ಪೊಲೀಸರ ಕಣ್ತಪ್ಪಿಸಿ ವಿಧಾನಸೌಧ ಸೇರಿದ್ವಾ ಬಂಗಾರದ ಒಡವೆಗಳು? ಕಳ್ಳ ಸಿಕ್ಕಿಬಿದ್ದರೂ ಬಗೆಹರಿಯದ ನಿಗೂಢ ಪ್ರಶ್ನೆಗಳು!

Published : Feb 11, 2026, 08:50 AM IST
vidhan soudha

ಸಾರಾಂಶ

ಬೆಂಗಳೂರಿನ ವಿಧಾನಸೌಧದಲ್ಲಿನ ಸಚಿವ ಬೈರತಿ ಸುರೇಶ್ ಅವರ ಕಚೇರಿಗೆ ಬಂದಿದ್ದ ವ್ಯಕ್ತಿಯೊಬ್ಬರು ಮರೆತುಹೋದ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಮತ್ತು ನಗದು ಕಳ್ಳತನವಾಗಿದೆ. ಸಿಸಿ ಕ್ಯಾಮೆರಾ ದೃಶ್ಯಾವಳಿ ಆಧರಿಸಿ ಗ್ರೂಪ್ ಡಿ ನೌಕರನನ್ನು ಬಂಧಿಸಿರುವ ಪೊಲೀಸರು, ಕಳುವಾಗಿದ್ದ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.

ಬೆಂಗಳೂರು (ಫೆ.11): ವಿಧಾನಸೌಧದಲ್ಲಿನ ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಅವರ ಕಚೇರಿಗೆ ಬಂದಿದ್ದ ವ್ಯಕ್ತಿಯೊಬ್ಬನ ಚಿನ್ನಾಭರಣ-ನಗದು ಕಳ್ಳತನವಾಗಿರುವ ಪ್ರಕರಣ ತಡವಾಗಿ ಬೆಳಕಿಗೆ ಬಂದಿದ್ದು, ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿರುವ ವಿಧಾನಸೌಧ ಠಾಣೆ ಪೊಲೀಸರು ಒಬ್ಬನನ್ನು ಬಂಧಿಸಿದ್ದಾರೆ.

ಬಂಗಾರಪೇಟೆ ಮೂಲದ ಆರ್‌.ನವೀನ್‌ ಚಿನ್ನಾಭರಣ-ನಗದು ಕಳೆದುಕೊಂಡವರು. ಗ್ರೂಪ್‌ ಡಿ ನೌಕರ ಆಂಥೋನಿ ಬಂಧಿತ ಆರೋಪಿ. ಆರೋಪಿಯಿಂದ ಚಿನ್ನಾಭರಣ ಮತ್ತು ನಗದು ವಶಪಡಿಸಿಕೊಳ್ಳಲಾಗಿದ್ದು ತನಿಖೆ ಮುಂದುವರಿದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಫೆ.2 ರ ಸಂಜೆ 5.15ರ ವೇಳೆ ಈ ಘಟನೆ ನಡೆದಿತ್ತು. ಸುಮಾರು 34 ಲಕ್ಷ ರು. ಮೌಲ್ಯದ 200 ಗ್ರಾಂ. ಚಿನ್ನಾಭರಣ, ಬೆಳ್ಳಿ ವಸ್ತುಗಳು ಮತ್ತು ಸುಮಾರು 1.10 ಲಕ್ಷ ನಗದು ಇದ್ದ ಬ್ಯಾಗ್‌ ಅನ್ನು ನವೀನ್‌ ಎಂಬುವರು ವಿಧಾನಸೌಧದ 316 (ಎ) ಕಚೇರಿಯಲ್ಲಿ ಮರೆತು ಹೋಗಿದ್ದರು. ಬಳಿಕ ಆ ಬ್ಯಾಗ್‌ ಅನ್ನು ಡಿ ಗ್ರೂಪ್‌ ನೌಕರ ಆಂಥೋನಿ ತೆಗೆದುಕೊಂಡು ಹೋಗಿರುವುದು ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿತ್ತು. ಅದರ ಆಧಾರದಲ್ಲಿ ಆತನನ್ನು ಬಂಧಿಸಿ ನಗದು ಚಿನ್ನಾಭರಣ ವಶಕ್ಕೆ ಪಡೆಯಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಪ್ರಕರಣದ ವಿವರ:

ಕೋಲಾರದ ಬಂಗಾರಪೇಟೆಯ ನವೀನ್‌ ಅವರಿಗೆ ಜಮೀನಿನ ವಿವಾದ ಇದ್ದ ಹಿನ್ನೆಲೆಯಲ್ಲಿ ಫೆ.5 ರಂದು ಸರ್ಕಾರದ ಮುಖ್ಯ ಕಾರ್ಯದರ್ಶಿ, ಲೋಕಾಯುಕ್ತಕ್ಕೆ ಮತ್ತು ಕೋಲಾರ ಜಿಲ್ಲಾ ಉಸ್ತುವಾರಿ ಸಚಿವರಾಗಿರುವ ಸಚಿವ ಬೈರತಿ ಸುರೇಶ್‌ ಅವರಿಗೆ ದೂರು ನೀಡಲು ಬಂದಿದ್ದರು. ಈ ವೇಳೆ ಅವರು ತಂದಿದ್ದ ಚಿನ್ನಾಭರಣ ಮತ್ತು ಹಣವುಳ್ಳ ಬ್ಯಾಗ್ ಅನ್ನು ಸಚಿವರ ಕೊಠಡಿಯಲ್ಲಿ ಮರೆತು ಹೋಗಿದ್ದರು.

ಲ್ಯಾಪ್‌ಟಾಪ್ ಬ್ಯಾಗ್‌ನಲ್ಲಿ ಮೆಡಿಕಲ್ ರೆಕಾರ್ಡ್ಸ್, ರೆವೆನ್ಯೂ ರೆಕಾರ್ಡ್ಸ್, ಬ್ಯಾಂಕ್ ರೆಕಾರ್ಡ್ ಮತ್ತು ಇತರ ಖಾಸಗಿ ದಾಖಲಾತಿಗಳು ಹಾಗೂ ಆಭರಣ ನಗದು ಇದ್ದವು. ನಂತರ ಮುಖ್ಯ ಕಾರ್ಯದರ್ಶಿಗಳ ಕಚೇರಿಗೆ ಹೋದ ಬಳಿಕ ರಾತ್ರಿ ಸುಮಾರು 9.40 ರ ವೇಳೆ ಬ್ಯಾಗ್‌ ನೆನಪಾಗಿ ಅದನ್ನು ವಾಪಸ್ ತೆಗೆದುಕೊಳ್ಳಲು ಹೋದಾಗ ಕೊಠಡಿಗೆ ಬೀಗ ಹಾಕಿದ್ದು, ಈ ಬಗ್ಗೆ ನವೀನ್‌ ಸಿಬ್ಬಂದಿಯನ್ನು ವಿಚಾರಿಸಿದಾಗ ಮರುದಿನ ಬೆಳಗ್ಗೆ ಬರುವಂತೆ ಸಲಹೆ ನೀಡಿದ್ದರು.

ಬಳಿಕ ಫೆ.5ರಂದು ಮಧ್ಯಾಹ್ನ 1.30ಕ್ಕೆ ಹೋಗಿ ಬ್ಯಾಗ್ ಬಗ್ಗೆ ವಿಚಾರಿಸಿದ್ದ ಕಚೇರಿಯಲ್ಲಿದ್ದ ಮೂವರು ಸಿಬ್ಬಂದಿ ನಿಮ್ಮನ್ನು ಯಾರು ಬ್ಯಾಗ್ ಇಲ್ಲಿ ಇಡಲು ಹೇಳಿದರು ಎಂದು ಕೂಗಾಡಿದ್ದರು. ನಂತರ ಅಲ್ಲಿದ್ದ ಗ್ರೂಪ್ ಡಿ ನೌಕರ ಕೀರ್ತಿ ಎಂಬಾತ ತಾನು ರಾತ್ರಿ ಆ ಬ್ಯಾಗ್‌ ಅನ್ನು ತೆಗೆದು ಕೊಠಡಿ ಹೊರಗೆ ಕಿಟಕಿಯಲ್ಲಿ ಇಟ್ಟಿದ್ದಾಗಿ ತಿಳಿಸಿದ್ದ. ಸಂಜೆ 4.30ಕ್ಕೆ ಸಿಬ್ಬಂದಿ ನವೀನ್‌ಗೆ ಕರೆ ಮಾಡಿ ನಿಮ್ಮ ಬ್ಯಾಗ್ ದೊರಕಿರುವುದಾಗಿ ಹೇಳಿದ್ದರು. ಆದರೆ ಬ್ಯಾಗ್‌ನಲಿದ್ದ ಚಿನ್ನ ಮತ್ತು ಬೆಳ್ಳಿ ನಗದು ಕಳುವಾಗಿತ್ತು. ಈ ಸಂಬಂಧ ಫೆ.7 ರಂದು ನವೀನ್‌ ದೂರು ನೀಡಿದ್ದರು.

ವಿಧಾನಸೌಧದೊಳಗೆ ಚಿನ್ನ-ಹಣ ಹೇಗೆ ಬಂತು?

ಭದ್ರತಾ ಸಿಬ್ಬಂದಿಯ ಕಣ್ಣು ತಪ್ಪಿಸಿ ವಿಧಾನಸೌಧದೊಳಗೆ ಇಷ್ಟೊಂದು ಚಿನ್ನಾಭರಣ, ನಗದು ಹೇಗೆ ಬಂತು ಎಂಬುದು ಯಕ್ಷ ಪ್ರಶ್ನೆ. ಯಾವ ಕಾರಣಕ್ಕಾಗಿ ಇಷ್ಟೊಂದು ದೊಡ್ಡ ಮೊತ್ತದ ಚಿನ್ನಾಭರಣ, ನಗದು ತರಲಾಗಿತ್ತು ಎಂಬುದೂ ನಿಗೂಢವಾಗಿದೆ. ಪೊಲೀಸರು ನವೀನ್‌ ಅವರನ್ನು ಸರಿಯಾಗಿ ತಪಾಸಣೆ ನಡೆಸಿಲ್ಲ ಎಂಬ ಆರೋಪ ಕೇಳಿ ಬಂದಿದೆ. ನವೀನ್‌ ಅವರಿಗೆ ಕಾಲಿನ ಸಮಸ್ಯೆ ಇದ್ದ ಹಿನ್ನೆಲೆಯಲ್ಲಿ ಪೊಲೀಸರು ಅವರನ್ನು ಹೆಚ್ಚಿನ ತಪಾಸಣೆ ನಡೆಸಿದೆ ಒಳಗೆ ಕಳುಹಿಸಿದ್ದಾರೆ ಎನ್ನಲಾಗಿದೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

'ಸಾರಾಯಿ ಕುಡಿಬೇಡ ಅಮ್ಮ..' ಎಂದಿದ್ದಕ್ಕೆ ಮಗಳನ್ನೇ ಕೊಂದ ತಾಯಿ!
Haveri: 'ಓದಿಕೊ' ಎಂದಿದ್ದಕ್ಕೆ ಮನನೊಂದ SSLC ವಿದ್ಯಾರ್ಥಿನಿ ದುರಂತ ಅಂತ್ಯ!