
ಕಾರವಾರ, ಉತ್ತರಕನ್ನಡ (ಮೇ.11): ಹಾಡಹಗಲೇ ಮನೆಗೆ ನುಗ್ಗಿ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ದೋಚಿ ದುಷ್ಕರ್ಮಿಗಳು ಪರಾರಿಯಾದ ಘಟನೆ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಶಿರಾಲಿಯ ಬಂಡಿಕಾಶಿಯಲ್ಲಿ ನಡೆದಿದೆ.
ಶಿರಾಲಿಯ ಬಂಡಿಕಾಶಿ ನಿವಾಸಿ ಮಂಜುನಾಥ ರಾಮ ನಾಯ್ಕ ಎಂಬುವರ ಮನೆಗೆ ನುಗ್ಗಿ ಕಳ್ಳತನ ಮಾಡಿರುವ ಖದೀಮರು. ಬೆಳಗ್ಗೆ ಮಗನನ್ನು ಕರೆದುಕೊಂಡು ತನ್ನ ಬೊಲೆರೋ ವಾಹನದಲ್ಲಿ ಬಾಡಿಗೆಗೆ ತೆರಳಿದ್ದ ಮಂಜುನಾಥ. ಈ ವೇಳೆ ಪತ್ನಿ ಬೇಬಿ ಮಂಜುನಾಥ ನಾಯ್ಕ್ ಮನೆಗೆ ಬೀಗ ಹಾಕಿ ಪೇಪರ್ ಬ್ಯಾಗ್ ತಯಾರಿಕೆ ಫ್ಯಾಕ್ಟರಿಗೆ ಕೆಲಸಕ್ಕೆ ಹೋಗಿದ್ದರು. ಇದೇ ಸಮಯಕ್ಕೆ ಹೊಂಚು ಹಾಕಿದ್ದ ಖದೀಮರು, ಮನೆಯ ಹಿಂಬಾಗಿಲನ್ನು ತೆರೆದು ಒಳನುಗ್ಗಿದ್ದಾರೆ. ಬೆಡ್ರೂಂ ಕೋಣೆಯ ಕಪಾಟು ಒಡೆದು ಅಂದಾಜು 250 ಗ್ರಾಂ ತೂಕದ ಚಿನ್ನಾಭರಣ ಹಾಗೂ ಸುಮಾರು 40 ಸಾವಿರ ರೂಪಾಯಿ ನಗದು ಹಣ ದೋಚಿ ಪರಾರಿಯಾಗಿದ್ದಾರೆ.
ಗದಗನಲ್ಲಿ ಹಾಡಹಗಲೇ ಮನೆಗೆ ನುಗ್ಗಿ ಟಿವಿ, ಫ್ರಿಡ್ಜ್ ಒಡೆದು ದುಷ್ಕರ್ಮಿಗಳ ಅಟ್ಟಹಾಸ!
ಮನೆ ಮಾಲೀಕ ಹಿಂದಿರುಗಿ ಬಂದು ಅಡುಗೆ ಒಲೆಗೆ ಸೌದೆ ಹಾಕಲು ಮುಂದಾದಾಗ ಹಿಂಬಾಗಿಲು ತೆರೆದಿರುವುದು ಗಮನಕ್ಕೆ ಬಂದಿದೆ. ಆಗ ಪರಿಶೀಲಿಸಿದಾಗ ಮನೆಯೊಳಗೆ ಎಲ್ಲವೂ ಚೆಲ್ಲಾಪಿಲ್ಲಿಯಾಗಿರೋದು ಕಂಡು ಬಂದಿದೆ. ಕಪಾಟಿನಲ್ಲಿಟ್ಟಿದ್ದ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ದೋಚಿರುವುದು ತಿಳಿದು ಶಾಕ್ ಆಗಿರುವ ಮಾಲೀಕ. ಕೂಡಲೇ ಭಟ್ಕಳ ಗ್ರಾಮೀಣ ಪೊಲೀಸ್ ಠಾಣೆಗೆ ತೆರಳಿ ದೂರು ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ಪೊಲೀಸರು ಕಾರವಾರದಿಂದ ಶ್ವಾನದಳವನ್ನು ಕರೆಯಿಸಿ ಸ್ಥಳ ಪರಿಶೀಲನೆ ನಡೆಸಿದ್ದಾರೆ. ಸದ್ಯ ಖದೀಮರ ಚಲನವಲನ ಆಧರಿಸಿ ಪತ್ತೆಗೆ ಮುಂದಾಗಿರುವ ಪೊಲೀಸರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ