ವಿವಾಹಿತ ಪುರುಷನೊಂದಿಗೆ ಪತ್ನಿ ಪರಾರಿ, ಹುಡುಕಿಕೊಡುವಂತೆ ಠಾಣೆ ಮೆಟ್ಟಿಲೇರಿದ ಪತಿ! ಅತ್ತ ಪತಿಯನ್ನ ಹುಡುಕಿಕೊಡುವಂತೆ ಪತ್ನಿ ದೂರು!

Published : Jan 20, 2024, 08:43 PM ISTUpdated : Jan 21, 2024, 07:55 AM IST
ವಿವಾಹಿತ ಪುರುಷನೊಂದಿಗೆ ಪತ್ನಿ ಪರಾರಿ, ಹುಡುಕಿಕೊಡುವಂತೆ ಠಾಣೆ ಮೆಟ್ಟಿಲೇರಿದ ಪತಿ! ಅತ್ತ ಪತಿಯನ್ನ ಹುಡುಕಿಕೊಡುವಂತೆ ಪತ್ನಿ ದೂರು!

ಸಾರಾಂಶ

ವಿವಾಹಿತ ಮಹಿಳೆ ಮತ್ತೊಬ್ಬ ವಿವಾಹಿತ ಪುರುಷನ ಜೊತೆ ಓಡಿ ಹೋಗಿದ್ದು ನನ್ನ ಪತಿಯನ್ನು ಹುಡುಕಿಕೊಂಡುವಂತೆ ಪತ್ನಿ ಹಾಗೂ ಪತ್ನಿಯನ್ನು ಹುಡುಕಿಕೊಡುವಂತೆ ಪತಿ ಪುಟ್ಟೇನಹಳ್ಳಿ ಪೊಲೀಸ್ ಠಾಣೆಯ ಮೆಟ್ಟಿಲೇರಿದ್ದಾರೆ.

ಬೆಂಗಳೂರು (ಜ.20): ವಿವಾಹಿತ ಮಹಿಳೆ ಮತ್ತೊಬ್ಬ ವಿವಾಹಿತ ಪುರುಷನ ಜೊತೆ ಓಡಿ ಹೋಗಿದ್ದು ನನ್ನ ಪತಿಯನ್ನು ಹುಡುಕಿಕೊಂಡುವಂತೆ ಪತ್ನಿ ಹಾಗೂ ಪತ್ನಿಯನ್ನು ಹುಡುಕಿಕೊಡುವಂತೆ ಪತಿ ಪುಟ್ಟೇನಹಳ್ಳಿ ಪೊಲೀಸ್ ಠಾಣೆಯ ಮೆಟ್ಟಿಲೇರಿದ್ದಾರೆ.

ಬೆಂಗಳೂರಿನ ಪುಟ್ಟೇನಹಳ್ಳಿಯ ಇಲಿಯಾಸ್ ನಗರದಲ್ಲಿ ಘಟನೆ ನಡೆದಿದೆ. ಸುಮೈಯಾ ಬಾನು ಮತ್ತು ವಸೀಂ 7 ವರ್ಷಗಳ ಹಿಂದೆ ಮದುವೆ ಮಾಡಿಕೊಂಡಿದ್ದರು. ಈ ದಂಪತಿಗೆ ಮೂರು ವರ್ಷದ ಹೆಣ್ಣು ಮಗುವಿದೆ. ಆದರೆ ವಸೀಂ ಇತ್ತೀಚೆಗೆ ದಿಲ್ ಷಾದ್ ಎಂಬಾಕೆಯ ಮೇಲೆ ಪ್ರೇಮಾಂಕುರವಾಗಿದೆ. ಅದರಂತೆ ಈ ಜೋಡಿ ಆಗಾಗೇ ಭೇಟಿಯಾಗುತ್ತಿದ್ದರು.

ಹಾವೇರಿಯಲ್ಲಿ ಮತ್ತೊಂದು ನೈತಿಕ ಪೊಲೀಸಗಿರಿ ! ಹಿಂದು ಯುವಕ ಮುಸ್ಲಿಂ ಯುವತಿಗೆ ಥಳಿತ!

ಇನ್ನು ಪತಿ ವಸೀಂ ನಡುವಳಿಕೆ ಮೇಲೆ ಅನುಮಾನಗೊಂಡ ಸುಮೈಯಾ ಬಾನು ಪತಿಯನ್ನು ಹಿಂಬಾಲಿಸಿದ್ದಾಳೆ. ವಸೀಂ ದಿಲ್ ಷಾದ್ ಜೊತೆ ಹೋಟೆಲ್ ನಲ್ಲಿ ತಂಗಿದ್ದಾಗ ಕುಟುಂಬಸ್ಥರು ರೆಡ್ ಹ್ಯಾಂಡ್ ಆಗಿ ಹಿಡಿದಿದ್ದರು. ಅಲ್ಲದೆ ತನ್ನ ಪತಿಯೊಂದಿಗೆ ಅನೈತಿಕ ಸಂಬಂಧ ಇಟ್ಟುಕೊಂಡಿದ್ದ ದಿಲ್ ಷಾದ್ ಳನ್ನು ಹಿಡಿದು ಥಳಿಸಿದ್ದರು. ಈ ಸಂಬಂಧ ಪುಟ್ಟೇನಹಳ್ಳಿ ಠಾಣೆಯಲ್ಲಿ ದೂರು ದಾಖಲಾಗಿತ್ತು. 

ಇದೀಗ ವಸೀಂ ಹಾಗೂ ದಿಲ್ ಷಾದ್ ಜೋಡಿ ರಾತ್ರೋರಾತ್ರಿ ಪರಾರಿಯಾಗಿದ್ದು ಪತಿಯನ್ನು ಹುಡುಕಿಕೊಂಡುವಂತೆ ಸುಮೈದಾ ಬಾನು ಹಾಗೂ ಪತ್ನಿಯನ್ನು ಹುಡುಕಿಕೊಂಡುವಂತೆ ದಿಲ್ ಷಾದ್ ಪತಿ ನಯೀಂ ಠಾಣೆಗೆ ದೂರು ನೀಡಿದ್ದು ಪೊಲೀಸರು ಇಬ್ಬರಿಗಾಗಿ ಹುಡುಕಾಟ ನಡೆಸಿದ್ದಾರೆ.

ಬೆಂಗಳೂರು: ಮೊಬೈಲ್‌ ಕಳ್ಳನನ್ನು ಬೆನ್ನಟಿ ಹಿಡಿದ ಟ್ರಾಫಿಕ್ ಪೊಲೀಸರು!

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಎರಡು ಮಕ್ಕಳ ತಾಯಿ ಸಹವಾಸ ಮಾಡಿ ಮಸಣ ಸೇರಿದ ಯುವಕ: ತಾಯಿಯ ಲೀವಿಂಗ್ ಪಾರ್ಟನರ್ ಕತೆ ಮುಗಿಸಿದ ಅಮ್ಮ ಮಕ್ಕಳು
ರಿಯಲ್ ಎಸ್ಟೇಟ್ ಉದ್ಯಮಿಯ ಬರ್ಬರ ಹತ್ಯೆ: ಮಗ ಓದುತ್ತಿದ್ದ ಶಾಲೆಯ ಮುಂದೆಯೇ ಕೃತ್ಯ