
ಕಾಳಿ ದೇವಿಯ ಅವಹೇಳನ ಮಾಡಿ ಟ್ವಿಟರ್ನಲ್ಲಿ ಪೋಸ್ಟ್ ಮಾಡಿದ ಯುವಕನ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಪ್ರಸಿದ್ದ ಜಾಲತಾಣ ಟ್ವಿಟರ್ ಸಂಸ್ಥೆ ಮೇಲೆ ಎಫ್ ಐ ಆರ್ ದಾಖಲಾಗಿದೆ.
ನ್ಯಾಯಾಲಯದ ಅದೇಶದಂತೆ ಕೆ.ಆರ್ ಪುರಂ ಪೊಲೀಸ್ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದ್ದು, ಕಿರಣ್ ಅರಾಧ್ಯ ಎಂಬುವರು ನೀಡಿದ ದೂರಿನ ಹಿನ್ನೆಲೆ ಎಫ್.ಐ.ಆರ್ ದಾಖಲಿಸಲಾಗಿದೆ.
ಬೆಂಗ್ಳೂರಲ್ಲಿ ಇರಾನಿ ಸರಗಳ್ಳರ ಗ್ಯಾಂಗ್..! 1 ಕೆ.ಜಿ. ಚಿನ್ನಾಭರಣ ವಶ
ಅರ್ಮಿನ್ ನವಾಬಿ ಎಂಬ ಟ್ವೀಟರ್ ಖಾತೆಯಿಂದ ಕಾಳಿ ದೇವಿಯ ಅಶ್ಲೀಲ ಪೋಸ್ಟ್ ಅಪ್ ಮಾಡಲಾಗಿತ್ತು. ಈ ಕುರಿತು ಟ್ವೀಟರ್ ಸಂಸ್ಥೆಗೆ ಪೋಸ್ಟ್ ತೆಗೆಯುವಂತೆ ಕಿರಣ್ ಅರಾಧ್ಯ ಮನವಿ ಮಾಡಿದ್ದರು.
ಆದರೆ ಪೋಸ್ಟ್ ತೆಗೆಯದ ಕಾರಣ ನ್ಯಾಯಾಲಯಕ್ಕೆ ಖಾಸಗಿ ದೂರು ನೀಡಿದ್ದಾರೆ. ಪೋಸ್ಟ್ ಮಾಡಿದ್ದ ಅರ್ಮಿನ್ ನವಾಬಿ , ಟ್ವೀಟರ್ ಸಂಸ್ಥೆ, ಸಿ ಇಓ ಜಾಕ್ ಡೋರ್ಸಿ, ಭಾರತದ ಮೂವರು ಟ್ವೀಟರ್ ನಿರ್ದೇಶಕರಾದ ಮಹೀಮ್ ಕೌಲ್, ಮನೀಷ್ ಮಹೇಶ್ವರಿ, ಮಾಯ ಹರಿ ಸೇರಿ ಒಟ್ಟು ಏಳು ಜನರ ಮೇಲೆ ಎಫ್ ಐ ಆರ್ ದಾಖಲಾಗಿದೆ. ಮಾಹಿತಿ ತಂತ್ರಜ್ಞಾನ ಕಾಯ್ದೆಯ 67(a) ಹಾಗೂ ಐಪಿಸಿಯ 292a 295a, ಹಾಗೂ 298 ಕಾಯ್ದೆಯಡಿ ಎಫ್ ಐ ಆರ್ ದಾಖಲಿಸಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ