
ಬೆಂಗಳೂರು(ಜೂ. 21) ಅನ್ ಲಾಕ್ ಆಗ್ತಿದ್ದಂತೆ ಆಕ್ಟೀವ್ ಆದ ಸರಗಳ್ಳರು ರಾಜಧಾನಿಯಲ್ಲಿ ಕೈಚಳಕ ತೋರಿಸಲು ಆರಂಭಿಸಿದ್ದಾರೆ. ಒಂದೇ ದಿನ ನಗರದ ಎರಡು ಕಡೆ ಸರಗಳ್ಳತನವಾಗಿದೆ. ಜಯನಗರ ಮತ್ತು ಕೊಡಿಗೆಹಳ್ಳಿಯಲ್ಲಿ ಸರ ಎಗರಿಸಿದ ಖದೀಮರು ಪರಾರಿಯಾಗಿದ್ದಾರೆ.
ಕೊಡಿಗೆಹಳ್ಳಿಯಲ್ಲಿ ವೃದ್ದೆಯ ಸರ ಅಪಹರಣ ಮಾಡಿದ್ದಾರೆ. ಬೆಳಗ್ಗೆ 8.30ರ ಸುಮಾರಿಗೆ ಲಕ್ಷ್ಮಿ ಎಂಬುವರು ಓಡಾಡುತ್ತಿದ್ದಾಗ ಬೈಕ್ ನಲ್ಲಿ ಬಂದಿದ್ದ ಇಬ್ಬರು ಸರಗಳ್ಳರು ಕೈಚಳಕ ತೋರಿಸಿದ್ದಾರೆ. ಕೊಡಿಗೆಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸರಗಳ್ಳತನ ಕಾಡ್ತಿದ್ದ ಇರಾನಿ ಗ್ಯಾಂಗ್ ಸಿಕ್ಕಿಬಿತ್ತು
ಜಯನಗರ ಸಾಕಮ್ಮ ಗಾರ್ಡನ್ ಬಳಿಯಿಂದ ಮತ್ತೊಂದು ಪ್ರಕರಣ ವರದಿಯಾಗಿದೆ ರಾಜೇಶ್ವರಿ ಎಂಬುವರ 72 ಗ್ರಾಂ ಮಾಂಗಲ್ಯ ಸರ ಕದ್ದೊಯ್ದಿದ್ದಾರೆ. ಬೈಕ್ ನಲ್ಲಿ ಬಂದಿದ್ದ ಇಬ್ಬರು ಸರಗಳ್ಳರ ಕೃತ್ಯ ಇದಾಗಿದ್ದು ಸಿಸಿಟಿವಿಯಲ್ಲಿ ದೃಶ್ಯಾವಳಿ ಸೆರೆಯಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ