
ಲಕ್ನೋ(ಮಾ.06): ಆಸ್ಪತ್ರೆಗಳಲ್ಲಿ ಬಿಲ್ ಕಟ್ಟದಿದ್ದಾಗ ವೈದ್ಯರು ತೋರಿಸುವ ಅಮಾನವೀಯತೆ ವೈದ್ಯರು ಅಂದರೆ ಭಯ ಹುಟ್ಟಿಸುವಂತೆ ಮಾಡುತ್ತದೆ. ಇದಕ್ಕೆ ಸಾಕ್ಷಿಯಾಗುವ ಘಟನೆಯೊಂದು ಉತ್ತರ ಪ್ರದೇಶದಲ್ಲಿ ನಡೆದಿದೆ.
ಉತ್ತರ ಪ್ರದೇಶದಲ್ಲಿ 3 ವರ್ಷದ ಮಗುವಿಗೆ ವೈದ್ಯರು ಹೊಟ್ಟೆ ಕುಯ್ದು ಆಪರೇಷನ್ ಮಾಡಿದ್ದಾರೆ. ಆದರೆ ಬಿಲ್ ಕಟ್ಟದ್ದಕ್ಕೆ ಸ್ಟಿಚ್ ಹಾಕದೇ ಕಳುಹಿಸಿಕೊಟ್ಟಿದ್ದಾರೆ. ಪರಿಣಾಮ ಮೂರು ವರ್ಷ ಹಸುಗೂಸು ಸಮೃತಪಟ್ಟಿದೆ.
ಡ್ರಗ್ಸ್ ಡೀಲ್ಸ್ಗೆ ಫಂಡ್ ಮಾಡ್ತಿದ್ದ ಬಾಲಿವುಡ್ ಸುಂದರಿ: ರಿಯಾಗೆ 20 ವರ್ಷ ಜೈಲು..?
ಉತ್ತರ ಪ್ರದೇಶದ ಪ್ರಯಾಗ್ರಾಜ್ನ ಖಾಸಗಿ ಆಸ್ಪತ್ರೆಯಲ್ಲಿ ಹೆಣ್ಣುಮಗುವಿನ ಹೊಟ್ಟೆಗೆ ಸ್ಟಿಚ್ ಹಾಕದೆ ಕಳುಹಿಸಲಾಗಿದೆ. ಆಕೆಯ ಕುಟುಂಬ ಚಿಕಿತ್ಸೆಗೆ 5 ಲಕ್ಷ ಪಾವತಿಸದ ಹಿನ್ನೆಲೆಯಲ್ಲಿ ಈ ಅಮಾನುಷ ಕೃತ್ಯ ಎಸಗಿದ್ದಾರೆ ವೈದ್ಯರು.
ಪ್ರಯಾಗ್ರಾಜ್ನ ಡಿಎಂ ಭಾನು ಚಂದ್ರ ಘಟನೆಯ ಬಗ್ಗೆ ವಿಸ್ತ್ರತ ತನಿಖೆ ನಡೆಸಲು ಎರಡು ಸಮಿತಿಗಳನ್ನು ರಚಿಸಿದ್ದಾರೆ. ಎನ್ಸಿಬಿಪಿಸಿಆರ್ ಘಟನೆ ಸಂಬಂಧ ಎಫ್ಐಆರ್ ದಾಖಲಿಸಲು ಆಗ್ರಹಿಸಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ