ಇನ್‌ಸ್ಟಾಗ್ರಾಂನಲ್ಲಿ ಸಿಕ್ಕ ಮಾಜಿ ಪ್ರಿಯಕರ: ಪ್ರೀತಿಸಿ ಮದುಯೆಯಾಗಿದ್ದ ಗಂಡನ ಕಥೆ ಮುಗಿಸಿದ ಐನಾತಿ ಹೆಂಡ್ತಿ..!

By Girish GoudarFirst Published Jul 30, 2024, 11:16 AM IST
Highlights

ಕಳೆದ 2 ತಿಂಗಳ ಹಿಂದೆ ಹರ್ಷಿತಾ ಮನೆಬಿಟ್ಟು ಗುಂಡನ ಜೊತೆ ಪರಾರಿಯಾಗಿದ್ದಳು. ಈ ಸಂಬಂಧ ಪ್ರಕಾಶ್ ಪೊಲೀಸ್ ಠಾಣೆಗೆ ದೂರು ನೀಡಿದ್ದನು. ಬಳಿಕ ಹರ್ಷಿತಾ ಮನೆಗೆ ವಾಪಾಸ್ಸಾಗಿದ್ದಳು. ಆದ್ರೆ ಒಳಗೊಳಗೇ ಗಂಡನ ಕೊಲೆಗೆ ಸ್ಕೆಚ್ ಹಾಕಿದ್ದಳು ಪತ್ನಿ ಹರ್ಷಿತಾ. 

ತುಮಕೂರು(ಜು.30):  ಪ್ರಿಯತಮನಿಗಾಗಿ ಪ್ರೀತಿಸಿ ಮದುವೆಯಾಗಿದ್ದ ಗಂಡನನ್ನೇ ಪತ್ನಿ ಕೊಲೆ ಮಾಡಿಸಿದ ಘಟನೆ  ಜಿಲ್ಲೆಯ ಕೊರಟಗೆರೆ ತಾಲೂಕಿನ ಮಲ್ಲೆಕಾವು ಗ್ರಾಮದ ಬಳಿ ಇಂದು(ಮಂಗಳವಾರ) ನಡೆದಿದೆ.  ಪ್ರಕಾಶ್ (30) ಮೃತ ದುರ್ದೈವಿ, ಹರ್ಷಿತಾ (28) ಗಂಡನನ್ನೇ ಕೊಲೆ ಮಾಡಿಸಿದ ಹೆಂಡತಿ. 

ಕಲಬುರ್ಗಿ ಜಿಲ್ಲೆಯ ಚಿಂಚುಲಿ ಮೂಲದವನಾಗಿರೋ ಪ್ರಕಾಶ್ ಮೂರು ವರ್ಷದ ಹಿಂದೆ ಹರ್ಷಿತಾಗೆ ಇನ್ ಸ್ಟಾಗ್ರಾಂ ನಲ್ಲಿ ಪರಿಚಯವಾಗಿತ್ತು. ಬಳಿಕ ಪರಸ್ಪರ ಪ್ರೀತಿಸಿ ಇಬ್ಬರೂ ಮದುವೆಯಾಗಿದ್ದರು. ಮದುವೆಯ ಬಳಿಕ ಪತ್ನಿಯ ತವರಿನಲ್ಲೇ ವಾಸವಿದ್ದ ಪ್ರಕಾಶ್. ದಂಪತಿಗೆ ಒಂದೂವರೆ ವರ್ಷದ ಮಗುವೂ ಇತ್ತು. ಆದ್ರೆ ಇತ್ತೀಚಿಗೆ ಹರ್ಷಿತಾಳಿಗೆ ಇನ್ ಸ್ಟಾಗ್ರಾಂನಲ್ಲಿ ಮಾಜಿ ಪ್ರಿಯತಮ ಗುಂಡ ಸಿಕ್ಕಿದ್ದನು. 

Latest Videos

ಯಾದಗಿರಿ: 7 ಲಕ್ಷ ಸಾಲ ಮಾಡಿಕೊಂಡಿದ್ದ ಅನ್ನದಾತ, ಬ್ಯಾಂಕ್‌ ನೋಟಿಸ್‌ಗೆ ಹೆದರಿ ರೈತ ಆತ್ಮಹತ್ಯೆ..!

ಈ ವೇಳೆ ಹರ್ಷಿತಾ ಮತ್ತು ಗುಂಡ ಇಬ್ಬರಿಗೂ ಮರು ಪ್ರೇಮಾಂಕುರವಾಗಿದೆ.  ಕಳೆದ 2 ತಿಂಗಳ ಹಿಂದೆ ಹರ್ಷಿತಾ ಮನೆಬಿಟ್ಟು ಗುಂಡನ ಜೊತೆ ಪರಾರಿಯಾಗಿದ್ದಳು. ಈ ಸಂಬಂಧ ಪ್ರಕಾಶ್ ಪೊಲೀಸ್ ಠಾಣೆಗೆ ದೂರು ನೀಡಿದ್ದನು. ಬಳಿಕ ಹರ್ಷಿತಾ ಮನೆಗೆ ವಾಪಾಸ್ಸಾಗಿದ್ದಳು. ಆದ್ರೆ ಒಳಗೊಳಗೇ ಗಂಡನ ಕೊಲೆಗೆ ಸ್ಕೆಚ್ ಹಾಕಿದ್ದಳು ಪತ್ನಿ ಹರ್ಷಿತಾ. 

ಗಂಡನ ಕೊಲೆಗಾಗಿ ಹರ್ಷಿತಾ ಸಹೋದರ ಸೋಮಶೇಖರ್ ಹಾಗೂ ಪ್ರಿಯತಮ ಗುಂಡನಿಗೆ ಸುಪಾರಿ ನೀಡಿದ್ದಳು. ಇದರಂತೆ ಸೋಮಶೇಖರ್ ನಂಬಿಸಿ ಪ್ರಕಾಶ್ ನನ್ನ ಕರೆಸಿಕೊಂಡಿದ್ದನು. ಸೋಮಶೇಖರ್ ಜೊತೆಗೆ ಪ್ರಕಾಶ್ ಗಾಗಿ  ಗುಂಡ ಮತ್ತು ಆತನ ಸ್ನೇಹಿತ ರಂಗಸ್ವಾಮಯ್ಯ ಕಾಡುಕುಳಿತಿದ್ದರು. ಪ್ರಕಾಶ್ ಬರುತ್ತಿದ್ದಂತೆ ಆತನ ಮೇಲೆ ಆರೋಪಿಗಳು ಹಲ್ಲೆ ನಡೆಸಿದ್ದರು. ಡ್ರ್ಯಾಗರ್ ನಿಂದ ಎದೆಭಾಗಕ್ಕೆ ಚುಚ್ಚಿ ಪಾಪಿಗಳು ಕೊಲೆ ಮಾಡಿದ್ದಾರೆ. 

ಬಳಿಕ ಅಪಘಾತದ ರೀತಿಯಲ್ಲಿ ಬಿಂಬಿಸಲು ಆರೋಪಿಗಳು ಹೊರಟಿದ್ದರು.  ಆದ್ರೆ ಎದೆಭಾಗಕ್ಕೆ ಚುಚ್ಚಿದ ಗಾಯ ಪತ್ತೆ ಹಿನ್ನೆಲೆಯಲ್ಲಿ ಇದು ಕೊಲೆ ಎಂದು ಖಚಿತವಾಗಿದೆ. ಸದ್ಯ ಕೊರಟಗೆರೆ ಪೊಲೀಸರಿಂದ ಹರ್ಷಿತಾ, ಸೋಮಶೇಖರ್, ರಂಗಸ್ವಾಮಯ್ಯನನ್ನ ಬಂಧನವಾಗಿದೆ. ಗುಂಡನಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ.  ಕೊರಟಗೆರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. 

click me!