ಬಸ್ಸಲ್ಲಿ ಮಲಗಿದ್ದ ವಿದ್ಯಾರ್ಥಿನಿಗೆ ಕಿಸ್‌ ಕೊಟ್ಟ ಅಪರಿಚಿತ

By Kannadaprabha NewsFirst Published Sep 17, 2021, 7:58 AM IST
Highlights

*   ಬೆಂಗಳೂರಿನ ಪೀಣ್ಯ ಸಮೀಪ ನಡೆದ ಘಟನೆ
*  ವಿದ್ಯಾರ್ಥಿನಿಗೆ ಚುಂಬಿಸಿ ಅಪರಿಚಿತ ಪ್ರಯಾಣಿಕ ಪರಾರಿ
*  ಎಂಜಿನಿಯರಿಂಗ್‌ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿ 

ಬೆಂಗಳೂರು(ಸೆ.17): ಕೆಎಸ್‌ಆರ್‌ಟಿಸಿ ಬಸ್ಸಿನಲ್ಲಿ ಎಂಜಿನಿಯರಿಂಗ್‌ ವಿದ್ಯಾರ್ಥಿಯೊಬ್ಬಳಿಗೆ ಅಪರಿಚಿತ ಪ್ರಯಾಣಿಕ ಮುತ್ತು ಕೊಟ್ಟು ಪರಾರಿಯಾಗಿರುವ ಘಟನೆ ಪೀಣ್ಯ ಸಮೀಪ ನಡೆದಿದೆ.

ಮೂರು ದಿನಗಳ ಹಿಂದೆ ಬಳ್ಳಾರಿಯಿಂದ ನಗರಕ್ಕೆ ಆಗಮಿಸಿದ ಕೆಎಸ್‌ಆರ್‌ಟಿಸಿ ಬಸ್ಸಿನಲ್ಲಿ ಈ ಘಟನೆ ನಡೆದಿದ್ದು, ಮುಂಜಾನೆ 5 ಗಂಟೆಯಲ್ಲಿ ಬಸ್ಸಿನಲ್ಲಿ ನಿದ್ರೆ ಮಾಡುತ್ತಿದ್ದ ವಿದ್ಯಾರ್ಥಿನಿಗೆ ಚುಂಬಿಸಿ ಅಪರಿಚಿತ ಪ್ರಯಾಣಿಕ ಪರಾರಿಯಾಗಿದ್ದಾನೆ. ಈ ಘಟನೆ ಸಂಬಂಧ ಪೀಣ್ಯ ಪೊಲೀಸ್‌ ಠಾಣೆಗೆ ಸಂತ್ರಸ್ತೆ ನೀಡಿದ ದೂರಿನ ಮೇರೆಗೆ ಆರೋಪಿ ಪತ್ತೆಗೆ ತನಿಖೆ ನಡೆದಿದೆ ಎಂದು ಪೊಲೀಸರು ಹೇಳಿದ್ದಾರೆ.

ಪತ್ನಿಯನ್ನು ತುಂಡು ತುಂಡಾಗಿ ಕತ್ತರಿಸಿ ಕಾಲುವೆಗೆ ಎಸೆದ ಕವಿ

ಬಳ್ಳಾರಿ ಜಿಲ್ಲೆಯ , ನಗರದ ಖಾಸಗಿ ಎಂಜಿನಿಯರಿಂಗ್‌ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದಾಳೆ. ಗೌರಿ-ಗಣೇಶ ಹಬ್ಬಕ್ಕೆ ಊರಿಗೆ ಹೋಗಿದ್ದ ಆಕೆ, ಕೆಎಸ್‌ಆರ್‌ಟಿಸಿ ಬಸ್ಸಿನಲ್ಲಿ ನಗರಕ್ಕೆ ಮರಳಿದ್ದರು. ಆಗ ಪೀಣ್ಯ ಸಮೀಪ ಪ್ರಯಾಣಿಕರನ್ನು ಇಳಿಸಲು ಬಸ್‌ ನಿಂತಾಗ ಈ ಕೃತ್ಯ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
 

click me!