ನವ್ಯಶ್ರೀ ಜತೆ ಮದುವೆ ಆದ ಫೋಟೋ ಡಿಲಿಟ್ ಮಾಡಿದ್ನಾ ರಾಜಕುಮಾರ?: ಕಾಂಗ್ರೆಸ್ ಕಾರ್ಯಕರ್ತೆ ನೀಡಿದ ದೂರಿನಲ್ಲೇನಿದೆ?

Published : Jul 24, 2022, 10:18 PM ISTUpdated : Jul 24, 2022, 10:19 PM IST
ನವ್ಯಶ್ರೀ ಜತೆ ಮದುವೆ ಆದ ಫೋಟೋ ಡಿಲಿಟ್ ಮಾಡಿದ್ನಾ ರಾಜಕುಮಾರ?: ಕಾಂಗ್ರೆಸ್ ಕಾರ್ಯಕರ್ತೆ ನೀಡಿದ ದೂರಿನಲ್ಲೇನಿದೆ?

ಸಾರಾಂಶ

ಮೋಸ ಮಾಡಿ ಮದುವೆ, ಗರ್ಭಪಾತ, ಕಿಡ್ನಾಪ್, ಹನಿಟ್ರ್ಯಾಪ್, ಮಾನಹಾನಿ ಆರೋಪ

ವರದಿ: ಮಹಾಂತೇಶ ಕುರಬೇಟ್, ಏಷ್ಯಾನೆಟ್ ಸುವರ್ಣನ್ಯೂಸ್, ಬೆಳಗಾವಿ

ಬೆಳಗಾವಿ(ಜು.24):  ಚೆನ್ನಪಟ್ಟಣದ ಕಾಂಗ್ರೆಸ್ ಕಾರ್ಯಕರ್ತೆ ನವ್ಯಶ್ರೀ ಅಶ್ಲೀಲ ವಿಡಿಯೋ ವೈರಲ್ ಆದ ಬೆನ್ನಲ್ಲೇ ನವ್ಯಶ್ರೀ ವಿರುದ್ಧ ಬೆಳಗಾವಿಯ ತೋಟಗಾರಿಕೆ ಇಲಾಖೆ ಸಹಾಯಕ ನಿರ್ದೇಶಕ ರಾಜಕುಮಾರ ಟಾಕಳೆ ದೂರು ನೀಡಿದ್ರು. ಸುಳ್ಳು ಅತ್ಯಾಚಾರ ಕೇಸ್ ದಾಖಲಿಸುವುದಾಗಿ ಬೆದರಿಸಿ ಸುಲಿಗೆ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದರು‌‌. ಬೆಳಗಾವಿಯ ಎಪಿಎಂಸಿ ಠಾಣೆಯಲ್ಲಿ ನವ್ಯಶ್ರೀ ವಿರುದ್ಧ ಎಫ್ಐಆರ್ ದಾಖಲಾಗಿತ್ತು.‌ ಇದಾದ ಬೆನ್ನಲ್ಲೇ ಬೆಳಗಾವಿಯಲ್ಲಿ ಪ್ರತ್ಯಕ್ಷ ಆಗಿದ್ದ ನವ್ಯಶ್ರೀ ರಾಜಕುಮಾರ ಟಾಕಳೆ ನ‌ನ್ನ ಗಂಡ, ಆತನೇ ವಿಡಿಯೋ ವೈರಲ್ ಮಾಡಿದ್ದಾನೆ ಎಂದಿದ್ದಳು. ಬಳಿಕ ಬೆಂಗಳೂರಿಗೆ ತೆರಳಿದ್ದ ನವ್ಯಶ್ರೀ ಮತ್ತೆ ಬೆಳಗಾವಿಗೆ ಆಗಮಿಸಿ ರಾಜಕುಮಾರ ಟಾಕಳೆ ವಿರುದ್ಧ ಎಪಿಎಂಸಿ ಪೊಲೀಸ್ ಠಾಣೆಗೆ ಪ್ರತಿದೂರು ನೀಡಿದ್ದಾಳೆ. 

ತೋಟಗಾರಿಕೆ ಇಲಾಖೆ ಸಹಾಯಕ ನಿರ್ದೇಶಕ ರಾಜಕುಮಾರ ಟಾಕಳೆ ವಿರುದ್ಧ ಐಪಿಸಿ ಸೆಕ್ಷನ್ 1860 (U/s-342, 354, 366, 376(2)(n), 312, 201, 420, 504, 506, 509) ಐಟಿ ಆ್ಯಕ್ಟ್ 2000(U/s-66(E) 67, 67(ಎ) ರಡಿ ಎಪಿಎಂಸಿ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.

ನನ್ನ ವಿರುದ್ಧದ ಷಡ್ಯಂತ್ರದ ಹಿಂದೆ ಚೆನ್ನಪಟ್ಟಣದ ಮಹಾನಾಯಕ ಇದ್ದಾನೆ: ನವ್ಯಶ್ರೀ ಬಾಂಬ್

ಅಷ್ಟಕ್ಕೂ ನವ್ಯಶ್ರೀ ನೀಡಿದ ದೂರಿನಲ್ಲಿ ಏನಿದೆ?

12 ಪುಟಗಳ ಸುದೀರ್ಘ ದೂರು ನೀಡಿರುವ ನವ್ಯಶ್ರೀ, 'ತನಗೆ ಮದುವೆಯಾಗಿದ್ದರೂ ಅದನ್ನು ಬಚ್ಚಿಟ್ಟು ಮೋಸ ಮಾಡಿ ಪುಸಲಾಯಿಸಿ ಮದುವೆಯಾಗಿದ್ದಾರೆ. ಬಲವಂತವಾಗಿ ಮೇಲಿಂದ ಮೇಲೆ ಲೈಂಗಿಕ ಕೃತ್ಯಕ್ಕೆ ಬಳಸಿಕೊಂಡು ಗರ್ಭಿಣಿ ಮಾಡಿ ಗರ್ಭಪಾತ ಮಾಡಿಸಿದ್ದಾರೆ. 

ಮನೆಯಲ್ಲೇ ಕೂಡಿಹಾಕಿ ದೈಹಿಕ ಹಲ್ಲೆ ನಡೆಸಿ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. ಅಪಹರಣ ಮಾಡಿ ಚಾಕು ತೋರಿಸಿ ಹೆದರಿಸಿ ತಮಗೆ ಬೇಕಾದಂತೆ ವಿಡಿಯೋ ಹೇಳಿಕೆ ಮಾಡಿಸಿಕೊಂಡಿದ್ದಾರೆ. 

ಖಾಲಿ ಪತ್ರಕ್ಕೆ ಸಹಿ ಹಾಗೂ ಬೆರಳಚ್ಚು ಪಡೆದಿದ್ದಾರೆ. ಆತನ ಜೊತೆ ಇರುವ ವಿಡಿಯೋ ಭಾವಚಿತ್ರಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟು ಮಾನ ಹಾನಿ ಮಾಡಿ ಅಪಮಾನ ಮಾಡಿದ್ದಲ್ಲದೇ ತನ್ನ ಮೊಬೈಲ್ ಕಸಿದುಕೊಂಡು ಮದುವೆ ಆಗಿದ್ದ ಫೋಟೋಗಳನ್ನು ನಾಶ ಪಡಿಸಿದ್ದಾರೆ' ಎಂದು ಆರೋಪಿಸಿದ್ದಾರೆ.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಚಿಕ್ಕಮಗಳೂರು ಕಾಂಗ್ರೆಸ್ ಕಾರ್ಯಕರ್ತ ಗಣೇಶ್ ಗೌಡ ಹಂತಕರನ್ನು ಸುಮ್ಮನೆ ಬಿಡಲ್ಲ: ಸಿಎಂ ಡಿಸಿಎಂ
ಮಧುಗಿರಿ: ಕದ್ದ ಎಟಿಎಂ ಭಾರ ಇದೆ ಎಂದು ರಸ್ತೆಯಲ್ಲೇ ಬಿಟ್ಟು ಹೋದರು