ಪತಿಯೊಂದಿಗೆ ವಿಡಿಯೋ ಕಾಲ್‌ಲ್ಲಿ ಮಾತಾಡುತ್ತಲೇ ಆತ್ಮಹತ್ಯೆ ಮಾಡಿಕೊಂಡ ಪತ್ನಿ

Published : Aug 12, 2022, 05:53 PM ISTUpdated : Aug 12, 2022, 06:15 PM IST
ಪತಿಯೊಂದಿಗೆ ವಿಡಿಯೋ ಕಾಲ್‌ಲ್ಲಿ ಮಾತಾಡುತ್ತಲೇ ಆತ್ಮಹತ್ಯೆ ಮಾಡಿಕೊಂಡ ಪತ್ನಿ

ಸಾರಾಂಶ

Crime News: ವಿದೇಶದಲ್ಲಿರುವ ಪತಿಯೊಂದಿಗೆ ವಿಡಿಯೋ ಕಾಲ್‌ನಲ್ಲಿ ಮಾತನಾಡುತ್ತಿದ್ದ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ  ದಾರುಣ ಘಟನೆ ಕನ್ಯಾಕುಮಾರಿಯಲ್ಲಿ ನಡೆದಿದೆ

ನಾಗರಕೋಯಿಲ್ (ಆ. 3): ವಿದೇಶದಲ್ಲಿರುವ ಪತಿಯೊಂದಿಗೆ ವಿಡಿಯೋ ಕಾಲ್‌ಲ್ಲಿ ಮಾತನಾಡುತ್ತಿದ್ದ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ  ದಾರುಣ ಘಟನೆ  ತಮಿಳುನಾಡಿನ ಕನ್ಯಾಕುಮಾರಿಯಲ್ಲಿ ನಡೆದಿದೆ. ಕೊಟ್ಟಾರಂ ಮೂಲದ ಜ್ಞಾನಭಾಗ್ಯ (33) ಕೊಠಡಿಯೊಳಗೆ ಶವವಾಗಿ ಪತ್ತೆಯಾಗಿದ್ದಾರೆ. ಮಹಿಳೆ ಆತ್ಮಹತ್ಯೆ ಮಾಡಿಕೊಳ್ಳುವುದನ್ನು ಕಂಡ ಆಕೆಯ ಪತಿ ಸೆಂಥಿಲ್ ಸಂಬಂಧಿಕರಿಗೆ ಮಾಹಿತಿ ನೀಡಿದ್ದು, ಸಂಬಂಧಿಕರು ಬಾಗಿಲು ಮುರಿದು ಒಳಪ್ರವೇಶಿಸಿದ್ದಾರೆ. ಆದರೆ ಆಕೆಯ ಜೀವ ಉಳಿಸಲು ಸಾಧ್ಯವಾಗಲಿಲ್ಲ. ಪತಿಯ ಶಂಕಿತ ಅನಾರೋಗ್ಯವೇ ಆತ್ಮಹತ್ಯೆಗೆ ಕಾರಣ ಎಂದು ಪೊಲೀಸರನ್ನು ಉಲ್ಲೇಖಿಸಿ ವಿವಿಧ ಮಾಧ್ಯಮಗಳು ವರದಿ ಮಾಡಿವೆ.

ಪೆರಿಯವಿಲಾ ಮೂಲದ ಸೆಂಥಿಲ್ ಸಿಂಗಾಪುರದಲ್ಲಿ ಕೆಲಸ ಮಾಡುತ್ತಿದ್ದರು. ಅವರು ಎಂಟು ವರ್ಷಗಳ ಹಿಂದೆ ವಿವಾಹವಾದರು. ಜ್ಞಾನಭಾಗ್ಯ ಮತ್ತು ಸೆಂಥಿಲ್ ಅವರದ್ದು ಪ್ರೇಮ ವಿವಾಹ. ದಂಪತಿಗೆ ಇಬ್ಬರು ಮಕ್ಕಳಿದ್ದಾರೆ. ಆದರೆ ಮದುವೆಯ ಕೆಲ ದಿನಗಳ ನಂತರ ಪತಿ ಹೆಂಡತಿಯನ್ನು ಅನುಮಾನಿಸಲು ಪ್ರಾರಂಭಿಸಿದ್ದ. ಈ ವಿಚಾರವಾಗಿ ಇಬ್ಬರ ನಡುವೆ ನಿತ್ಯ ಜಗಳ ನಡೆಯುತ್ತಿತ್ತು ಎನ್ನುತ್ತಾರೆ ಸಂಬಂಧಿಕರು. ಪತಿಯ ಅನಾರೋಗ್ಯದ ಹಿನ್ನೆಲೆಯಲ್ಲಿ ಮಾನಸಿಕ ಹಿಂಸೆಯಿಂದ ಜ್ಞಾನಭಾರತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಸಂಬಂಧಿಕರು ಆರೋಪಿಸಿದ್ದಾರೆ.

ಕೊಟ್ಟಾರಂ ಪಂಚಾಯತ್ ಕಚೇರಿಯಲ್ಲಿ ಜ್ಞಾನಭಾಗ್ಯ ತಾತ್ಕಾಲಿಕ ಉದ್ಯೋಗಿಯಾಗಿದ್ದರು. ಪ್ರತಿದಿನ ಪತಿಯೊಂದಿಗೆ ವಿಡಿಯೋ ಕಾಲ್ ನಲ್ಲಿ ಮಾತನಾಡುತ್ತಿದ್ದರು. ನಿನ್ನೆ ರಾತ್ರಿ ವಿಡಿಯೋ ಕಾಲ್ ಮಾಡುವಾಗ ಸಮಸ್ಯೆ ಶುರುವಾಗಿದೆ. ಇಬ್ಬರು ಮಕ್ಕಳನ್ನು ಮಲಗಿಸಿದ ನಂತರ ಜ್ಞಾನಭಾಗ್ಯ ಪತಿಗೆ ವಿಡಿಯೋ ಕಾಲ್ ಮಾಡಿದ್ದಾಳೆ. 

ಅರುಂಧತಿ ಸಿನಿಮಾದಿಂದ ಪ್ರಭಾವಿತನಾಗಿ ಆತ್ಮಹತ್ಯೆಗೆ ಯತ್ನ, ಚಿಕಿತ್ಸೆ ಫಲಕಾರಿಯಾಗದೆ ಸಾವು!

ಇದೇ ವೇಳೆ ಸೆಂಥಿಲ್ ತನ್ನ ಪತ್ನಿಯೊಂದಿಗೆ ಕೋಣೆಯಲ್ಲಿ ಬೇರೊಬ್ಬರು ಇದ್ದರು ಎಂದು ಆರೋಪಿಸಿದ್ದಾರೆ. ಆಗ ಇಬ್ಬರ ನಡುವೆ ಜಗಳವಾಗಿದೆ. ವರದಿಯ ಪ್ರಕಾರ, ಕೋಣೆಯ ಸಂಪೂರ್ಣ ದೃಶ್ಯವನ್ನು ಕ್ಯಾಮೆರಾದಲ್ಲಿ ತೋರಿಸಲು ಸೆಂಥಿಲ್ ಒತ್ತಾಯಿಸಿದ್ದು ಪತ್ನಿಯನ್ನು ಮಾನಸಿಕವಾಗಿ ಕುಗ್ಗಿಸಿದೆ.

ತಾನು ಮತ್ತು ತನ್ನ ಮಕ್ಕಳು ಮಾತ್ರ ಕೊಠಡಿಯಲ್ಲಿದ್ದೇವೆ ಎಂದು ಹಲವು ಬಾರಿ ಹೇಳಿದ್ದರೂ, ಮಲಗುವ ಕೋಣೆ ಸೇರಿದಂತೆ ಇತರ ಕೋಣೆಗಳನ್ನು ತೋರಿಸಲು ಕೇಳಿದಾಗ ಮಹಿಳೆ ತನ್ನ ಪ್ರಾಣವನ್ನು ತೆಗೆದುಕೊಂಡಿದ್ದಾಳೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ. ಸೆಂಥಿಲ್ ಏನು ಹೇಳಿದರೂ ಕೇಳದಿದ್ದಾಗ ಮಹಿಳೆ ಬೆಡ್ ರೂಮಿನಲ್ಲಿ ಕ್ಯಾಮೆರಾ ಆಫ್ ಮಾಡದೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಜ್ಞಾನಭಾರತಿ ಅವರಿಗೆ ಅನೈತಿಕ ಸಂಬಂಧವಿದೆ ಎಂದು ಸೆಂಥಿಲ್ ಶಂಕಿಸಿದ್ದಾರೆ ಎಂದು ಸಂಬಂಧಿಕರು ಆರೋಪಿಸಿದ್ದಾರೆ. ಮಹಿಳೆ ಇತರ ಪುರುಷರೊಂದಿಗೆ ಸಂವಹನ ನಡೆಸುವುದನ್ನು ಸೆಂಥಿಲ್ ವಿರೋಧಿಸಿದ್ದ. ಈ ವಿಚಾರವಾಗಿ ದಂಪತಿ ನಡುವೆ ನಿತ್ಯ ಜಗಳ ನಡೆಯುತ್ತಿತ್ತು ಎಂದು ಸಂಬಂಧಿಕರು ದೂರಿದ್ದಾರೆ. ಮಹಿಳೆ ಸಾವು ಪ್ರಕರಣ ದಾಖಲಾಗಿದ್ದು, ತನಿಖೆ ಪ್ರಗತಿಯಲ್ಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಥಾಯ್ಲೆಂಡ್‌ನಿಂದ ರಾಜ್ಯಕ್ಕೆ ಹೆಚ್ಚು ಹೈಡ್ರೋ ಗಾಂಜಾ!
ಖ್ಯಾತ ಸ್ಟಾರ್ ನಟನಿಗೆ ಬಿಷ್ಟೋಯ್ ಗ್ಯಾಂಗ್ ಬೆದರಿಕೆ! ಆತಂಕದಲ್ಲಿರುವ ಫ್ಯಾನ್ಸ್, ಏನಾಗ್ತಿದೆ ಅಲ್ಲೀಗ?