
ಬೆಂಗಳೂರು(ಸೆ.17): ಕೆಎಸ್ಆರ್ಟಿಸಿ ಬಸ್ಸಿನಲ್ಲಿ ಎಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬಳಿಗೆ ಅಪರಿಚಿತ ಪ್ರಯಾಣಿಕ ಮುತ್ತು ಕೊಟ್ಟು ಪರಾರಿಯಾಗಿರುವ ಘಟನೆ ಪೀಣ್ಯ ಸಮೀಪ ನಡೆದಿದೆ.
ಮೂರು ದಿನಗಳ ಹಿಂದೆ ಬಳ್ಳಾರಿಯಿಂದ ನಗರಕ್ಕೆ ಆಗಮಿಸಿದ ಕೆಎಸ್ಆರ್ಟಿಸಿ ಬಸ್ಸಿನಲ್ಲಿ ಈ ಘಟನೆ ನಡೆದಿದ್ದು, ಮುಂಜಾನೆ 5 ಗಂಟೆಯಲ್ಲಿ ಬಸ್ಸಿನಲ್ಲಿ ನಿದ್ರೆ ಮಾಡುತ್ತಿದ್ದ ವಿದ್ಯಾರ್ಥಿನಿಗೆ ಚುಂಬಿಸಿ ಅಪರಿಚಿತ ಪ್ರಯಾಣಿಕ ಪರಾರಿಯಾಗಿದ್ದಾನೆ. ಈ ಘಟನೆ ಸಂಬಂಧ ಪೀಣ್ಯ ಪೊಲೀಸ್ ಠಾಣೆಗೆ ಸಂತ್ರಸ್ತೆ ನೀಡಿದ ದೂರಿನ ಮೇರೆಗೆ ಆರೋಪಿ ಪತ್ತೆಗೆ ತನಿಖೆ ನಡೆದಿದೆ ಎಂದು ಪೊಲೀಸರು ಹೇಳಿದ್ದಾರೆ.
ಪತ್ನಿಯನ್ನು ತುಂಡು ತುಂಡಾಗಿ ಕತ್ತರಿಸಿ ಕಾಲುವೆಗೆ ಎಸೆದ ಕವಿ
ಬಳ್ಳಾರಿ ಜಿಲ್ಲೆಯ ವಿದ್ಯಾರ್ಥಿನಿ, ನಗರದ ಖಾಸಗಿ ಎಂಜಿನಿಯರಿಂಗ್ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದಾಳೆ. ಗೌರಿ-ಗಣೇಶ ಹಬ್ಬಕ್ಕೆ ಊರಿಗೆ ಹೋಗಿದ್ದ ಆಕೆ, ಕೆಎಸ್ಆರ್ಟಿಸಿ ಬಸ್ಸಿನಲ್ಲಿ ನಗರಕ್ಕೆ ಮರಳಿದ್ದರು. ಆಗ ಪೀಣ್ಯ ಸಮೀಪ ಪ್ರಯಾಣಿಕರನ್ನು ಇಳಿಸಲು ಬಸ್ ನಿಂತಾಗ ಈ ಕೃತ್ಯ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ