ತಂಗಿಯ ಚುಡಾಯಿಸಿದನ್ನು ಪ್ರಶ್ನೆ ಮಾಡಿದ್ದಕ್ಕೆ ಅಣ್ಣನ ಗುಂಡಿಟ್ಟು ಕೊಂದರು!

Published : Nov 13, 2020, 09:09 PM ISTUpdated : Nov 13, 2020, 09:10 PM IST
ತಂಗಿಯ ಚುಡಾಯಿಸಿದನ್ನು ಪ್ರಶ್ನೆ ಮಾಡಿದ್ದಕ್ಕೆ ಅಣ್ಣನ ಗುಂಡಿಟ್ಟು ಕೊಂದರು!

ಸಾರಾಂಶ

ಸೋದರಿಗೆ ಕಿರುಕುಳ ನೀಡಿದ್ದನ್ನು ಪ್ರಶ್ನೆ ಮಾಡಿದ್ದಕ್ಕೆ ಸಹೋದರನ ಹತ್ಯೆ/  ಮನೆಗೆ ಬಂದು ಗುಂಡು ಹಾರಿಸಿದ ದುಷ್ಕರ್ಮಿಗಳು/  ಉತ್ತರ ಪ್ರದೇಶದಲ್ಲಿ ಮತ್ತೊಂದು ಕ್ರೌರ್ಯ

ಮೀರತ್ (ನ. 13)    ಸಹೋದರಿಗೆ  ಕಿರುಕುಳ ಕೊಟ್ಟಿದ್ದನ್ನು ಪ್ರಶ್ನೆ ಮಾಡಿದ ಸಹೋದರನನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ.  ಉತ್ತರ ಪ್ರದೇಶದ ಬುಲಂದ್‌ಶಹರ್ ಜಿಲ್ಲೆಯಲ್ಲಿ ಪ್ರಕರಣ ನಡೆದಿದ್ದು ಪ್ರಶ್ನೆ ಮಾಡಿದ ಹುಡುಗಿಯ ಅಣ್ಣನನ್ನು  ಕಿರುಕುಳ ನೀಡುತ್ತಿದ್ದ ವ್ಯಕ್ತಿ ಗುಂಡಿಟ್ಟು ಹತ್ಯೆ ಮಾಡಿದ್ದಾನೆ.

ಮನೆಯಲ್ಲೆ ಸಣ್ಣ ಅಂಗಡಿ ನಡೆಸುತ್ತಿದ್ದ ಸಹೋದರ ಬ್ಯಾಟರಿ ತಯಾರಿಕೆ  ಕೆಲಸವನ್ನು ಮಾಡಿಕೊಂಡಿದ್ದ. ಗುರುವಾರ ಮುಂಜಾನೆ ಅಂಗಡಿಗೆ  ಬಂದ ಪಕ್ಕದ ಮನೆಯ ಕಪಿಲ್  ಎಂಬಾತ ಸಕ್ಕರೆ ಕೊಡುವಂತೆ ಕೇಳಿದ್ದಾನೆ. ಇದಕ್ಕೆ  ಹತ್ಯೆಗೀಡಾದ ಅಂಗಡಿ ಮಾಲೀಕ ರಾಮವೀರ್ ಅಂಗಡಿ ಇಷ್ಟು ಬೇಗನೆ ತೆರಯಲ್ಲ, ಸ್ವಲಪ ಸಮಯ ಬಿಟ್ಟು ಬನ್ನಿ ಎಂದು ತಿಳಿಸಿದ್ದಾನೆ.

ಭೀಮಾತೀರದ ಫೈರಿಂಗ್ ಪ್ರಕರಣಕ್ಕೆ ರೋಚಕ ತಿರುವು

ಅಂತೂ ಒತ್ತಾಯದ ಮೇರೆಗೆ ಅಂಗಡಿ ತೆರೆದು ಸಕ್ಕರೆ ಪ್ಯಾಕ್ ಮಾಡುತ್ತಿದ್ದಾಗ ಕಪಿಲ್ ಜತೆ ಬಂದಿದ್ದ ಆಕಾಶ್ ಎಂಬಾತ  ಗುಂಡು ಹಾರಿಸಿದ್ದಾಣೆ. ನಂತರ ಇಬ್ಬರು ಅಲ್ಲಿಂದ ಪರಾರಿಯಾಗಿದ್ದಾರೆ.

ಒತ್ತಾಯದ ನಂತರ ರಾಮ್‌ವೀರ್ ಅಂಗಡಿಯನ್ನು ತೆರೆದರು. ಅವನು ಸಕ್ಕರೆ ಪ್ಯಾಕ್ ಮಾಡಲು ಪ್ರಾರಂಭಿಸಿದಾಗ, ಕಪಿಲ್ ಸಹೋದರ ಆಕಾಶ್ ಬಲಿಪಶುವನ್ನು ಅವನ ಕುತ್ತಿಗೆಗೆ ಹೊಡೆದನು. ಮುಂದಿನ ಕ್ಷಣ ಆರೋಪಿ ಸ್ಥಳದಿಂದ ಪರಾರಿಯಾಗಿದ್ದಾನೆ. ರಾಮ್ ವೀರ್ ರನ್ನು ಆಸ್ಪತ್ರೆಗೆ ಸೇರಿಸುವ ಯತ್ನ ಮಾಡಿದರೂ ಪ್ರಯೋಜನವಾಗಲಿಲ್ಲ.

ರಾಮ್ ವೀರ್ ತಂದೆ ಹೇಳುವಂತೆ ಆಕಾಶ್ ಅವರ ಮಗಳನ್ನು ಮದುವೆಯಾಗ ಬಯಸಿದ್ದ. ಮದುವೆ ಮಾಡಿಕೊಡಿ ಎಂದು ಪದೇ ಪದೇ ಪೀಡಿಸುತ್ತಿದ್ದ.  ಇದೇ ಕಾರಣಕ್ಕೆ ಕೆಲ ದಿನಗಳ ಹಿಂದೆ ಯುವತಿ  ವಿಷ ಕುಡಿದು ಆತ್ಮಹತ್ಯೆ ಮಾಡಿಕೊಂಡಿದ್ದಳು. ತಂಗಿಗೆ ಕಿರುಕುಳ ನೀಡುತ್ತಿದ್ದಾಗ ಅಣ್ಣ ಹಲವು ಸಾರಿ ತಡೆದಿದ್ದ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ನನ್ನ ಜೊತೆಗೂ ಬಾ: ಗೆಳೆಯನ ಗರ್ಲ್‌ಫ್ರೆಂಡ್‌ಗೆ ಸಂದೇಶ: ಪ್ರಶ್ನಿಸಿದ್ದಕ್ಕೆ ಸ್ನೇಹಿತನನ್ನೇ ಕೊಂದು ಪೀಸ್ ಪೀಸ್ ಮಾಡಿದ
The Devil Movie: ಕಾಲವೇ ಸತ್ಯ ಹೇಳುತ್ತದೆ. ಸಮಯವೇ ಉತ್ತರಿಸುತ್ತದೆ-ಜೈಲಿನಿಂದಲೇ Darshan ಮೆಸೇಜ್