
ಹುಣಸೂರು(ಸೆ.12): ಮಾಡಿದ್ದ ಸಾಲ ತೀರಿಸಲು ಸರ್ಕಾರದ ಪರಿಹಾರ ಪಡೆಯುವ ಸಲುವಾಗಿ ಪತಿಯನ್ನೇ ವಿಷ ಹಾಕಿ ಸಾಯಿಸಿ, ವನ್ಯಪ್ರಾಣಿಗೆ ಬಲಿಯಾಗಿದ್ದಾರೆಂದು ಬಿಂಬಿಸಲು ಹೋದ ಪತ್ನಿ ಸಿಕ್ಕಿ ಬಿದ್ದಿರುವ ಘಟನೆ ಮೈಸೂರು ಜಿಲ್ಲೆಯ ಹುಣಸೂರಿನ ಚಿಕ್ಕ ಹೆಜ್ಜೂರಿನಲ್ಲಿ ನಡೆದಿದೆ.
ನಾಗರಹೊಳೆ ಉದ್ಯಾನದಂಚಿನ ತೋಟವೊಂದರಲ್ಲಿ ಕಾವಲುಗಾರರಾಗಿ ಕೆಲಸ ನಿರ್ವಹಿಸುತ್ತಿದ್ದ ಮಂಡ್ಯದ ವೆಂಕಟಸ್ವಾಮಿ (45) ಕೊಲೆ ಆದವರು, ಈತನ ಪತ್ನಿ ಸೊಲ್ಲಾಪುರಿಯನ್ನು ಪೊಲೀಸರು ಬಂಧಿಸಿದ್ದಾರೆ.
ವೆಂಕಟಸ್ವಾಮಿ ಹಾಗೂ ಸೊಲ್ಲಾಪುರಿ ತಮ್ಮೂರಲ್ಲಿ ಮನೆ ಕಟ್ಟಲು ₹15 ಲಕ್ಷ ಸಾಲ ಮಾಡಿದ್ದರು. ಸಾಲ ತೀರಿಸುವ ವಿಚಾರಕ್ಕೆ ಪತಿ-ಪತ್ನಿಯ ನಡುವೆ ಜಗಳವಾಗುತ್ತಿತ್ತು. ವನ್ಯಜೀವಿಗಳ ದಾಳಿಗೆ ಒಳಗಾದಲ್ಲಿ ಸರ್ಕಾರದಿಂದ ₹15 ಲಕ್ಷ ಪರಿಹಾರ ಸಿಗಲಿದೆ ಮಾಹಿತಿ ಪಡೆದಿದ್ದ ಈಕೆ, ಮಂಗಳವಾರ ರಾತ್ರಿ ಕುಡಿದು ಬಂದಿದ್ದ ಗಂಡನಿಗೆ ಮುದ್ದೆಯಲ್ಲಿ ಕ್ರಿಮಿನಾಶಕ ಹಾಕಿದ್ದಾಳೆ.
ಇದನ್ನೂ ಓದಿ: ಹುಡುಗಿ ವಿಚಾರಕ್ಕೆ ಗಲಾಟೆ, ಸ್ಮೇಹಿತನನ್ನ ರೈಲಿಗೆ ತಳ್ಳೋಕೆ ಹೋದವನೇ ಕೊಲೆ, ರೀಲ್ಸ್ ಮಾಡಲು ಹೋಗಿ ಸತ್ತನೆಂದ ಸ್ನೇಹಿತ!
ಬೆಳಗ್ಗೆ ವೇಳೆಗೆ ಮೃತಪಟ್ಟಿದ್ದ ಪತಿಯ ಶವವನ್ನು ಪೆಟ್ರೋಲ್ ಹಾಕಿ ಸುಟ್ಟಿದ್ದಾಳೆ. ಮೃತ ದೇಹ ಅರೆಬರೆ ಬೆಂದಿದ್ದನ್ನು ನೋಡಿ ಗಾಬರಿಗೊಂಡ ಆಕೆ ತಿಪ್ಪೆಯಲ್ಲಿ ಮುಚ್ಚಿ, ಗಂಡ ನಾಪತ್ತೆ ಆಗಿದ್ದಾನೆ, ಯಾವುದೋ ಕಾಡು ಪ್ರಾಣಿ ಹೊತ್ಯೊಯ್ದಿರಬೇಕು ಎಂದು ಠಾಣೆಗೆ ದೂರು ನೀಡಿದ್ದಾಳೆ. ಪೊಲೀಸರು ಸ್ಥಳ ಪರಿಶೀಲನೆಗೆ ಬಂದಾಗ ಈಕೆಯ ವರ್ತನೆಯಿಂದ ಅನುಮಾನ ಬಂದು ವಿಚಾರಣೆಗೆ ಒಳಪಡಿಸಿದ್ದಾರೆ. ಆಗ ತಾನು ಸಾಲ ತೀರಿಸಲು ಮಾಡಿದ ಪ್ಲಾನ್ ಇದು ಎಂದು ಆಕೆ ತಪ್ಪೊಪ್ಪಿಕೊಂಡಿದ್ದಾಳೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ