ನನಸಾಗದ ಐಎಎಸ್‌ ಕನಸು: ಬ್ಯಾಂಕ್‌ ಮ್ಯಾನೇಜರ್‌ ನೇಣಿಗೆ ಶರಣು

By Kannadaprabha NewsFirst Published Aug 8, 2023, 11:10 AM IST
Highlights

ಐಎಎಸ್‌  ಓದಬೇಕೆಂಬ ಕನಸು ನನಸಾಗದ ಹಿನ್ನೆಲೆ ಮತ್ತು ಜೀವನದಲ್ಲಿ ಜಿಗುಪ್ಸೆಗೊಂಡ ಬ್ಯಾಂಕ್‌ ವåಾ್ಯನೇಜರ್‌ ನೇಣಿಗೆ ಶರಣಾಗಿರುವ ಘಟನೆ ನ​ಗ​ರದಲ್ಲಿ ನಡೆದಿದೆ. ಕಾವೇರಿ ಗ್ರಾಮೀಣ ಬ್ಯಾಂಕ್‌ನ ಪ್ರಾದೇಶಿಕ ಕಚೇರಿಯ ವ್ಯವಸ್ಥಾಪಕಿ ಶ್ರುತಿ (30) ಆತ್ಮಹತ್ಯೆ ಮಾಡಿಕೊಂಡವರು. 

ಮಂಡ್ಯ  (ಆ.8) ಐಎಎಸ್‌  ಓದಬೇಕೆಂಬ ಕನಸು ನನಸಾಗದ ಹಿನ್ನೆಲೆ ಮತ್ತು ಜೀವನದಲ್ಲಿ ಜಿಗುಪ್ಸೆಗೊಂಡ ಬ್ಯಾಂಕ್‌ ವåಾ್ಯನೇಜರ್‌ ನೇಣಿಗೆ ಶರಣಾಗಿರುವ ಘಟನೆ ನ​ಗ​ರದಲ್ಲಿ ನಡೆದಿದೆ.

ಕಾವೇರಿ ಗ್ರಾಮೀಣ ಬ್ಯಾಂಕ್‌ನ ಪ್ರಾದೇಶಿಕ ಕಚೇರಿಯ ವ್ಯವಸ್ಥಾಪಕಿ ಶ್ರುತಿ (30) ಆತ್ಮಹತ್ಯೆ ಮಾಡಿಕೊಂಡವರು. ವಿನಾಯಕ ಬಡಾವಣೆಯ ಬಾಡಿಗೆ ಮನೆಯಲ್ಲಿ ಅವರು ನೇಣು ಬಿಗಿದುಕೊಂಡಿದ್ದು, ಐಎಎಸ್‌ ಕನಸು ಮತ್ತು ಜೀವನ ವೈಫಲ್ಯ ಸಾವಿಗೆ ಕಾರಣ ಎಂದು ಮರಣ ಪೂರ್ವ ಪತ್ರದಲ್ಲಿ ತಿಳಿಸಿದ್ದಾರೆ.

Latest Videos

ಕೊಳ್ಳೇಗಾಲದ ಮಲ್ಲಪ್ಪ ಎಂಬುವರ ಪುತ್ರಿ ಶ್ರುತಿ ಕಾವೇರಿ ಗ್ರಾಮೀಣ ಬ್ಯಾಂಕ್‌ನ ಉದ್ಯೋಗಿಯಾಗಿ ನೇಮಕಗೊಂಡು ಚಿಕ್ಕಮಗಳೂರಿನ ಶಾಖೆಯಲ್ಲಿ ಕಳೆದ ಏಳು ವರ್ಷ ಕಾರ್ಯನಿರ್ವಹಿಸಿ ಮಂಡ್ಯದ ಪ್ರಾದೇಶಿಕ ಕಚೇರಿಗೆ ಎರಡು ತಿಂಗಳ ಹಿಂದೆ ಬಂದಿದ್ದರು.

ಆತ್ಮಹತ್ಯೆ ಮಾಡಿಕೊಂಡ NEET ವಿದ್ಯಾರ್ಥಿಯ ಕೋಣೆಯಲ್ಲಿ ಸಿಕ್ಕ ನೋಟ್‌ನಲ್ಲಿತ್ತು 'ಹ್ಯಾಪಿ ಬರ್ತ್‌ಡೇ ಅಪ್ಪ..'

ವಿನಾಯಕ ಬಡಾವಣೆಯ ರಾಜಣ್ಣ ಅವರ ಮನೆಯನ್ನು ಬಾಡಿಗೆಗೆ ಪಡೆದು ಅವಿವಾಹಿತರಾಗಿದ್ದ ಕಾರಣ ಒಬರೇ ವಾಸವಾಗಿದ್ದರು. ಭಾನುವಾರ ರಾತ್ರಿ 7 ಗಂಟೆ ಸಮಯದಲ್ಲಿ ತಂದೆ ಮಲ್ಲಪ್ಪ ಅವರಿಗೆ ಕರೆ ಮಾಡಿದ ಶ್ರುತಿ ನಾನು ದೇವರ ಬಳಿ ಹೋಗುತ್ತಿದ್ದೇನೆ, ನನ್ನನ್ನು ಕ್ಷಮಿಸಿ ಎಂದು ಹೇಳಿ ಕರೆ ಕಡಿತ ಮಾಡಿದ್ದಾರೆ. ತಕ್ಷಣ ಮತ್ತೆ ಅವರು ಕರೆ ಮಾಡಿದಾಗ ಮೊಬೈಲ್‌ ಸ್ವಿಚ್‌ ಆಫ್‌ ಆಗಿತ್ತು. ಮಂಡ್ಯದಲ್ಲಿರುವ ಸಂಬಂಧಿಕರಿಗೆ ಮಲ್ಲಪ್ಪ ವಿಚಾರ ತಿಳಿಸಿದ್ದು, ಮನೆಯ ಬಳಿ ಹೋಗಿ ನೋಡುವಷ್ಟರಲ್ಲಿ ನೇಣಿಗೆ ಶರಣಾಗಿದ್ದರು.

ಆತ್ಮಹತ್ಯೆಗೆ ಮುನ್ನ ಡೆತ್‌ನೋಟ್‌ ಬರೆದಿರುವ ಶ್ರುತಿ ಐಎಎಸ್‌ ಮಾಡಬೇಕೆಂಬ ಕನಸು ನನಸಾಗಲಿಲ್ಲ, ಜೊತೆಗೆ ಜೀವನದಲ್ಲಿಯೂ ವೈಫಲ್ಯ ಕಂಡಿದ್ದೇನೆ ಎಂದು ತಿಳಿಸಿದ್ದಾರೆ. ಗ್ರಾಮಾಂತರ ಠಾಣಾ ಪೊಲೀಸರು ಭೇಟಿ ನೀಡಿ ಮಹಜರು ನಡೆಸಿ ಮೃತ ದೇಹವನ್ನು ಮಿಮ್ಸ…ಗೆ ರವಾನಿಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

2ನೇ ಮದ್ವೆಯಾಗಿದ್ಕೆ ಸತ್ತ ಮೇಲೂ ಸವತಿ ಕಾಡಿದ ಮೊದಲ ಹೆಂಡ್ತಿ: ‘ಆತ್ಮ’ದ ಕಿರುಕುಳಕ್ಕೆ ಬೇಸತ್ತ ಮಹಿಳೆ ಆತ್ಮಹತ್ಯೆ

click me!