಿದ ವಿಚಾರಣೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಖ್ಯಾತ ಸ್ಟಾರ್ ನಟನಿಗೆ ಬಿಷ್ಟೋಯ್ ಗ್ಯಾಂಗ್ ಬೆದರಿಕೆ! ಆತಂಕದಲ್ಲಿರುವ ಫ್ಯಾನ್ಸ್, ಏನಾಗ್ತಿದೆ ಅಲ್ಲೀಗ?
ಚಿಕ್ಕಮಗಳೂರು ಕಾಂಗ್ರೆಸ್ ಕಾರ್ಯಕರ್ತ ಗಣೇಶ್ ಗೌಡ ಹಂತಕರನ್ನು ಸುಮ್ಮನೆ ಬಿಡಲ್ಲ: ಸಿಎಂ ಡಿಸಿಎಂ