
ಲಕ್ನೋ(ಆ. 13) ಸೋಶಿಯಲ್ ಮೀಡಿಯಾ ಪೋಸ್ಟ್ ಒಂದನ್ನು ನೆಪವಾಗಿರಿಸಿಕೊಂಡು ಬೆಂಗಳೂರಿನಲ್ಲಿ ಗಲಭೆಯಾಗಿದ್ದು ಗೊತ್ತೆ ಇದೆ. ಇದೀಗ ಉತ್ತರ ಪ್ರದೇಶದ ಮೀರತ್ ನ ಮುಸ್ಲಿಂ ನಾಯಕರೊಬ್ಬರು ಸೋಶಿಯಲ್ ಮೀಡಿಯಾದಲ್ಲಿ ಅವಹೇಳನಕಾರಿ ಪೋಸ್ಟ್ ಹಾಕಿದ್ದ ಎನ್ನಲಾದ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಅಕ್ಕನ ಮಗನ ತಲೆ ತಂದರೆ 51 ಲಕ್ಷ ರೂ. ನೀಡುತ್ತೇನೆ ಎಂದು ಘೋಷಣೆ ಮಾಡಿದ್ದಾರೆ.
"
ಮುಸ್ಲಿಂ ಮುಖಂಡ ಶಜೇಬ್ ರಿಜ್ವಿ , ನಾನು ಈ ಘಟನೆಯನ್ನು ಖಂಡಿಸುತ್ತೇನೆ, ನವೀನ್ ತಲೆ ತಂದವರಿಗೆ ಬಹುಮಾನ ನೀಡುತ್ತೇನೆ ಎಂದು ಘೋಷಣೆ ಮಾಡಿದ್ದಾರೆ.
ಗಲಭೆಗೆ ನವೀನ್ ಪೋಸ್ಟ್ ಒಂದು ನೆಪ ಮಾತ್ರ
ಹಿಂದೆ ಸಮಾಜವಾದಿ ಪಕ್ಷದ ನಾಯಕರಾಗಿದ್ದ ರಿಜ್ವಿ ಈಗ ರಾಜಕಾರಣದಿಂದ ದೂರ ಇದ್ದಾರೆ. ಸಮಾಜವಾದಿ ಪಕ್ಷದ ಅಲ್ಪಸಂಖ್ಯಾತ ಘಟಕದ ಉತ್ತರ ಪ್ರದೇಶ ರಾಜ್ಯ ಕಾರ್ಯದರ್ಶಿಯಾಗಿ ಕೆಲಸ ಮಾಡಿದ್ದರು.
ಪಕ್ಷ ತೊರೆದ ಮೇಲೆ ತನ್ನನ್ನು ತಾನು ಸಾಮಾಜಿಕ ಕಾರ್ಯಕರ್ತ ಎಂದು ಹೇಳಿಕೊಂಡಿದ್ದಾರೆ. ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದ್ದಂತೆ ತನಿಖೆಗೆ ಆದೇಶ ನೀಡಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ